<p><strong>ಬೆಂಗಳೂರು:</strong> ಬಳ್ಳಾರಿ ರಸ್ತೆಯಲ್ಲಿರುವ ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೊ ಇಂಡಿಯಾ 2025ಕ್ಕೆ ಇಂದು (ಶುಕ್ರವಾರ) ಕೊನೆಯ ದಿನವಾಗಿದ್ದು, ಈ ಮಾರ್ಗದಲ್ಲಿ ವಿಪರೀತ ವಾಹನ ದಟ್ಟಣೆಯ ಆಗುವ ಸಾಧ್ಯತೆ ಇದೆ. ಶುಕ್ರವಾರ ಬೆಳಿಗ್ಗೆಯೇ ಹೆಬ್ಬಾಳ ಮೇಲ್ಸೇತುವೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.</p><p>ಬಳ್ಳಾರಿ, ಆಂಧ್ರಪ್ರದೇಶ, ದೇವನಹಳ್ಳಿಯಲ್ಲಿ ಇರುವ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವವರಿಗೆ ದಟ್ಟಣೆಯ ಬಿಸಿ ತಟ್ಟುವ ಸಾಧ್ಯತೆ ಇದೆ.</p><p>ವೈಮಾನಿಕ ಪ್ರದರ್ಶನ ಹಾಗೂ ಪ್ರದರ್ಶನ ಮಳಿಗೆ ವೀಕ್ಷಣೆಗೆ ಶುಕ್ರವಾರ ಸಾರ್ವಜನಿಕರಿಗೆ ಅವಕಾಶವಿದೆ. ಹೀಗಾಗಿ, ದೊಡ್ಡ ಸಂಖ್ಯೆಯಲ್ಲಿ ವಾಯುನೆಲೆಯತ್ತ ಜನರು ತಮ್ಮ ವಾಹನಗಳಲ್ಲಿ ಧಾವಿಸುತ್ತಿದ್ದಾರೆ.</p><p>ಇದೇ ಮಾರ್ಗದ ಮೂಲಕ ದೂರದ ಊರುಗಳಿಗೆ ತೆರಳುವವರು ಬೆಂಗಳೂರು -ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ 44ರ ಬದಲು ಹೆಬ್ಬಾಳ- ಹೆಣ್ಣೂರು-ಬಾಗಲೂರು ಮಾರ್ಗ ಬಳಸುವಂತೆ ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಎಂ.ಎನ್.ಅನುಚೇತ್ ಮನವಿ ಮಾಡಿದ್ದಾರೆ.</p>.ಏರೊ ಇಂಡಿಯಾ | ಬಿರು ಬಿಸಿಲು: ಅರ್ಧಕ್ಕೆ ಹೊರಟ ಪ್ರೇಕ್ಷಕರು .PHOTOS | ‘ಏರೊ ಇಂಡಿಯಾ’ಕ್ಕೆ ಚಾಲನೆ: ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಿತ್ತಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಳ್ಳಾರಿ ರಸ್ತೆಯಲ್ಲಿರುವ ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೊ ಇಂಡಿಯಾ 2025ಕ್ಕೆ ಇಂದು (ಶುಕ್ರವಾರ) ಕೊನೆಯ ದಿನವಾಗಿದ್ದು, ಈ ಮಾರ್ಗದಲ್ಲಿ ವಿಪರೀತ ವಾಹನ ದಟ್ಟಣೆಯ ಆಗುವ ಸಾಧ್ಯತೆ ಇದೆ. ಶುಕ್ರವಾರ ಬೆಳಿಗ್ಗೆಯೇ ಹೆಬ್ಬಾಳ ಮೇಲ್ಸೇತುವೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.</p><p>ಬಳ್ಳಾರಿ, ಆಂಧ್ರಪ್ರದೇಶ, ದೇವನಹಳ್ಳಿಯಲ್ಲಿ ಇರುವ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವವರಿಗೆ ದಟ್ಟಣೆಯ ಬಿಸಿ ತಟ್ಟುವ ಸಾಧ್ಯತೆ ಇದೆ.</p><p>ವೈಮಾನಿಕ ಪ್ರದರ್ಶನ ಹಾಗೂ ಪ್ರದರ್ಶನ ಮಳಿಗೆ ವೀಕ್ಷಣೆಗೆ ಶುಕ್ರವಾರ ಸಾರ್ವಜನಿಕರಿಗೆ ಅವಕಾಶವಿದೆ. ಹೀಗಾಗಿ, ದೊಡ್ಡ ಸಂಖ್ಯೆಯಲ್ಲಿ ವಾಯುನೆಲೆಯತ್ತ ಜನರು ತಮ್ಮ ವಾಹನಗಳಲ್ಲಿ ಧಾವಿಸುತ್ತಿದ್ದಾರೆ.</p><p>ಇದೇ ಮಾರ್ಗದ ಮೂಲಕ ದೂರದ ಊರುಗಳಿಗೆ ತೆರಳುವವರು ಬೆಂಗಳೂರು -ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ 44ರ ಬದಲು ಹೆಬ್ಬಾಳ- ಹೆಣ್ಣೂರು-ಬಾಗಲೂರು ಮಾರ್ಗ ಬಳಸುವಂತೆ ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಎಂ.ಎನ್.ಅನುಚೇತ್ ಮನವಿ ಮಾಡಿದ್ದಾರೆ.</p>.ಏರೊ ಇಂಡಿಯಾ | ಬಿರು ಬಿಸಿಲು: ಅರ್ಧಕ್ಕೆ ಹೊರಟ ಪ್ರೇಕ್ಷಕರು .PHOTOS | ‘ಏರೊ ಇಂಡಿಯಾ’ಕ್ಕೆ ಚಾಲನೆ: ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಿತ್ತಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>