<p><strong>ಬೆಂಗಳೂರು:</strong> ನಗರದಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಆಟೊ ಚಾಲಕರು ಮೃತಪಟ್ಟಿದ್ದಾರೆ.</p>.<p>ಆಟೊ ಮತ್ತು ಕ್ಯಾಬ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆಟೊ ಚಾಲಕ, ನೀಲಸಂದ್ರ ನಿವಾಸಿ ಸೈಯದ್ ಅಕ್ರಂ ಪಾಷಾ (50) ಮೃತಪಟ್ಟಿದ್ದಾರೆ. ಪ್ರಯಾಣಿಕರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ.</p>.<p>ಸೈಯದ್ ಅಕ್ರಂ ಪಾಷಾ ಶನಿವಾರ ರಾತ್ರಿ ಪ್ರಯಾಣಿಕರನ್ನು ಕೂರಿಸಿಕೊಂಡು ಒಆರ್ಸಿ ರಸ್ತೆಯ ಚೌಟರಿ ಹಾಲ್ ಬಳಿ ಏಕಮುಖ ಸಂಚಾರದ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಆಟೊ ಚಲಾಯಿಸಿದ್ದಾರೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಆಟೊ, ರಸ್ತೆ ಬದಿ ನಿಲುಗಡೆ ಮಾಡಿದ್ದ ಕಾರಿಗೆ ಡಿಕ್ಕಿ ಹೊಡೆದು, ನಂತರ ಎದುರಿನಿಂದ ಬರುತ್ತಿದ್ದ ಕ್ಯಾಬ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಆಟೊ ರಸ್ತೆಗೆ ಉರುಳಿ ಬಿದ್ದಿದೆ.</p>.<p>ಗಂಭೀರವಾಗಿ ಗಾಯಗೊಂಡಿದ್ದ ಪಾಷಾ ಅವರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಪ್ರಯಾಣಿಕರಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಅಶೋಕ ನಗರ ಸಂಚಾರ ಪೊಲೀಸರು ತೆರಳಿ ಪರಿಶೀಲಿನೆ ನಡೆಸಿ, ಆಟೊ ಹಾಗೂ ಕ್ಯಾಬ್ ಜಪ್ತಿ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<h3><strong>ಉರುಳಿ ಬಿದ್ದ ಆಟೊ</strong></h3><p>ಗೋವಿಂದರಾಜನಗರ ಪೊಲೀಸ್ ಠಾಣೆ ಹಿಂಭಾಗದ ರಸ್ತೆಯ 17ನೇ ಕ್ರಾಸ್ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಆಟೊ ಉರುಳಿ ಬಿದ್ದ ಪರಿಣಾಮ ಜಿಕೆಡಬ್ಲ್ಯು ಲೇಔಟ್ನ ಸರಸ್ವತಿಪುರ ನಿವಾಸಿ ವೆಂಕಟರಾಮಯ್ಯ (62) ಮೃತಪಟ್ಟಿದ್ದಾರೆ.</p>.<p>ಆಟೊದಲ್ಲಿ ಮನೆ ಕಡೆಗೆ ಶನಿವಾರ ರಾತ್ರಿ ವೆಂಕಟರಾಮಯ್ಯ ತೆರಳುತ್ತಿದ್ದರು. ಆ ವೇಳೆ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಆಟೊ ಉರುಳಿಬಿದ್ದಿದೆ. ಈ ವೇಳೆ ತಲೆಗೆ ಗಂಭೀರ ಪೆಟ್ಟು ಬಿದ್ದು ರಕ್ತಸ್ರಾವವಾಗಿದೆ. ಸ್ಥಳೀಯರು ವೆಂಕಟರಾಮಯ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಅವರು ಉಳಿಯಲಿಲ್ಲ. </p>.<p>ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಸಂಬಂಧ ವಿಜಯನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಆಟೊ ಚಾಲಕರು ಮೃತಪಟ್ಟಿದ್ದಾರೆ.</p>.<p>ಆಟೊ ಮತ್ತು ಕ್ಯಾಬ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆಟೊ ಚಾಲಕ, ನೀಲಸಂದ್ರ ನಿವಾಸಿ ಸೈಯದ್ ಅಕ್ರಂ ಪಾಷಾ (50) ಮೃತಪಟ್ಟಿದ್ದಾರೆ. ಪ್ರಯಾಣಿಕರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ.</p>.<p>ಸೈಯದ್ ಅಕ್ರಂ ಪಾಷಾ ಶನಿವಾರ ರಾತ್ರಿ ಪ್ರಯಾಣಿಕರನ್ನು ಕೂರಿಸಿಕೊಂಡು ಒಆರ್ಸಿ ರಸ್ತೆಯ ಚೌಟರಿ ಹಾಲ್ ಬಳಿ ಏಕಮುಖ ಸಂಚಾರದ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಆಟೊ ಚಲಾಯಿಸಿದ್ದಾರೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಆಟೊ, ರಸ್ತೆ ಬದಿ ನಿಲುಗಡೆ ಮಾಡಿದ್ದ ಕಾರಿಗೆ ಡಿಕ್ಕಿ ಹೊಡೆದು, ನಂತರ ಎದುರಿನಿಂದ ಬರುತ್ತಿದ್ದ ಕ್ಯಾಬ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಆಟೊ ರಸ್ತೆಗೆ ಉರುಳಿ ಬಿದ್ದಿದೆ.</p>.<p>ಗಂಭೀರವಾಗಿ ಗಾಯಗೊಂಡಿದ್ದ ಪಾಷಾ ಅವರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಪ್ರಯಾಣಿಕರಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಅಶೋಕ ನಗರ ಸಂಚಾರ ಪೊಲೀಸರು ತೆರಳಿ ಪರಿಶೀಲಿನೆ ನಡೆಸಿ, ಆಟೊ ಹಾಗೂ ಕ್ಯಾಬ್ ಜಪ್ತಿ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<h3><strong>ಉರುಳಿ ಬಿದ್ದ ಆಟೊ</strong></h3><p>ಗೋವಿಂದರಾಜನಗರ ಪೊಲೀಸ್ ಠಾಣೆ ಹಿಂಭಾಗದ ರಸ್ತೆಯ 17ನೇ ಕ್ರಾಸ್ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಆಟೊ ಉರುಳಿ ಬಿದ್ದ ಪರಿಣಾಮ ಜಿಕೆಡಬ್ಲ್ಯು ಲೇಔಟ್ನ ಸರಸ್ವತಿಪುರ ನಿವಾಸಿ ವೆಂಕಟರಾಮಯ್ಯ (62) ಮೃತಪಟ್ಟಿದ್ದಾರೆ.</p>.<p>ಆಟೊದಲ್ಲಿ ಮನೆ ಕಡೆಗೆ ಶನಿವಾರ ರಾತ್ರಿ ವೆಂಕಟರಾಮಯ್ಯ ತೆರಳುತ್ತಿದ್ದರು. ಆ ವೇಳೆ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಆಟೊ ಉರುಳಿಬಿದ್ದಿದೆ. ಈ ವೇಳೆ ತಲೆಗೆ ಗಂಭೀರ ಪೆಟ್ಟು ಬಿದ್ದು ರಕ್ತಸ್ರಾವವಾಗಿದೆ. ಸ್ಥಳೀಯರು ವೆಂಕಟರಾಮಯ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಅವರು ಉಳಿಯಲಿಲ್ಲ. </p>.<p>ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಸಂಬಂಧ ವಿಜಯನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>