‘ಸಿಬ್ಬಂದಿಯನ್ನೇ ಅವಾಚ್ಯ ಶಬ್ದಗಳಿಂದ ಬೈಯಲಾರಂಭಿಸಿದ್ದ ಆರೋಪಿಗಳು, ‘ಬೆಂಗಳೂರಿನಲ್ಲಿ ರಾತ್ರಿ ಹೊತ್ತು ಓಡಾಡಲು ನಮಗೆ ಸ್ವಾತಂತ್ರ್ಯವಿಲ್ಲವೆ’ ಎಂದು ಪ್ರಶ್ನಿಸಿದ್ದರು. ಆರೋಪಿಯೊಬ್ಬ, ‘ಪೊಲೀಸರದ್ದು ಬಹಳ ಆಗಿದೆ. ಒಬ್ಬನನ್ನು ಕೊಂದು ಹಾಕಿದರೆ, ನಗರದಲ್ಲಿ ಒಳ್ಳೆಯ ಹೆಸರು ಬರುತ್ತದೆ. ಆಮೇಲೆ ನಮ್ಮದೇ ಹವಾ’ ಎಂದು ಹೇಳಿದ್ದ. ನಂತರ, ಮಾತಿಗೆ ಮಾತು ಬೆಳೆದಿತ್ತು’ ಎಂದು ಅಧಿಕಾರಿ ಮಾಹಿತಿ ನೀಡಿದರು.