<p><strong>ಬೆಂಗಳೂರು:</strong> ನಗರದಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಮೇಲಿಂದ ಮೇಲೆ ಅಪಘಾತಗಳು ಸಂಭವಿಸುತ್ತಿದ್ದು, ಸಾವು– ನೋವುಗಳು ಹೆಚ್ಚುತ್ತಿವೆ. ಯಾವಾಗ? ಎಲ್ಲಿ ? ಹೇಗೆ ? ಅಪಘಾತವಾಗುತ್ತದೆ ಎಂಬ ಭಯ ಪ್ರಯಾಣಿಕರು ಹಾಗೂ ಪಾದಚಾರಿಗಳನ್ನು ಕಾಡುತ್ತಿದೆ.</p>.<p>ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ವಿಮಾನ ನಿಲ್ದಾಣದಿಂದ ನಿತ್ಯವೂ ಸಾವಿರಾರು ಮಂದಿ, ಹೊರ ರಾಜ್ಯ ಹಾಗೂ ಹೊರ ದೇಶಗಳಿಗೆ ಪ್ರಯಾಣಿಸುತ್ತಿದ್ದಾರೆ. ನಗರದಿಂದ ನಿಲ್ದಾಣಕ್ಕೆ ಹೋಗಲು ಹಾಗೂ ನಿಲ್ದಾಣದಿಂದ ನಗರಕ್ಕೆ ಬರಲು ಸುಸಜ್ಜಿತ ರಸ್ತೆ ನಿರ್ಮಿಸಲಾಗಿದೆ. ಇದೇ ರಸ್ತೆ ಅಪಘಾತ ವಲಯವಾಗಿ ಮಾರ್ಪಡುತ್ತಿದ್ದು, ಈ ಬಗ್ಗೆ ಸಂಚಾರ ಪೊಲೀಸರೇ ಅಂಕಿ–ಅಂಶ ಬಿಡುಗಡೆ ಮಾಡಿದ್ದಾರೆ.</p>.<p>‘ನಗರದಿಂದ ವಿಮಾನ ನಿಲ್ದಾಣ, ಬಳ್ಳಾರಿ, ಹೈದರಾಬಾದ್ಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ನಿತ್ಯವೂ ಸಾವಿರಾರು ವಾಹನಗಳು ಸಂಚರಿಸುತ್ತವೆ. ಕೆಲವರ ಅತೀ ವೇಗದ ಚಾಲನೆ ಹಾಗೂ ನಿರ್ಲಕ್ಷ್ಯದಿಂದ ಅಪಘಾತಗಳು ಸಂಭವಿಸುತ್ತಿವೆ’ ಎಂದು ಸಂಚಾರ ವಿಭಾಗದ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ನಗರದ ಬಸವೇಶ್ವರ ವೃತ್ತ, ಅರಮನೆ ರಸ್ತೆ, ಮೇಖ್ರಿ ವೃತ್ತ, ಹೆಬ್ಬಾಳ ಮಾರ್ಗವಾಗಿ ವಿಮಾನ ನಿಲ್ದಾಣಕ್ಕೆ ವಾಹನಗಳು ಹೋಗುತ್ತವೆ. ಹೆಬ್ಬಾಳದಿಂದ ವಿಮಾನ ನಿಲ್ದಾಣದವರೆಗಿನ ರಸ್ತೆಯಲ್ಲೇ ಹೆಚ್ಚು ಅಪಘಾತಗಳು ಆಗುತ್ತಿವೆ’ ಎಂದೂ ತಿಳಿಸಿದರು.</p>.<p>‘ಹೆಬ್ಬಾಳ, ಯಲಹಂಕ, ಚಿಕ್ಕಜಾಲ ಹಾಗೂ ದೇವನಹಳ್ಳಿ ಸಂಚಾರ ಠಾಣೆಗಳ ವ್ಯಾಪ್ತಿಯಲ್ಲಿ ರಸ್ತೆ ಹಾದು ಹೋಗಿದೆ. ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ರಸ್ತೆಯುದ್ದಕ್ಕೂ ಫಲಕಗಳನ್ನು ಅಳವಡಿಸಲಾಗಿದೆ. ಆದರೆ, ಬಹುತೇಕರು ನಿಯಮ ಪಾಲಿಸುತ್ತಿಲ್ಲ. ಇದುವೇ ಅಪಘಾತಕ್ಕೆ ಕಾರಣವಾಗುತ್ತಿದೆ’ ಎಂದೂ ಹೇಳಿದರು.</p>.<p class="Subhead">ಎರಡೇ ತಿಂಗಳಿನಲ್ಲಿ 91 ಅಪಘಾತ: 'ನಗರದಿಂದ ವಿಮಾನ ನಿಲ್ದಾಣವರೆಗಿನ ರಸ್ತೆಯಲ್ಲಿ ಪ್ರಸಕ್ತ ಜನವರಿಯಿಂದ ಫೆಬ್ರುವರಿಯವರೆಗೆ 91 ಅಪಘಾತಗಳು ಸಂಭವಿಸಿವೆ. ಅದರಲ್ಲಿ 21 ಮಂದಿ ಮೃತಪಟ್ಟಿದ್ದಾರೆ’ ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.</p>.<p>‘ಪ್ರತಿ ಬಾರಿಯೂ ಅಪಘಾತವಾದ ಸ್ಥಳ ಪರಿಶೀಲನೆ ನಡೆಸಿ ವರದಿ ಸಿದ್ಧಪಡಿಸಲಾಗುತ್ತದೆ. ಚಾಲಕನ ನಿರ್ಲಕ್ಷ್ಯ ಹಾಗೂ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆಂಬುದು ತಿಳಿಯುತ್ತದೆ. ಹೀಗಾಗಿ, ಈ ರಸ್ತೆಯಲ್ಲಿ ವಾಹನ ಗಳ ತಪಾಸಣೆ ಹೆಚ್ಚಿಸಲಾಗಿದೆ. ಅತೀ ವೇಗದಲ್ಲಿ ವಾಹನ ಚಲಾಯಿಸುವವರನ್ನು ಪತ್ತೆ ಮಾಡಿ ದಂಡ ವಿಧಿಸಲಾಗುತ್ತಿದೆ’ ಎಂದೂ ಹೇಳಿದರು.</p>.<p>‘ಹೆಬ್ಬಾಳ ಮೇಲ್ಸೇತುವೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿ ವಾಹನಗಳು ಸಾಲುಗಟ್ಟಿ ನಿಂತಿರುತ್ತದೆ. ಇಲ್ಲಿಯೂ ಒಂದಕ್ಕೊಂದು ವಾಹನಗಳು ಡಿಕ್ಕಿ ಹೊಡೆದು ಸರಣಿ ಅಪಘಾತ ನಡೆದ ಪ್ರಕರಣಗಳಿಗೆ’ ಎಂದೂ ತಿಳಿಸಿದರು.</p>.<p class="Subhead"><strong>ಭಯದಲ್ಲೇ ಓಡಾಟ:</strong> ‘ವಿಮಾನ ನಿಲ್ದಾಣ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಕೆಲವರು, ‘ರೇಸ್’ ರೀತಿಯಲ್ಲಿ ವಾಹನಗಳನ್ನು ಚಲಾಯಿಸಿಕೊಂಡು ಹೋಗುತ್ತಿದ್ದಾರೆ’ ಎಂದು ಹೆಬ್ಬಾಳ ನಿವಾಸಿ ಚಂದ್ರಶೇಖರ್ ಹೇಳಿದರು.</p>.<p>‘ಗಾಂಧಿನಗರದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ನಿತ್ಯವೂ ಹೆಬ್ಬಾಳದಿಂದ ಬಸ್ಸಿನಲ್ಲಿ ಹೋಗಿ ಬರುತ್ತೇನೆ. ಹೆಬ್ಬಾಳ ಬಸ್ ನಿಲ್ದಾಣ ಬಳಿ ನನ್ನ ಕಣ್ಣೆದುರೇ ಅಪಘಾತಗಳು ನಡೆದಿವೆ. ಭಯದಲ್ಲೇ ಓಡಾಡುತ್ತಿದ್ದೇನೆ’ ಎಂದೂ ತಿಳಿಸಿದರು.</p>.<p>ಗಾರ್ಮೆಂಟ್ಸ್ ಕಾರ್ಖಾನೆ ಉದ್ಯೋಗಿಯೂ ಆದ ಯಲಹಂಕ ನಿವಾಸಿ ಪರಿಮಳಾ, ‘ವಿಮಾನ ನಿಲ್ದಾಣ ರಸ್ತೆ ಪಾದಚಾರಿಗಳಿಗೆ ಅಪಾಯಕಾರಿಯಾಗಿದೆ. ಇತ್ತೀಚೆಗೆ ರಸ್ತೆ ದಾಟುವ ವೇಳೆ ಸ್ನೇಹಿತೆಗೆ ಕಾರೊಂದು ಗುದ್ದಿತ್ತು. ಚಾಲಕ ಅತೀ ವೇಗದಿಂದ ಕಾರು ಚಲಾಯಿಸಿದ್ದನೆಂದು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ’ ಎಂದರು.</p>.<p>ತಳ್ಳುಗಾಡಿ ವ್ಯಾಪಾರಿ ರಾಮಚಂದ್ರ, ‘ಯಲಹಂಕದ ರಸ್ತೆಬದಿ ನಾಲ್ಕು ವರ್ಷಗಳಿಂದ ತಿಂಡಿ ಮಾರಾಟ ಮಾಡುತ್ತಿದ್ದೇನೆ. ಮೇಲಿಂದ ಮೇಲೆ ಅಪಘಾತವಾಗುತ್ತಿರುವುದನ್ನು ಕಣ್ಣಾರೆ ಕಂಡಿದ್ದು, ಕೆಲ ಸಂದರ್ಭಗಳಲ್ಲಿ ನಾನೇ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದೇನೆ’ ಎಂದರು.</p>.<p>‘ಸಂಚಾರ ಪೊಲೀಸರು ಸೂಚನಾ ಫಲಕಗಳನ್ನು ಅಳವಡಿಸಿದ್ದಾರೆ. ಅದನ್ನು ಬಹುತೇಕರು ಪಾಲಿಸುತ್ತಿಲ್ಲ. ವಾಹನಗಳ ಅತೀ ವೇಗದ ಚಾಲನೆ ತಡೆಯಲು ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು’ ಎಂದೂ ಹೇಳಿದರು.</p>.<p><strong>ಕೆಐಎ ರಸ್ತೆಯಲ್ಲಿ ಸಂಭವಿಸಿದ್ದ ಪ್ರಮುಖ ಅಪಘಾತಗಳು</strong></p>.<p>l ಜನವರಿ 21: ಹೆಬ್ಬಾಳ ಮೇಲ್ಸೇತುವೆಯಲ್ಲಿ ಬೈಕ್ನಿಂದ ಆಯತಪ್ಪಿ ಬಿದ್ದಿದ್ದ ವಿದ್ಯಾರ್ಥಿನಿ ಮಹಶ್ರೀ ಮೇಲೆ ಹರಿದಿದ್ದ ಕ್ಯಾಂಟರ್ ವಾಹನ. ಸ್ಥಳದಲ್ಲೇ ಸಾವನ್ನಪ್ಪಿದ್ದ ಮಹಶ್ರೀ.</p>.<p>l ಫೆಬ್ರುವರಿ 26: ಬ್ಯಾಟರಾಯನಪುರ ಜಂಕ್ಷನ್ನಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತ. ಎಂಜಿನಿಯರಿಂಗ್ ಪದವೀಧರರಾದ ಯತೀಶ್ (22) ಹಾಗೂ ಕಿರಣ್ (22) ಸಾವು.</p>.<p>l ಮಾರ್ಚ್ 21: ಹೆಬ್ಬಾಳ ಬಸ್ ನಿಲ್ದಾಣ ಎದುರಿನ ಮುಖ್ಯರಸ್ತೆಯಲ್ಲಿ ಬಿಬಿಎಂಪಿ ಕಸ ಸಾಗಣೆ ಲಾರಿ (ಕಾಂಪ್ಯಾಕ್ಟರ್) ಡಿಕ್ಕಿ ಹೊಡೆದು 9ನೇ ತರಗತಿ ವಿದ್ಯಾರ್ಥಿನಿ ಅಕ್ಷಯಾ (14) ಮೃತಪಟ್ಟಿದ್ದಳು. ಅಪಘಾತದಲ್ಲಿ ಸೌಮ್ಯಾ, ಸಂಧ್ಯಾ ಹಾಗೂ ವಿಕಾಸ್ ಎಂಬುವರು ಗಾಯಗೊಂಡಿದ್ದರು.</p>.<p>l ಮಾರ್ಚ್ 30: ಯಲಹಂಕ ಸಂಚಾರ ಠಾಣೆ ವ್ಯಾಪ್ತಿಯ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಕ್ಯಾಂಪಸ್ ಎದುರು ಅಪಘಾತ. ಸಿಆರ್ಪಿಎಫ್ ಸಬ್ ಇನ್ಸ್ಪೆಕ್ಟರ್ ಸ್ವಾಮಿಗೌಡ (54) ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿ ಅಮ್ಮರ್ ಸುಲೆಹಾ (22) ಸಾವು.</p>.<p><strong>‘ಅವಸರವೇ ಅಪಘಾತಕ್ಕೆ ಕಾರಣ’</strong></p>.<p>‘ವಿಮಾನ ನಿಲ್ದಾಣ ರಸ್ತೆಯಲ್ಲಿ ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಅವಸರದ ಪ್ರಯಾಣದಿಂದ ಹೆಚ್ಚು ಅಪಘಾತಗಳು ನಡೆಯುತ್ತಿದೆ’ ಎಂದು ಉತ್ತರ ವಿಭಾಗದ (ಸಂಚಾರ) ಡಿಸಿಪಿ ಎಸ್. ಸವಿತಾ ಹೇಳಿದರು.</p>.<p>‘ವಿಮಾನ ತಪ್ಪುವ ಹೆದರಿಕೆಯಲ್ಲಿ ಕೆಲವರು ಅತೀ ವೇಗದಲ್ಲಿ ವಾಹನ ಚಲಾಯಿಸಿಕೊಂಡು ಹೋಗುತ್ತಾರೆ. ಇದು ಅಪಘಾತಕ್ಕೆ ಕಾರಣವಾಗುತ್ತಿದೆ’ ಎಂದರು.</p>.<p>‘ಪ್ರತಿಬಾರಿ ಅಪಘಾತದ ಸ್ಥಳ ಪರಿಶೀಲನೆ ನಡೆಸುತ್ತೇವೆ. ಘಟನಾ ಸ್ಥಳದಲ್ಲಿ ಏನಾದರೂ ನ್ಯೂನತೆಗಳು ಇದ್ದರೆ, ಅದನ್ನು ಸರಿಪಡಿಸುವಂತೆ ಕೋರಿ ಸಂಬಂಧಪಟ್ಟ ಇಲಾಖೆಯವರಿಗೆ ಪತ್ರ ಬರೆಯುತ್ತೇವೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎ) ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಮೇಲಿಂದ ಮೇಲೆ ಅಪಘಾತಗಳು ಸಂಭವಿಸುತ್ತಿದ್ದು, ಸಾವು– ನೋವುಗಳು ಹೆಚ್ಚುತ್ತಿವೆ. ಯಾವಾಗ? ಎಲ್ಲಿ ? ಹೇಗೆ ? ಅಪಘಾತವಾಗುತ್ತದೆ ಎಂಬ ಭಯ ಪ್ರಯಾಣಿಕರು ಹಾಗೂ ಪಾದಚಾರಿಗಳನ್ನು ಕಾಡುತ್ತಿದೆ.</p>.<p>ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ವಿಮಾನ ನಿಲ್ದಾಣದಿಂದ ನಿತ್ಯವೂ ಸಾವಿರಾರು ಮಂದಿ, ಹೊರ ರಾಜ್ಯ ಹಾಗೂ ಹೊರ ದೇಶಗಳಿಗೆ ಪ್ರಯಾಣಿಸುತ್ತಿದ್ದಾರೆ. ನಗರದಿಂದ ನಿಲ್ದಾಣಕ್ಕೆ ಹೋಗಲು ಹಾಗೂ ನಿಲ್ದಾಣದಿಂದ ನಗರಕ್ಕೆ ಬರಲು ಸುಸಜ್ಜಿತ ರಸ್ತೆ ನಿರ್ಮಿಸಲಾಗಿದೆ. ಇದೇ ರಸ್ತೆ ಅಪಘಾತ ವಲಯವಾಗಿ ಮಾರ್ಪಡುತ್ತಿದ್ದು, ಈ ಬಗ್ಗೆ ಸಂಚಾರ ಪೊಲೀಸರೇ ಅಂಕಿ–ಅಂಶ ಬಿಡುಗಡೆ ಮಾಡಿದ್ದಾರೆ.</p>.<p>‘ನಗರದಿಂದ ವಿಮಾನ ನಿಲ್ದಾಣ, ಬಳ್ಳಾರಿ, ಹೈದರಾಬಾದ್ಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ನಿತ್ಯವೂ ಸಾವಿರಾರು ವಾಹನಗಳು ಸಂಚರಿಸುತ್ತವೆ. ಕೆಲವರ ಅತೀ ವೇಗದ ಚಾಲನೆ ಹಾಗೂ ನಿರ್ಲಕ್ಷ್ಯದಿಂದ ಅಪಘಾತಗಳು ಸಂಭವಿಸುತ್ತಿವೆ’ ಎಂದು ಸಂಚಾರ ವಿಭಾಗದ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.</p>.<p>‘ನಗರದ ಬಸವೇಶ್ವರ ವೃತ್ತ, ಅರಮನೆ ರಸ್ತೆ, ಮೇಖ್ರಿ ವೃತ್ತ, ಹೆಬ್ಬಾಳ ಮಾರ್ಗವಾಗಿ ವಿಮಾನ ನಿಲ್ದಾಣಕ್ಕೆ ವಾಹನಗಳು ಹೋಗುತ್ತವೆ. ಹೆಬ್ಬಾಳದಿಂದ ವಿಮಾನ ನಿಲ್ದಾಣದವರೆಗಿನ ರಸ್ತೆಯಲ್ಲೇ ಹೆಚ್ಚು ಅಪಘಾತಗಳು ಆಗುತ್ತಿವೆ’ ಎಂದೂ ತಿಳಿಸಿದರು.</p>.<p>‘ಹೆಬ್ಬಾಳ, ಯಲಹಂಕ, ಚಿಕ್ಕಜಾಲ ಹಾಗೂ ದೇವನಹಳ್ಳಿ ಸಂಚಾರ ಠಾಣೆಗಳ ವ್ಯಾಪ್ತಿಯಲ್ಲಿ ರಸ್ತೆ ಹಾದು ಹೋಗಿದೆ. ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ರಸ್ತೆಯುದ್ದಕ್ಕೂ ಫಲಕಗಳನ್ನು ಅಳವಡಿಸಲಾಗಿದೆ. ಆದರೆ, ಬಹುತೇಕರು ನಿಯಮ ಪಾಲಿಸುತ್ತಿಲ್ಲ. ಇದುವೇ ಅಪಘಾತಕ್ಕೆ ಕಾರಣವಾಗುತ್ತಿದೆ’ ಎಂದೂ ಹೇಳಿದರು.</p>.<p class="Subhead">ಎರಡೇ ತಿಂಗಳಿನಲ್ಲಿ 91 ಅಪಘಾತ: 'ನಗರದಿಂದ ವಿಮಾನ ನಿಲ್ದಾಣವರೆಗಿನ ರಸ್ತೆಯಲ್ಲಿ ಪ್ರಸಕ್ತ ಜನವರಿಯಿಂದ ಫೆಬ್ರುವರಿಯವರೆಗೆ 91 ಅಪಘಾತಗಳು ಸಂಭವಿಸಿವೆ. ಅದರಲ್ಲಿ 21 ಮಂದಿ ಮೃತಪಟ್ಟಿದ್ದಾರೆ’ ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.</p>.<p>‘ಪ್ರತಿ ಬಾರಿಯೂ ಅಪಘಾತವಾದ ಸ್ಥಳ ಪರಿಶೀಲನೆ ನಡೆಸಿ ವರದಿ ಸಿದ್ಧಪಡಿಸಲಾಗುತ್ತದೆ. ಚಾಲಕನ ನಿರ್ಲಕ್ಷ್ಯ ಹಾಗೂ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆಂಬುದು ತಿಳಿಯುತ್ತದೆ. ಹೀಗಾಗಿ, ಈ ರಸ್ತೆಯಲ್ಲಿ ವಾಹನ ಗಳ ತಪಾಸಣೆ ಹೆಚ್ಚಿಸಲಾಗಿದೆ. ಅತೀ ವೇಗದಲ್ಲಿ ವಾಹನ ಚಲಾಯಿಸುವವರನ್ನು ಪತ್ತೆ ಮಾಡಿ ದಂಡ ವಿಧಿಸಲಾಗುತ್ತಿದೆ’ ಎಂದೂ ಹೇಳಿದರು.</p>.<p>‘ಹೆಬ್ಬಾಳ ಮೇಲ್ಸೇತುವೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿ ವಾಹನಗಳು ಸಾಲುಗಟ್ಟಿ ನಿಂತಿರುತ್ತದೆ. ಇಲ್ಲಿಯೂ ಒಂದಕ್ಕೊಂದು ವಾಹನಗಳು ಡಿಕ್ಕಿ ಹೊಡೆದು ಸರಣಿ ಅಪಘಾತ ನಡೆದ ಪ್ರಕರಣಗಳಿಗೆ’ ಎಂದೂ ತಿಳಿಸಿದರು.</p>.<p class="Subhead"><strong>ಭಯದಲ್ಲೇ ಓಡಾಟ:</strong> ‘ವಿಮಾನ ನಿಲ್ದಾಣ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಕೆಲವರು, ‘ರೇಸ್’ ರೀತಿಯಲ್ಲಿ ವಾಹನಗಳನ್ನು ಚಲಾಯಿಸಿಕೊಂಡು ಹೋಗುತ್ತಿದ್ದಾರೆ’ ಎಂದು ಹೆಬ್ಬಾಳ ನಿವಾಸಿ ಚಂದ್ರಶೇಖರ್ ಹೇಳಿದರು.</p>.<p>‘ಗಾಂಧಿನಗರದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ನಿತ್ಯವೂ ಹೆಬ್ಬಾಳದಿಂದ ಬಸ್ಸಿನಲ್ಲಿ ಹೋಗಿ ಬರುತ್ತೇನೆ. ಹೆಬ್ಬಾಳ ಬಸ್ ನಿಲ್ದಾಣ ಬಳಿ ನನ್ನ ಕಣ್ಣೆದುರೇ ಅಪಘಾತಗಳು ನಡೆದಿವೆ. ಭಯದಲ್ಲೇ ಓಡಾಡುತ್ತಿದ್ದೇನೆ’ ಎಂದೂ ತಿಳಿಸಿದರು.</p>.<p>ಗಾರ್ಮೆಂಟ್ಸ್ ಕಾರ್ಖಾನೆ ಉದ್ಯೋಗಿಯೂ ಆದ ಯಲಹಂಕ ನಿವಾಸಿ ಪರಿಮಳಾ, ‘ವಿಮಾನ ನಿಲ್ದಾಣ ರಸ್ತೆ ಪಾದಚಾರಿಗಳಿಗೆ ಅಪಾಯಕಾರಿಯಾಗಿದೆ. ಇತ್ತೀಚೆಗೆ ರಸ್ತೆ ದಾಟುವ ವೇಳೆ ಸ್ನೇಹಿತೆಗೆ ಕಾರೊಂದು ಗುದ್ದಿತ್ತು. ಚಾಲಕ ಅತೀ ವೇಗದಿಂದ ಕಾರು ಚಲಾಯಿಸಿದ್ದನೆಂದು ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ’ ಎಂದರು.</p>.<p>ತಳ್ಳುಗಾಡಿ ವ್ಯಾಪಾರಿ ರಾಮಚಂದ್ರ, ‘ಯಲಹಂಕದ ರಸ್ತೆಬದಿ ನಾಲ್ಕು ವರ್ಷಗಳಿಂದ ತಿಂಡಿ ಮಾರಾಟ ಮಾಡುತ್ತಿದ್ದೇನೆ. ಮೇಲಿಂದ ಮೇಲೆ ಅಪಘಾತವಾಗುತ್ತಿರುವುದನ್ನು ಕಣ್ಣಾರೆ ಕಂಡಿದ್ದು, ಕೆಲ ಸಂದರ್ಭಗಳಲ್ಲಿ ನಾನೇ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದೇನೆ’ ಎಂದರು.</p>.<p>‘ಸಂಚಾರ ಪೊಲೀಸರು ಸೂಚನಾ ಫಲಕಗಳನ್ನು ಅಳವಡಿಸಿದ್ದಾರೆ. ಅದನ್ನು ಬಹುತೇಕರು ಪಾಲಿಸುತ್ತಿಲ್ಲ. ವಾಹನಗಳ ಅತೀ ವೇಗದ ಚಾಲನೆ ತಡೆಯಲು ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು’ ಎಂದೂ ಹೇಳಿದರು.</p>.<p><strong>ಕೆಐಎ ರಸ್ತೆಯಲ್ಲಿ ಸಂಭವಿಸಿದ್ದ ಪ್ರಮುಖ ಅಪಘಾತಗಳು</strong></p>.<p>l ಜನವರಿ 21: ಹೆಬ್ಬಾಳ ಮೇಲ್ಸೇತುವೆಯಲ್ಲಿ ಬೈಕ್ನಿಂದ ಆಯತಪ್ಪಿ ಬಿದ್ದಿದ್ದ ವಿದ್ಯಾರ್ಥಿನಿ ಮಹಶ್ರೀ ಮೇಲೆ ಹರಿದಿದ್ದ ಕ್ಯಾಂಟರ್ ವಾಹನ. ಸ್ಥಳದಲ್ಲೇ ಸಾವನ್ನಪ್ಪಿದ್ದ ಮಹಶ್ರೀ.</p>.<p>l ಫೆಬ್ರುವರಿ 26: ಬ್ಯಾಟರಾಯನಪುರ ಜಂಕ್ಷನ್ನಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತ. ಎಂಜಿನಿಯರಿಂಗ್ ಪದವೀಧರರಾದ ಯತೀಶ್ (22) ಹಾಗೂ ಕಿರಣ್ (22) ಸಾವು.</p>.<p>l ಮಾರ್ಚ್ 21: ಹೆಬ್ಬಾಳ ಬಸ್ ನಿಲ್ದಾಣ ಎದುರಿನ ಮುಖ್ಯರಸ್ತೆಯಲ್ಲಿ ಬಿಬಿಎಂಪಿ ಕಸ ಸಾಗಣೆ ಲಾರಿ (ಕಾಂಪ್ಯಾಕ್ಟರ್) ಡಿಕ್ಕಿ ಹೊಡೆದು 9ನೇ ತರಗತಿ ವಿದ್ಯಾರ್ಥಿನಿ ಅಕ್ಷಯಾ (14) ಮೃತಪಟ್ಟಿದ್ದಳು. ಅಪಘಾತದಲ್ಲಿ ಸೌಮ್ಯಾ, ಸಂಧ್ಯಾ ಹಾಗೂ ವಿಕಾಸ್ ಎಂಬುವರು ಗಾಯಗೊಂಡಿದ್ದರು.</p>.<p>l ಮಾರ್ಚ್ 30: ಯಲಹಂಕ ಸಂಚಾರ ಠಾಣೆ ವ್ಯಾಪ್ತಿಯ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಕ್ಯಾಂಪಸ್ ಎದುರು ಅಪಘಾತ. ಸಿಆರ್ಪಿಎಫ್ ಸಬ್ ಇನ್ಸ್ಪೆಕ್ಟರ್ ಸ್ವಾಮಿಗೌಡ (54) ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿ ಅಮ್ಮರ್ ಸುಲೆಹಾ (22) ಸಾವು.</p>.<p><strong>‘ಅವಸರವೇ ಅಪಘಾತಕ್ಕೆ ಕಾರಣ’</strong></p>.<p>‘ವಿಮಾನ ನಿಲ್ದಾಣ ರಸ್ತೆಯಲ್ಲಿ ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಅವಸರದ ಪ್ರಯಾಣದಿಂದ ಹೆಚ್ಚು ಅಪಘಾತಗಳು ನಡೆಯುತ್ತಿದೆ’ ಎಂದು ಉತ್ತರ ವಿಭಾಗದ (ಸಂಚಾರ) ಡಿಸಿಪಿ ಎಸ್. ಸವಿತಾ ಹೇಳಿದರು.</p>.<p>‘ವಿಮಾನ ತಪ್ಪುವ ಹೆದರಿಕೆಯಲ್ಲಿ ಕೆಲವರು ಅತೀ ವೇಗದಲ್ಲಿ ವಾಹನ ಚಲಾಯಿಸಿಕೊಂಡು ಹೋಗುತ್ತಾರೆ. ಇದು ಅಪಘಾತಕ್ಕೆ ಕಾರಣವಾಗುತ್ತಿದೆ’ ಎಂದರು.</p>.<p>‘ಪ್ರತಿಬಾರಿ ಅಪಘಾತದ ಸ್ಥಳ ಪರಿಶೀಲನೆ ನಡೆಸುತ್ತೇವೆ. ಘಟನಾ ಸ್ಥಳದಲ್ಲಿ ಏನಾದರೂ ನ್ಯೂನತೆಗಳು ಇದ್ದರೆ, ಅದನ್ನು ಸರಿಪಡಿಸುವಂತೆ ಕೋರಿ ಸಂಬಂಧಪಟ್ಟ ಇಲಾಖೆಯವರಿಗೆ ಪತ್ರ ಬರೆಯುತ್ತೇವೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>