‘ರಂಗೋಲಿ ಹಾಕಿರದ ಹಾಗೂ ಅಂಗಳದಲ್ಲಿ ಕಸ ಬಿದ್ದಿರುತ್ತಿದ್ದ ಮನೆಗಳನ್ನು ಗುರುತಿಸಿ ಆರೋಪಿ ಕೃತ್ಯ ಎಸಗುತ್ತಿದ್ದ. ಕಾಮಾಕ್ಷಿಪಾಳ್ಯ ಪೊಲೀಸರು ಪ್ರಕರಣವೊಂದರಲ್ಲಿ ಆರೋಪಿಯನ್ನು ಕೆಲ ತಿಂಗಳ ಹಿಂದೆಯಷ್ಟೇ ಬಂಧಿಸಿದ್ದರು. ಜೈಲಿಗೆ ಹೋಗಿದ್ದ ಆರೋಪಿ, ಜಾಮೀನು ಮೇಲೆ ಹೊರಬಂದು ಪುನಃ ಕೃತ್ಯ ಎಸಗಲಾರಂಭಿಸಿದ್ದ. ಬೇಗೂರು ಠಾಣೆ ವ್ಯಾಪ್ತಿಯಲ್ಲಿ 7 ಕಡೆ ಕಳ್ಳತನ ಮಾಡಿದ್ದ’ ಎಂದರು.