ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

70 ವರ್ಷದ ಮಹಿಳೆ ಕತ್ತು ಕೊಯ್ದು ₹45 ಲಕ್ಷ ಕಳವು

Last Updated 17 ಆಗಸ್ಟ್ 2020, 5:47 IST
ಅಕ್ಷರ ಗಾತ್ರ

ಬೆಂಗಳೂರು: ಕಾಡುಗೋಡಿ ಠಾಣೆ ವ್ಯಾಪ್ತಿಯ ಮನೆಯೊಂದಕ್ಕೆ ನುಗ್ಗಿದ್ದ ದುಷ್ಕರ್ಮಿಗಳು ಜಯಮ್ಮ (70) ಎಂಬುವರನ್ನು ಕತ್ತು ಕೊಯ್ದು ಕೊಲೆ ಮಾಡಿದ್ದಾರೆ. ಮನೆಯಲ್ಲಿದ್ದ ₹ 45 ಲಕ್ಷ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

‘ಚನ್ನಚಂದ್ರದ ಕಾಳಪ್ಪ ಲೇಔಟ್‌ ನಲ್ಲಿ ಆಗಸ್ಟ್ 12ರಂದು ಈ ಘಟನೆ ನಡೆದಿದೆ. ಮನೆಯಲ್ಲಿ ಜಯಮ್ಮ ಒಬ್ಬರೇ ಇರುವಾಗ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ. ಕೊಲೆ ಹಾಗೂ ದರೋಡೆ ಸಂಬಂಧ ಪತಿ ಅಪ್ಪಯ್ಯಣ್ಣ ದೂರು ನೀಡಿದ್ದಾರೆ’ ಎಂದು ಕಾಡುಗೋಡಿ ಪೊಲೀಸರು ಹೇಳಿದರು. ‘ವಿದ್ಯುತ್ ಬಿಲ್ ಪಾವತಿಸಲೆಂದು ಆ. 12ರಂದು ಬೆಳಿಗ್ಗೆ 10.30ರ ಸುಮಾರಿಗೆ ಅಯ್ಯಪ್ಪಣ್ಣ, ಮನೆಯಿಂದ ಹೊರಗೆ ಹೋಗಿದ್ದರು. ಮಧ್ಯಾಹ್ನ 1.15ರ ಸುಮಾರಿಗೆ ಮನೆಗೆ ವಾಪಸು ಬಂದಿದ್ದರು. ಪತ್ನಿ ಮೃತದೇಹ ರಕ್ತಸಿಕ್ತ ಸ್ಥಿತಿಯಲ್ಲಿ ಇದ್ದದ್ದನ್ನು ಕಂಡಿದ್ದರು.’ ‘ಮನೆಯಲ್ಲಿದ್ದ ಟಿ.ವಿ. ಆನ್‌ ಆಗಿತ್ತು. ಮಂಚದ ಕೆಳಗಿದ್ದ ಕಬ್ಬಿಣದ ಟ್ರಂಕ್‌ಗಳನ್ನು ಹೊರಗೆ ತೆಗೆದು ಎಲ್ಲೆಂ ದರಲ್ಲಿ ಬಿಸಾಡಲಾಗಿತ್ತು. ಅದರಲ್ಲಿದ್ದ ₹ 45 ಲಕ್ಷ ನಗದು ಇರಲಿಲ್ಲ. ಜಯಮ್ಮ ಅವರ ಕತ್ತನ್ನು ಆರೋಪಿಗಳು ಕೊಯ್ದಿ ದ್ದರು. ಪರಿಚಯಸ್ಥರೇ ಶಾಮೀಲಾಗಿ ಕೃತ್ಯ ಎಸಗಿರುವ ಅನುಮಾನ ಇದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT