<p><strong>ದೇವನಹಳ್ಳಿ:</strong> ನಗರದ ಸುತ್ತಮುತ್ತ ಬುಧವಾರ ಹಾಗೂ ಗುರುವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಆವರಣದಲ್ಲಿ ನೀರು ತುಂಬಿಕೊಂಡಿದೆ.</p>.<p>ಆಲಿಕಲ್ಲು ಮಳೆ ಸುರಿದಿದ್ದರಿಂದ ವಿಮಾನ ಇಳಿಯಲು ಸಮಸ್ಯೆ ಎದುರಾಗಿದ್ದು, ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಬೇರೆಡೆಯಿಂದ ಬೆಂಗಳೂರಿಗೆ ಬಂದ 20ಕ್ಕೂ ಹೆಚ್ಚು ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. </p>.<p>ವಿಮಾನಗಳನ್ನು ಚೆನ್ನೈ, ಹೈದರಾಬಾದ್, ಮಂಗಳೂರು ಸೇರಿದಂತೆ ಬೆಂಗಳೂರಿಗೆ ಹತ್ತಿರದ ವಿಮಾನ ನಿಲ್ದಾಣಗಗಳಿಗೆ ಕಳಿಸಲಾಗಿದೆ. ದೆಹಲಿಯಿಂದ ಬರಬೇಕಿದ್ದ ಕೆಲವು ವಿಮಾನಗಳನ್ನು ಕೂಡ ಚೆನ್ನೈಗೆ ಕಳುಹಿಸಲಾಗಿದೆ.</p>.<p>ಮಳೆಯಿಂದಾಗಿ 30ಕ್ಕೂ ಹೆಚ್ಚು ವಿಮಾನಗಳ ಹಾರಾಟ ಮತ್ತು ಲ್ಯಾಂಡಿಂಗ್ ವಿಳಂಬಗೊಂಡಿದ್ದು, ಪ್ರಯಾಣಿಕರು ತೊಂದರೆ ಅನುಭವಿಸಿದರು.</p>.<p>ವಿಮಾನ ನಿಲ್ದಾಣದ ಬಸ್ ನಿಲ್ದಾಣ ಹಾಗೂ ರಸ್ತೆಗಳಲ್ಲಿ ನೀರು ನುಗ್ಗಿ ಸಂಚಾರಕ್ಕೆ ತೊಂದರೆ ಉಂಟಾಯಿತು.ಇದರಿಂದಾಗಿ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿಯೇ ಹಲವು ತಾಸು ಕಳೆಯಬೇಕಾಯಿತು.</p>.<p>ಏರ್ ಇಂಡಿಯಾ ವಿಮಾನ ಸಂಚಾರ ರದ್ದಾದ ಹಿನ್ನೆಲೆಯಲ್ಲಿ ಸಂಗೀತಗಾರ ರಿಕ್ಕಿ ಕೇಜ್ ಹಾಗೂ ಅವರ ತಂಡ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿತ್ತು. ಬೆಳಗ್ಗೆ 9.55ಕ್ಕೆ ದೆಹಲಿಗೆ ತೆರಳಬೇಕಿದ್ದ ವಿಮಾನ ಹಾರಾಟವನ್ನು ರಾತ್ರಿಗೆ ಮುಂದೂಡಲಾಗಿದೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಇದನ್ನು ಗಮನಿಸಿದ ವಿಮಾನ ನಿಲ್ದಾಣ ಸಿಬ್ಬಂದಿ ಅವರಿಗೆ ಬೇರೆ ವಿಮಾನದಲ್ಲಿ ಆಸನ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.</p>.<p><strong>ಸೋರಿದ ವಿಮಾನ ನಿಲ್ದಾಣ </strong></p><p>ವಿಮಾನ ನಿಲ್ದಾಣದ ಟರ್ಮಿನಲ್–1ರ ಹೊರಭಾಗದ ಮೇಲ್ಛಾವಣಿ ಪೈಪ್ಗಳಿಂದ ಮಳೆನೀರು ಸೋರುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಟರ್ಮಿನಲ್ ಒಳಭಾಗ ಹಾಗೂ ಹೊರಭಾಗದಲ್ಲಿ ನೀರು ನಿಂತಿದೆ. </p><p>‘ಕರ್ನಾಟಕ ಪೋರ್ಟ್ ಫೋಲಿಯೊ’ ಎಂಬ ಎಕ್ಸ್ ಖಾತೆಯಲ್ಲಿ ಕೆಲವು ವಿಡಿಯೊ ಹಂಚಿಕೊಳ್ಳಲಾಗಿದೆ. ‘ಏರ್ಪೋರ್ಟ್ ಮಿನಿ ಜಲಪಾತ ನಿರ್ಮಾಣವಾಗಿದೆ. ನಿರ್ವಹಣೆ ಎಲ್ಲಿದೆ?’ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. </p><p>ಈ ಬಗ್ಗೆ ವಿಮಾನ ನಿಲ್ದಾಣ ಅಧಿಕಾರಿಗಳಿಂದ ಇನ್ನೂ ಅಧಿಕೃತ ಸ್ಪಷ್ಟನೆ ನೀಡಿಲ್ಲ. 2024ರ ಮೇ ತಿಂಗಳಲ್ಲಿ ಟರ್ಮಿನಲ್–2 ಛಾವಣಿಯಲ್ಲಿ ಬಿರುಕು ಕಾಣಿಸಿಕೊಂಡು ನೀರು ಸೋರಿಕೆಯಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ನಗರದ ಸುತ್ತಮುತ್ತ ಬುಧವಾರ ಹಾಗೂ ಗುರುವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಆವರಣದಲ್ಲಿ ನೀರು ತುಂಬಿಕೊಂಡಿದೆ.</p>.<p>ಆಲಿಕಲ್ಲು ಮಳೆ ಸುರಿದಿದ್ದರಿಂದ ವಿಮಾನ ಇಳಿಯಲು ಸಮಸ್ಯೆ ಎದುರಾಗಿದ್ದು, ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಬೇರೆಡೆಯಿಂದ ಬೆಂಗಳೂರಿಗೆ ಬಂದ 20ಕ್ಕೂ ಹೆಚ್ಚು ವಿಮಾನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. </p>.<p>ವಿಮಾನಗಳನ್ನು ಚೆನ್ನೈ, ಹೈದರಾಬಾದ್, ಮಂಗಳೂರು ಸೇರಿದಂತೆ ಬೆಂಗಳೂರಿಗೆ ಹತ್ತಿರದ ವಿಮಾನ ನಿಲ್ದಾಣಗಗಳಿಗೆ ಕಳಿಸಲಾಗಿದೆ. ದೆಹಲಿಯಿಂದ ಬರಬೇಕಿದ್ದ ಕೆಲವು ವಿಮಾನಗಳನ್ನು ಕೂಡ ಚೆನ್ನೈಗೆ ಕಳುಹಿಸಲಾಗಿದೆ.</p>.<p>ಮಳೆಯಿಂದಾಗಿ 30ಕ್ಕೂ ಹೆಚ್ಚು ವಿಮಾನಗಳ ಹಾರಾಟ ಮತ್ತು ಲ್ಯಾಂಡಿಂಗ್ ವಿಳಂಬಗೊಂಡಿದ್ದು, ಪ್ರಯಾಣಿಕರು ತೊಂದರೆ ಅನುಭವಿಸಿದರು.</p>.<p>ವಿಮಾನ ನಿಲ್ದಾಣದ ಬಸ್ ನಿಲ್ದಾಣ ಹಾಗೂ ರಸ್ತೆಗಳಲ್ಲಿ ನೀರು ನುಗ್ಗಿ ಸಂಚಾರಕ್ಕೆ ತೊಂದರೆ ಉಂಟಾಯಿತು.ಇದರಿಂದಾಗಿ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿಯೇ ಹಲವು ತಾಸು ಕಳೆಯಬೇಕಾಯಿತು.</p>.<p>ಏರ್ ಇಂಡಿಯಾ ವಿಮಾನ ಸಂಚಾರ ರದ್ದಾದ ಹಿನ್ನೆಲೆಯಲ್ಲಿ ಸಂಗೀತಗಾರ ರಿಕ್ಕಿ ಕೇಜ್ ಹಾಗೂ ಅವರ ತಂಡ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿತ್ತು. ಬೆಳಗ್ಗೆ 9.55ಕ್ಕೆ ದೆಹಲಿಗೆ ತೆರಳಬೇಕಿದ್ದ ವಿಮಾನ ಹಾರಾಟವನ್ನು ರಾತ್ರಿಗೆ ಮುಂದೂಡಲಾಗಿದೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಇದನ್ನು ಗಮನಿಸಿದ ವಿಮಾನ ನಿಲ್ದಾಣ ಸಿಬ್ಬಂದಿ ಅವರಿಗೆ ಬೇರೆ ವಿಮಾನದಲ್ಲಿ ಆಸನ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.</p>.<p><strong>ಸೋರಿದ ವಿಮಾನ ನಿಲ್ದಾಣ </strong></p><p>ವಿಮಾನ ನಿಲ್ದಾಣದ ಟರ್ಮಿನಲ್–1ರ ಹೊರಭಾಗದ ಮೇಲ್ಛಾವಣಿ ಪೈಪ್ಗಳಿಂದ ಮಳೆನೀರು ಸೋರುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಟರ್ಮಿನಲ್ ಒಳಭಾಗ ಹಾಗೂ ಹೊರಭಾಗದಲ್ಲಿ ನೀರು ನಿಂತಿದೆ. </p><p>‘ಕರ್ನಾಟಕ ಪೋರ್ಟ್ ಫೋಲಿಯೊ’ ಎಂಬ ಎಕ್ಸ್ ಖಾತೆಯಲ್ಲಿ ಕೆಲವು ವಿಡಿಯೊ ಹಂಚಿಕೊಳ್ಳಲಾಗಿದೆ. ‘ಏರ್ಪೋರ್ಟ್ ಮಿನಿ ಜಲಪಾತ ನಿರ್ಮಾಣವಾಗಿದೆ. ನಿರ್ವಹಣೆ ಎಲ್ಲಿದೆ?’ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. </p><p>ಈ ಬಗ್ಗೆ ವಿಮಾನ ನಿಲ್ದಾಣ ಅಧಿಕಾರಿಗಳಿಂದ ಇನ್ನೂ ಅಧಿಕೃತ ಸ್ಪಷ್ಟನೆ ನೀಡಿಲ್ಲ. 2024ರ ಮೇ ತಿಂಗಳಲ್ಲಿ ಟರ್ಮಿನಲ್–2 ಛಾವಣಿಯಲ್ಲಿ ಬಿರುಕು ಕಾಣಿಸಿಕೊಂಡು ನೀರು ಸೋರಿಕೆಯಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>