‘ಚೆನ್ನವೀರ ಸ್ವಾಮಿ ಅವರು ಬೆಳಿಗ್ಗೆ 9.30ರ ಸುಮಾರಿಗೆ ಮನೆಯಿಂದ ಗಾರ್ಮೆಂಟ್ಸ್ಗೆ ತೆರಳಿದ್ದರು. 10.30ರ ಸುಮಾರಿಗೆ ಮನೆ ಪ್ರವೇಶಿಸಿರುವ ಅಪರಿಚಿತ ವ್ಯಕ್ತಿಯೊಬ್ಬ ಮಧ್ಯಾಹ್ನ 2 ಗಂಟೆಗೆ ಮನೆಯಿಂದ ಹೊರಬಂದಿದ್ದಾನೆ. ಆತನೇ ಕೊಲೆ ಮಾಡಿರುವ ಸಾಧ್ಯತೆ ಇದೆ. ಆತ ಮನೆಯಲ್ಲಿದ್ದ ಚಿನ್ನಾಭರಣಗಳನ್ನೂ ದೋಚಿಕೊಂಡು ಹೋಗಿದ್ದಾನೆ. ಬಡಾವಣೆಯಲ್ಲಿರುವ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದ್ದು, ಶೀಘ್ರವೇ ಆತನನ್ನು ಬಂಧಿಸಲಾಗುತ್ತದೆ’ ಎಂದೂ ಮಾಹಿತಿ ನೀಡಿದ್ದಾರೆ.