<p><strong>ಬೆಂಗಳೂರು</strong>: ಎಲೆಕ್ಟ್ರಾನಿಕ್ ಸಿಟಿ ಹಾಗೂ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.</p>.<p>ಎಲೆಕ್ಟ್ರಾನಿಕ್ ಸಿಟಿ– ಹೊಸೂರು ರಸ್ತೆ ಮೇಲ್ಸೇತುವೆಯಲ್ಲಿ ನಡೆದ ಅಪಘಾತದಲ್ಲಿ ಮಡಿವಾಳ ಕೆರೆ ಸಮೀಪದ ನಿವಾಸಿಗಳಾದ ಸವಾರ ಅಭಿನಂದನ್ (25) ಮತ್ತು ಹಿಂಬದಿ ಕೂತಿದ್ದ ದೀಕ್ಷಾ (25) ಮೃತಪಟ್ಟಿದ್ದಾರೆ. ಇಬ್ಬರೂ ಸ್ನೇಹಿತರು. ಮಂಗಳವಾರ ರಾತ್ರಿ 12 ಗಂಟೆ ಸುಮಾರಿಗೆ ಘಟನೆ ನಡೆದಿದೆ.</p>.<p>‘ಅಭಿನಂದನ್ ಆನ್ಲೈನ್ ವ್ಯವಹಾರ ನಡೆಸುತ್ತಿದ್ದರೆ, ದೀಕ್ಷಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರೂ ದ್ವಿಚಕ್ರ ವಾಹನದಲ್ಲಿ ಕೋನಪ್ಪ ಅಗ್ರಹಾರ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ- ಹೊಸೂರು ಮೇಲುಸೇತುವೆಯಲ್ಲಿ ತಮಿಳುನಾಡು ಕಡೆಗೆ ಹೋಗುತ್ತಿದ್ದರು. ಆಗ ಹಿಂದಿನಿಂದ ವೇಗವಾಗಿ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p><strong>ಸಹಾಯಕ ಸಾವು</strong></p>.<p>ವಾಹನ (ಬಹುಚಕ್ರದ ವಾಹನ) ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಚಾಲಕನ ಸಹಾಯಕ ಮೃತಪಟ್ಟಿದ್ದು, ಮೇಲ್ವಿಚಾರಕ ಸೇರಿ ಮೂವರು ಗಾಯಗೊಂಡಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.</p>.<p>ಬಿಹಾರ ಮೂಲದ ವಿಜಯ್ ಉಪಾಧ್ಯಾಯ (25) ಮೃತಪಟ್ಟವರು. ಮೋಹನ್ ಚಂದ್ರ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ನೈಸ್ ರಸ್ತೆಯಲ್ಲಿ ಮಾಗಡಿ ರಸ್ತೆ ಟೋಲ್ ಕಡೆಯಿಂದ ತುಮಕೂರು ರಸ್ತೆ ಕಡೆಗೆ ತೆರಳುವ ಮಾರ್ಗ ಮಧ್ಯೆ ಬುಧವಾರ ಮುಂಜಾನೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಎಲೆಕ್ಟ್ರಾನಿಕ್ ಸಿಟಿ ಹಾಗೂ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.</p>.<p>ಎಲೆಕ್ಟ್ರಾನಿಕ್ ಸಿಟಿ– ಹೊಸೂರು ರಸ್ತೆ ಮೇಲ್ಸೇತುವೆಯಲ್ಲಿ ನಡೆದ ಅಪಘಾತದಲ್ಲಿ ಮಡಿವಾಳ ಕೆರೆ ಸಮೀಪದ ನಿವಾಸಿಗಳಾದ ಸವಾರ ಅಭಿನಂದನ್ (25) ಮತ್ತು ಹಿಂಬದಿ ಕೂತಿದ್ದ ದೀಕ್ಷಾ (25) ಮೃತಪಟ್ಟಿದ್ದಾರೆ. ಇಬ್ಬರೂ ಸ್ನೇಹಿತರು. ಮಂಗಳವಾರ ರಾತ್ರಿ 12 ಗಂಟೆ ಸುಮಾರಿಗೆ ಘಟನೆ ನಡೆದಿದೆ.</p>.<p>‘ಅಭಿನಂದನ್ ಆನ್ಲೈನ್ ವ್ಯವಹಾರ ನಡೆಸುತ್ತಿದ್ದರೆ, ದೀಕ್ಷಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರೂ ದ್ವಿಚಕ್ರ ವಾಹನದಲ್ಲಿ ಕೋನಪ್ಪ ಅಗ್ರಹಾರ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ- ಹೊಸೂರು ಮೇಲುಸೇತುವೆಯಲ್ಲಿ ತಮಿಳುನಾಡು ಕಡೆಗೆ ಹೋಗುತ್ತಿದ್ದರು. ಆಗ ಹಿಂದಿನಿಂದ ವೇಗವಾಗಿ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p><strong>ಸಹಾಯಕ ಸಾವು</strong></p>.<p>ವಾಹನ (ಬಹುಚಕ್ರದ ವಾಹನ) ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಚಾಲಕನ ಸಹಾಯಕ ಮೃತಪಟ್ಟಿದ್ದು, ಮೇಲ್ವಿಚಾರಕ ಸೇರಿ ಮೂವರು ಗಾಯಗೊಂಡಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.</p>.<p>ಬಿಹಾರ ಮೂಲದ ವಿಜಯ್ ಉಪಾಧ್ಯಾಯ (25) ಮೃತಪಟ್ಟವರು. ಮೋಹನ್ ಚಂದ್ರ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ನೈಸ್ ರಸ್ತೆಯಲ್ಲಿ ಮಾಗಡಿ ರಸ್ತೆ ಟೋಲ್ ಕಡೆಯಿಂದ ತುಮಕೂರು ರಸ್ತೆ ಕಡೆಗೆ ತೆರಳುವ ಮಾರ್ಗ ಮಧ್ಯೆ ಬುಧವಾರ ಮುಂಜಾನೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>