ಈ ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆ, ಗಣಿ ಮತ್ತು ಖನಿಜ ಕಾಯ್ದೆ–1957 ಹಾಗೂ ಕರ್ನಾಟಕ ಅರಣ್ಯ ನಿಯಮಗಳು– 1967ರ ಅಡಿಯಲ್ಲಿ ಮೊಕದ್ದಮೆ ದಾಖಲಿಸಿ, ಆರೋಪಪಟ್ಟಿಗಳನ್ನು ಸಲ್ಲಿಸಲಾಗಿತ್ತು. ಆದರೆ, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಸದರಿ ಪ್ರಕರಣಗಳ ವಿಚಾರಣೆ ನಡೆಸುತ್ತಿರುವುದನ್ನು ಪ್ರಶ್ನಿಸಿ ಆರೋಪಿಗಳು ಅರ್ಜಿ ಸಲ್ಲಿಸಿದ್ದರು.