ಕಾಮಗಾರಿ ಅಪೂರ್ಣವಾಗಿರುವ ಕಡೆ ವಾಹನಗಳು ನಿಧಾನವಾಗಿ ಸಾಗುವುದರಿಂದ ನಿತ್ಯವೂ ಸಂಚಾರ ದಟ್ಟಣೆ ಉಂಟಾಗುತ್ತದೆ. ಕಾಮಗಾರಿ ಉದಿಗಿರುವ ಕಡೆಯೂ ಅಲ್ಲಲ್ಲಿ ಮತ್ತೆ ಗುಂಡಿಗಳು ಬಿದ್ದಿದ್ದು ಪಡಿಪಾಟಲು ಅನುಭವಿಸುವಂತಾಗಿದೆ. ‘ನಿರ್ವಹಣೆ ಇಲ್ಲದ ಕಾರಣ ರಸ್ತೆ ಅಕ್ಕಪಕ್ಕದಲ್ಲಿ ಎದೆ ಎತ್ತರದವರೆಗೆ ಹುಲ್ಲು ಗಿಡ–ಗಂಟೆಗಳು ಬೆಳೆದಿವೆ. ರಸ್ತೆಯಲ್ಲಿನ ಗುಂಡಿಗಳು ಕಾಣದೆ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ. ಕೆಲವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆಗಳು ನಡೆದಿವೆ’ ಎಂದು ಸ್ಥಳೀಯರು ದೂರಿದರು.
ಅರ್ಧಕ್ಕೆ ನಿಂತಿರುವ ಕಾಮಗಾರಿ
ರಸ್ತೆ ಸಂಪೂರ್ಣ ಹಾಳಾಗಿರುವುದರಿಂದ ಸಂಚಾರ ದಟ್ಟಣೆ ಉಂಟಾಗಿ ವಿಪರೀತ ಶಬ್ದದಿಂದ ರಾತ್ರಿ ವೇಳೆ ನಿದ್ದೆ ಬರುತ್ತಿಲ್ಲ ರಸ್ತೆ ಕಾಮಗಾರಿ ಯಾವಾಗ ಮುಗಿಯುತ್ತದೋ ಎಂದು ಕಾಯುತ್ತಿದ್ದೇವೆ.
– ಎನ್.ಎಸ್.ಶಿವರಾಜ್, ವಿಶ್ವೇಶ್ವರಪುರ ನಿವಾಸಿ
ಭೂ ಸ್ವಾಧೀನ ಪ್ರಕ್ರಿಯೆ ಹೆಚ್ಚಿನ ಪರಿಹಾರಕ್ಕೆ ಆಗ್ರಹಿಸಿ ರೈತರು ನ್ಯಾಯಾಲಯದ ಮೊರೆಹೋಗಿರುವುದರಿಂದ ವಿಳಂಬವಾಗಿದೆ. ಕೆಆರ್ಡಿಸಿಎಲ್ ಅಧಿಕಾರಿಗಳ ಜತೆಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಶೀಘ್ರ ಪರಿಹಾರ ಕಂಡುಕೊಳ್ಳುತ್ತೇವೆ..