<p><strong>ಬೆಳಗಾವಿ:</strong> ಕೊರೊನಾ ವೈರಾಣು ಸೋಂಕು ಹರಡುವುದನ್ನು ತಡೆಯಲು ಜಿಲ್ಲೆಯಲ್ಲಿ ಇದುವರೆಗೆ ವಿದೇಶದಿಂದ ಬಂದವರು ಸೇರಿದಂತೆ 326 ಜನರ ಮಂದಿ ಮೇಲೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.</p>.<p>ಈ ಪೈಕಿ 281 ಮಂದಿಯನ್ನು ಮನೆಗಳಲ್ಲಿ ಐಸೋಲೇಷನ್ ನಲ್ಲಿ ಇರಿಸಲಾಗಿದೆ. 7 ಮಂದಿ ಆಸ್ಪತ್ರೆಯಲ್ಲಿದ್ದಾರೆ. 33 ಮಂದಿ 14 ದಿನಗಳ ನಿಗಾ ವ್ಯವಸ್ಥೆಯನ್ನು ಪೂರ್ಣಗೊಳಿಸಿದ್ದಾರೆ. 28 ದಿನಗಳ ಐಸೋಲೇಷನ್ ಅನ್ನು ಐವರು ಮುಗಿಸಿದ್ದಾರೆ. ಈವರೆಗೆ 10 ಮಂದಿಯಿಂದ ಗಂಟಲು ದ್ರವದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಐವರ ಮಾದರಿಗಳು ನೆಗೆಟಿವ್ ಬಂದಿದೆ ಎಂದು ಮಾಹಿತಿ ನೀಡಿದ್ದಾರೆ.</p>.<p>ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p>.<p>ಜಿಲ್ಲೆಗೆ ಸೌದಿಅರೇಬಿಯಾದಿಂದ ಬಂದವರೇ ಅತಿ ಹೆಚ್ಚಿದ್ದಾರೆ (165), ಚೀನಾದಿಂದ ಮೂವರು ಬಂದಿದ್ದಾರೆ. ನೇಪಾಳದಿಂದ 36, ಅಮೆರಿಕದಿಂದ 15 ಮಂದಿ ಜಿಲ್ಲೆಗೆ ಮರಳಿದ್ದಾರೆ ಎಂದು ತಿಳಿಸಿದ್ದಾರೆ.</p>.<p><strong>ಕೊರೊನಾ ಸುಳ್ಳು ಸುದ್ದಿ: ವ್ಯಕ್ತಿ ವಿರುದ್ಧ ಪ್ರಕರಣ</strong></p>.<p>'ಗೋವಾಕ್ಕೆ ದುಡಿಯಲು ಹೋಗಿದ್ದ ಐವರು ಕೊರೊನಾ ವೈರಾಣು ಸೋಂಕಿಗೆ ಬಲಿಯಾಗಿದ್ದಾರೆ' ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ ವ್ಯಕ್ತ ವಿರುದ್ಧ ಅಥಣಿ ತಾಲ್ಲೂಕು ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಗೌಡೇಶ ಬಿರಾದಾರ ತುಂಗಳ ಆರೋಪಿ. ವದಂತಿ ಹಬ್ಬಿಸಿ ಸಾರ್ವಜನಿಕರ ನೆಮ್ಮದಿ ಹಾಳು ಮಾಡಿದ ಆರೋಪ ಅವರ ಮೇಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಕೊರೊನಾ ವೈರಾಣು ಸೋಂಕು ಹರಡುವುದನ್ನು ತಡೆಯಲು ಜಿಲ್ಲೆಯಲ್ಲಿ ಇದುವರೆಗೆ ವಿದೇಶದಿಂದ ಬಂದವರು ಸೇರಿದಂತೆ 326 ಜನರ ಮಂದಿ ಮೇಲೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.</p>.<p>ಈ ಪೈಕಿ 281 ಮಂದಿಯನ್ನು ಮನೆಗಳಲ್ಲಿ ಐಸೋಲೇಷನ್ ನಲ್ಲಿ ಇರಿಸಲಾಗಿದೆ. 7 ಮಂದಿ ಆಸ್ಪತ್ರೆಯಲ್ಲಿದ್ದಾರೆ. 33 ಮಂದಿ 14 ದಿನಗಳ ನಿಗಾ ವ್ಯವಸ್ಥೆಯನ್ನು ಪೂರ್ಣಗೊಳಿಸಿದ್ದಾರೆ. 28 ದಿನಗಳ ಐಸೋಲೇಷನ್ ಅನ್ನು ಐವರು ಮುಗಿಸಿದ್ದಾರೆ. ಈವರೆಗೆ 10 ಮಂದಿಯಿಂದ ಗಂಟಲು ದ್ರವದ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಐವರ ಮಾದರಿಗಳು ನೆಗೆಟಿವ್ ಬಂದಿದೆ ಎಂದು ಮಾಹಿತಿ ನೀಡಿದ್ದಾರೆ.</p>.<p>ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p>.<p>ಜಿಲ್ಲೆಗೆ ಸೌದಿಅರೇಬಿಯಾದಿಂದ ಬಂದವರೇ ಅತಿ ಹೆಚ್ಚಿದ್ದಾರೆ (165), ಚೀನಾದಿಂದ ಮೂವರು ಬಂದಿದ್ದಾರೆ. ನೇಪಾಳದಿಂದ 36, ಅಮೆರಿಕದಿಂದ 15 ಮಂದಿ ಜಿಲ್ಲೆಗೆ ಮರಳಿದ್ದಾರೆ ಎಂದು ತಿಳಿಸಿದ್ದಾರೆ.</p>.<p><strong>ಕೊರೊನಾ ಸುಳ್ಳು ಸುದ್ದಿ: ವ್ಯಕ್ತಿ ವಿರುದ್ಧ ಪ್ರಕರಣ</strong></p>.<p>'ಗೋವಾಕ್ಕೆ ದುಡಿಯಲು ಹೋಗಿದ್ದ ಐವರು ಕೊರೊನಾ ವೈರಾಣು ಸೋಂಕಿಗೆ ಬಲಿಯಾಗಿದ್ದಾರೆ' ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದ ವ್ಯಕ್ತ ವಿರುದ್ಧ ಅಥಣಿ ತಾಲ್ಲೂಕು ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಗೌಡೇಶ ಬಿರಾದಾರ ತುಂಗಳ ಆರೋಪಿ. ವದಂತಿ ಹಬ್ಬಿಸಿ ಸಾರ್ವಜನಿಕರ ನೆಮ್ಮದಿ ಹಾಳು ಮಾಡಿದ ಆರೋಪ ಅವರ ಮೇಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>