<p><strong>ಬೆಂಗಳೂರು:</strong> ಸಂವಿಧಾನ ತಜ್ಞ, ಸಂವಿಧಾನದ ಮೂಲಕ ಸಮಾನತೆಯ ಶಕ್ತಿ ತುಂಬಿದ ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ನಗರದ ವಿವಿಧೆಡೆ ಮಂಗಳವಾರ ಆಚರಿಸಲಾಯಿತು.</p>.<p>ರಾಜಕೀಯ ಪಕ್ಷಗಳ ಕಚೇರಿ, ವಿಶ್ವವಿದ್ಯಾಲಯ, ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಜಯಂತಿಯಲ್ಲಿ ಅಂಬೇಡ್ಕರ್ ಅವರ ವಿಚಾರ, ಸಮಾಜದ ಸದ್ಯದ ಸನ್ನಿವೇಶದ ಕುರಿತು ಚರ್ಚೆಗಳು ನಡೆದವು.</p>.<p>‘ಕೆಲವರು ಕಾಲಕ್ಕೆ ಸೀಮಿತವಾದ ನಾಯಕರಾದರೆ ಅಂಬೇಡ್ಕರ್ ಅವರು ಕಾಲಾತೀತ ನಾಯಕ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು.</p>.<p>ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಬುದ್ಧನ ಪ್ರೇರಣೆ, ಬಸವಣ್ಣನ ಸಮಾನತೆ ಇವೆರಡನ್ನೂ ಪಡೆದ ಅಂಬೇಡ್ಕರ್ ಭಾರತಕ್ಕೆ ಸಮಾನತೆ, ಪ್ರಜಾಪ್ರಭುತ್ವ ಮತ್ತು ವ್ಯಕ್ತಿ ಸ್ವಾತಂತ್ರ್ಯವನ್ನು ಕೊಟ್ಟಿರುವ ಶ್ರೇಷ್ಠ ವ್ಯಕ್ತಿ’ ಎಂದರು.</p>.<p>ಸಂಸದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲ ವಾದಿ ನಾರಾಯಣಸ್ವಾಮಿ, ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕ ಸಿಮೆಂಟ್ ಮಂಜುನಾಥ್ ಉಪಸ್ಥಿತರಿದ್ದರು.</p>.<p>‘ವಿಶ್ವವಿದ್ಯಾಲಯಗಳಲ್ಲಿ ಪಠ್ಯವಾಗಬೇಕು’</p>.<p>‘21ನೇ ಶತಮಾನದಲ್ಲೂ ಭಾರತದಲ್ಲಿ ಜಾತಿ ಕ್ರೌರ್ಯ, ಮೇಲು- ಕೀಳು, ಭೇದ- ಭಾವ ಹಾಸು ಹೊಕ್ಕಾಗಿದೆ. ಜಾತಿ ವಿನಾಶದ ಕುರಿತು ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಪಠ್ಯವಾಗಬೇಕು’ ಎಂದು ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ ಅಭಿಪ್ರಾಯಪಟ್ಟರು.</p>.<p>ಜ್ಞಾನಭಾರತಿ ಆವರಣದಲ್ಲಿ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ‘ಆಳುವ ಸರ್ಕಾರಗಳು ಕಣ್ಣು ಮುಚ್ಚಿ ಕೂತಿವೆ. ದೇಶದಲ್ಲಿ ಅಲಿಖಿತ ಸಂವಿಧಾನ ಜಾರಿಯಲ್ಲಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಚಿಂತಕ ಬಂಜಗೆರೆ ಜಯಪ್ರಕಾಶ್, ಕುಲಪತಿ ಡಾ.ಎಸ್.ಎಂ.ಜಯಕರ, ಕುಲಸಚಿವರಾದ ಕೆ.ಟಿ.ಶಾಂತಲಾ, ಸಿ.ಎಸ್.ಕರಿಗಾರ್ ಉಪಸ್ಥಿತರಿದ್ದರು.</p>.<p>‘ಅಂಬೇಡ್ಕರ್ ಅವರ ಬಹುಶಿಸ್ತೀಯ ಚಿಂತನಶೀಲ ಬರವಣಿಗೆಗಳ ಕುರಿತು ವಿದ್ಯಾರ್ಥಿಗಳು ಗಂಭೀರ ಅಧ್ಯಯನ ಮಾಡಬೇಕು’ ಎಂದು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕಿ ಕೆ.ವಿದ್ಯಾಕುಮಾರಿ ತಿಳಿಸಿದರು.</p>.<p>ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಅಂಬೇಡ್ಕರ್ ಅಧ್ಯಯನ ಕೇಂದ್ರ ಆಯೋಜಿಸಿದ್ದ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮುಖ್ಯ ಅತಿಥಿಗಳಾಗಿ ಬಂದಿದ್ದ ಹರಿಕಥಾ ವಿದ್ವಾನ್ ಲಕ್ಷ್ಮಣದಾಸ್ ಅವರು ಅಂಬೇಡ್ಕರ್ ಅವರ ಜೀವನ ವೃತ್ತಾಂತ ಕುರಿತ ಜನಕಥಾ ಕೀರ್ತನೆ ಪ್ರಸ್ತುತಪಡಿಸಿದರು. ಕುಲಪತಿ ಬಿ.ರಮೇಶ್, ಕುಲಸಚಿವರಾದ ಎ.ನವೀನ್ ಜೋಸೆಫ್, ರಮೇಶ.ಬಿ.ಕುಡೇನಟ್ಟಿ, ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕರಾದ ಪ್ರೊ. ಕೆ.ಆರ್.ಜಲಜಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-4-391269791</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಂವಿಧಾನ ತಜ್ಞ, ಸಂವಿಧಾನದ ಮೂಲಕ ಸಮಾನತೆಯ ಶಕ್ತಿ ತುಂಬಿದ ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ನಗರದ ವಿವಿಧೆಡೆ ಮಂಗಳವಾರ ಆಚರಿಸಲಾಯಿತು.</p>.<p>ರಾಜಕೀಯ ಪಕ್ಷಗಳ ಕಚೇರಿ, ವಿಶ್ವವಿದ್ಯಾಲಯ, ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಜಯಂತಿಯಲ್ಲಿ ಅಂಬೇಡ್ಕರ್ ಅವರ ವಿಚಾರ, ಸಮಾಜದ ಸದ್ಯದ ಸನ್ನಿವೇಶದ ಕುರಿತು ಚರ್ಚೆಗಳು ನಡೆದವು.</p>.<p>‘ಕೆಲವರು ಕಾಲಕ್ಕೆ ಸೀಮಿತವಾದ ನಾಯಕರಾದರೆ ಅಂಬೇಡ್ಕರ್ ಅವರು ಕಾಲಾತೀತ ನಾಯಕ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು.</p>.<p>ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಬುದ್ಧನ ಪ್ರೇರಣೆ, ಬಸವಣ್ಣನ ಸಮಾನತೆ ಇವೆರಡನ್ನೂ ಪಡೆದ ಅಂಬೇಡ್ಕರ್ ಭಾರತಕ್ಕೆ ಸಮಾನತೆ, ಪ್ರಜಾಪ್ರಭುತ್ವ ಮತ್ತು ವ್ಯಕ್ತಿ ಸ್ವಾತಂತ್ರ್ಯವನ್ನು ಕೊಟ್ಟಿರುವ ಶ್ರೇಷ್ಠ ವ್ಯಕ್ತಿ’ ಎಂದರು.</p>.<p>ಸಂಸದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲ ವಾದಿ ನಾರಾಯಣಸ್ವಾಮಿ, ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕ ಸಿಮೆಂಟ್ ಮಂಜುನಾಥ್ ಉಪಸ್ಥಿತರಿದ್ದರು.</p>.<p>‘ವಿಶ್ವವಿದ್ಯಾಲಯಗಳಲ್ಲಿ ಪಠ್ಯವಾಗಬೇಕು’</p>.<p>‘21ನೇ ಶತಮಾನದಲ್ಲೂ ಭಾರತದಲ್ಲಿ ಜಾತಿ ಕ್ರೌರ್ಯ, ಮೇಲು- ಕೀಳು, ಭೇದ- ಭಾವ ಹಾಸು ಹೊಕ್ಕಾಗಿದೆ. ಜಾತಿ ವಿನಾಶದ ಕುರಿತು ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಪಠ್ಯವಾಗಬೇಕು’ ಎಂದು ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ ಅಭಿಪ್ರಾಯಪಟ್ಟರು.</p>.<p>ಜ್ಞಾನಭಾರತಿ ಆವರಣದಲ್ಲಿ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ‘ಆಳುವ ಸರ್ಕಾರಗಳು ಕಣ್ಣು ಮುಚ್ಚಿ ಕೂತಿವೆ. ದೇಶದಲ್ಲಿ ಅಲಿಖಿತ ಸಂವಿಧಾನ ಜಾರಿಯಲ್ಲಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಚಿಂತಕ ಬಂಜಗೆರೆ ಜಯಪ್ರಕಾಶ್, ಕುಲಪತಿ ಡಾ.ಎಸ್.ಎಂ.ಜಯಕರ, ಕುಲಸಚಿವರಾದ ಕೆ.ಟಿ.ಶಾಂತಲಾ, ಸಿ.ಎಸ್.ಕರಿಗಾರ್ ಉಪಸ್ಥಿತರಿದ್ದರು.</p>.<p>‘ಅಂಬೇಡ್ಕರ್ ಅವರ ಬಹುಶಿಸ್ತೀಯ ಚಿಂತನಶೀಲ ಬರವಣಿಗೆಗಳ ಕುರಿತು ವಿದ್ಯಾರ್ಥಿಗಳು ಗಂಭೀರ ಅಧ್ಯಯನ ಮಾಡಬೇಕು’ ಎಂದು ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕಿ ಕೆ.ವಿದ್ಯಾಕುಮಾರಿ ತಿಳಿಸಿದರು.</p>.<p>ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯದ ಅಂಬೇಡ್ಕರ್ ಅಧ್ಯಯನ ಕೇಂದ್ರ ಆಯೋಜಿಸಿದ್ದ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮುಖ್ಯ ಅತಿಥಿಗಳಾಗಿ ಬಂದಿದ್ದ ಹರಿಕಥಾ ವಿದ್ವಾನ್ ಲಕ್ಷ್ಮಣದಾಸ್ ಅವರು ಅಂಬೇಡ್ಕರ್ ಅವರ ಜೀವನ ವೃತ್ತಾಂತ ಕುರಿತ ಜನಕಥಾ ಕೀರ್ತನೆ ಪ್ರಸ್ತುತಪಡಿಸಿದರು. ಕುಲಪತಿ ಬಿ.ರಮೇಶ್, ಕುಲಸಚಿವರಾದ ಎ.ನವೀನ್ ಜೋಸೆಫ್, ರಮೇಶ.ಬಿ.ಕುಡೇನಟ್ಟಿ, ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕರಾದ ಪ್ರೊ. ಕೆ.ಆರ್.ಜಲಜಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-4-391269791</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>