<p><strong>ಬೆಂಗಳೂರು</strong>: ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರಂಭವಾಗಿರುವ ಮನೆ–ಮನೆ ಸಮೀಕ್ಷೆ ಕಾರ್ಯಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಚಾಲನೆ ನೀಡಿದರು.</p>.<p>‘ಕೊರೊನಾ ಸೋಂಕು ನಿಯಂತ್ರಣಕ್ಕೆ ನಾಗರಿಕರನ್ನು ಒಳಗೊಂಡ ಕಾರ್ಯಪಡೆ ರಚಿಸಬೇಕು ಎಂಬ ಸರ್ಕಾರದ ನಿರ್ಧಾರದ ಮೇರೆಗೆ ರಾಜ್ಯದಲ್ಲೇ ಮೊದಲ ಬಾರಿಗೆ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಚಾಲನೆ ನೀಡಲಾಗಿದೆ’ ಎಂದು ಸುಧಾಕರ್ ಹೇಳಿದರು.</p>.<p>‘ಸ್ವಯಂ ಪ್ರೇರಣೆಯಿಂದ ಕಾರ್ಯಪಡೆಯಲ್ಲಿ ಭಾಗಿಯಾಗಿರುವ ನಾಗರಿಕರು ಬೂತ್ ಮಟ್ಟದಲ್ಲೇ ಸೋಂಕು ನಿಗ್ರಹಕ್ಕೆ ಎಚ್ಚರ ವಹಿಸಬೇಕು’ಎಂದು ತಿಳಿಸಿದರು.</p>.<p>ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿರ್ಯಾಪಿಡ್ ಆ್ಯಂಟಿಜನ್ ಪರೀಕ್ಷೆಗೂ ಸಚಿವರು ಚಾಲನೆ ನೀಡಿದರು.ಶಾಸಕ ಎಸ್.ಆರ್.ವಿಶ್ವನಾಥ್ ಇದ್ದರು.</p>.<p><strong>ರಾಜಾನುಕುಂಟೆ ಗ್ರಾಮದಲ್ಲೂ ಸಮೀಕ್ಷೆ<br />ಹೆಸರಘಟ್ಟ:</strong> ಸಮೀಪದ ರಾಜಾನುಕುಂಟೆ ಗ್ರಾಮದಲ್ಲೂ ಮನೆ ಮನೆ ಸಮೀಕ್ಷೆ ಕಾರ್ಯಕ್ಕೆ ಶಾಸಕ ಎಚ್.ಎಸ್. ವಿಶ್ವನಾಥ್ ಚಾಲನೆ ನೀಡಿದರು.</p>.<p>‘15 ಸದಸ್ಯರಿರುವ ಸ್ವಯಂ ಸೇವಕರ ತಂಡವು ಪ್ರತಿ ಮನೆಗೆ ತೆರಳಿ ಆರೋಗ್ಯ ಪರೀಕ್ಷೆ ನಡೆಸಲಿದೆ.ಎಲ್ಲಾ ವಿವರಗಳನ್ನು ಪರಿಶೀಲಿಸಿ ಅಗತ್ಯ ಇದ್ದವರಿಗೆ ಚಿಕಿತ್ಸೆ ಕೊಡಿಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರಂಭವಾಗಿರುವ ಮನೆ–ಮನೆ ಸಮೀಕ್ಷೆ ಕಾರ್ಯಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಚಾಲನೆ ನೀಡಿದರು.</p>.<p>‘ಕೊರೊನಾ ಸೋಂಕು ನಿಯಂತ್ರಣಕ್ಕೆ ನಾಗರಿಕರನ್ನು ಒಳಗೊಂಡ ಕಾರ್ಯಪಡೆ ರಚಿಸಬೇಕು ಎಂಬ ಸರ್ಕಾರದ ನಿರ್ಧಾರದ ಮೇರೆಗೆ ರಾಜ್ಯದಲ್ಲೇ ಮೊದಲ ಬಾರಿಗೆ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಚಾಲನೆ ನೀಡಲಾಗಿದೆ’ ಎಂದು ಸುಧಾಕರ್ ಹೇಳಿದರು.</p>.<p>‘ಸ್ವಯಂ ಪ್ರೇರಣೆಯಿಂದ ಕಾರ್ಯಪಡೆಯಲ್ಲಿ ಭಾಗಿಯಾಗಿರುವ ನಾಗರಿಕರು ಬೂತ್ ಮಟ್ಟದಲ್ಲೇ ಸೋಂಕು ನಿಗ್ರಹಕ್ಕೆ ಎಚ್ಚರ ವಹಿಸಬೇಕು’ಎಂದು ತಿಳಿಸಿದರು.</p>.<p>ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿರ್ಯಾಪಿಡ್ ಆ್ಯಂಟಿಜನ್ ಪರೀಕ್ಷೆಗೂ ಸಚಿವರು ಚಾಲನೆ ನೀಡಿದರು.ಶಾಸಕ ಎಸ್.ಆರ್.ವಿಶ್ವನಾಥ್ ಇದ್ದರು.</p>.<p><strong>ರಾಜಾನುಕುಂಟೆ ಗ್ರಾಮದಲ್ಲೂ ಸಮೀಕ್ಷೆ<br />ಹೆಸರಘಟ್ಟ:</strong> ಸಮೀಪದ ರಾಜಾನುಕುಂಟೆ ಗ್ರಾಮದಲ್ಲೂ ಮನೆ ಮನೆ ಸಮೀಕ್ಷೆ ಕಾರ್ಯಕ್ಕೆ ಶಾಸಕ ಎಚ್.ಎಸ್. ವಿಶ್ವನಾಥ್ ಚಾಲನೆ ನೀಡಿದರು.</p>.<p>‘15 ಸದಸ್ಯರಿರುವ ಸ್ವಯಂ ಸೇವಕರ ತಂಡವು ಪ್ರತಿ ಮನೆಗೆ ತೆರಳಿ ಆರೋಗ್ಯ ಪರೀಕ್ಷೆ ನಡೆಸಲಿದೆ.ಎಲ್ಲಾ ವಿವರಗಳನ್ನು ಪರಿಶೀಲಿಸಿ ಅಗತ್ಯ ಇದ್ದವರಿಗೆ ಚಿಕಿತ್ಸೆ ಕೊಡಿಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>