ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ.ರಾ.ಬೇಂದ್ರೆ ಸ್ಮೃತಿ ಲೇಖನ ಸ್ಪರ್ಧೆ; ಶೈಲಜ ಹೆಗ್ಡೆಗೆ ಮೊದಲ ಬಹುಮಾನ

Last Updated 17 ಜನವರಿ 2022, 16:16 IST
ಅಕ್ಷರ ಗಾತ್ರ

ಬೆಂಗಳೂರು:ದ.ರಾ.ಬೇಂದ್ರೆ ಕಾವ್ಯ ಕೂಟವು ಪಿಎಚ್‌.ಡಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ‘ದ.ರಾ.ಬೇಂದ್ರೆ ಸ್ಮೃತಿ ಲೇಖನ ಸ್ಪರ್ಧೆ–14’ರಲ್ಲಿ ಮುಂಬೈ ವಿಶ್ವವಿದ್ಯಾಲಯದ ಸಂಶೋಧಕಿ ಶೈಲಜ ಹೆಗ್ಡೆ ಮೊದಲ ಬಹುಮಾನ ಪಡೆದಿದ್ದಾರೆ.

‘ಅವರಿಗೆ ₹5 ಸಾವಿರ ಬಹುಮಾನನೀಡಲಾಗುತ್ತದೆ’ ಎಂದು ಪ್ರಕಟಣೆ ತಿಳಿಸಿದೆ.

‘ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಂಶೋಧಕಿ ಕೆ.ವಿ.ಅನಿತಾ ಎರಡನೇ ಹಾಗೂ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸಂಶೋಧಕಿ ಆಶಾ ಚೌಗಲೆ ಮೂರನೇ ಬಹುಮಾನ ಗಳಿಸಿದ್ದಾರೆ. ಅವರಿಗೆ ಕ್ರಮವಾಗಿ ₹4,000 ಹಾಗೂ ₹3,000 ಬಹುಮಾನ ನೀಡಲಾಗುತ್ತದೆ’ ಎಂದು ಹೇಳಿದೆ.

‘ಹಂಪಿ ಕನ್ನಡ ವಿಶ್ವವಿದ್ಯಾಲಯದ ಜಾನಪದ ಅಧ್ಯಯನ ವಿಭಾಗದ ಸಂಶೋಧಕ ಕುಮಾರ ಯಲಿಬಳ್ಳಿ ಹಾಗೂ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಂಶೋಧಕಿ ಎನ್‌.ರೇಖಾ ಅವರಿಗೆ ಪ್ರೋತ್ಸಾಹಕ ಬಹುಮಾನ ಕೊಡಲಾಗಿದೆ. ಇವರಿಗೆ ತಲಾ ₹2,000 ಸಿಗಲಿದೆ’ ಎಂದು ವಿವರಿಸಲಾಗಿದೆ.

‘ದ.ರಾ.ಬೇಂದ್ರೆ ಅವರ ಜನ್ಮದಿನದಂದು (ಜ.31) ಬಹುಮಾನ ಪ್ರದಾನ ಸಮಾರಂಭವನ್ನು ಆನ್‌ಲೈನ್‌ನಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ದ.ರಾ.ಬೇಂದ್ರೆ ಕಾವ್ಯ ಕೂಟದ ಅಧ್ಯಕ್ಷ ಜಿ.ಕೃಷ್ಣಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT