<p>ಬೆಂಗಳೂರು: ದಕ್ಷಿಣ ನಗರ ಪಾಲಿಕೆ, ಜಯನಗರ ಕ್ಯಾನೈನ್ ಸ್ಕ್ವಾಡ್ ಮತ್ತು ಶಿವಶಕ್ತಿ ಅಭಿವೃದ್ಧಿ ಟ್ರಸ್ಟ್ ಆಯೋಜಿಸಿದ್ದ ‘ಉಚಿತ ಶ್ವಾನ ದತ್ತು ಸ್ವೀಕಾರ ಮತ್ತು ಲಸಿಕಾ ಶಿಬಿರ’ದಲ್ಲಿ 10 ನಾಯಿಮರಿಗಳು ಮತ್ತು ಒಂದು ಬೆಕ್ಕಿನ ಮರಿ ಹೊಸ ಮನೆ ಕಂಡುಕೊಂಡವು.</p>.<p>ದತ್ತು ಪ್ರಕ್ರಿಯೆಯ ಜೊತೆಗೆ ಶ್ವಾನಗಳ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ಲಸಿಕಾ ಕಾರ್ಯಕ್ರಮದಲ್ಲಿ 20 ಶ್ವಾನಗಳಿಗೆ ಕಂಬೈನ್ಡ್ ವ್ಯಾಕ್ಸಿನ್ ನೀಡಲಾಯಿತು. ರೇಬೀಸ್ ರೋಗ ನಿಯಂತ್ರಣಕ್ಕಾಗಿ 30 ಶ್ವಾನಗಳಿಗೆ ಆಂಟಿ-ರೇಬಿಸ್ ಲಸಿಕೆ ಹಾಕಲಾಯಿತು.</p>.<p>‘ಬೀದಿ ಬದಿಯ ಮತ್ತು ಆಶ್ರಯ ರಹಿತ ಪ್ರಾಣಿಗಳಿಗೆ ಸುರಕ್ಷಿತ ಆಸರೆ ಕಲ್ಪಿಸುವುದು ಹಾಗೂ ಶ್ವಾನಗಳ ಆರೋಗ್ಯ ಕಾಪಾಡುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲೂ ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದು ಪಾಲಿಕೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಶ್ರೀನಾಥ್ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-4-2005786517</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ದಕ್ಷಿಣ ನಗರ ಪಾಲಿಕೆ, ಜಯನಗರ ಕ್ಯಾನೈನ್ ಸ್ಕ್ವಾಡ್ ಮತ್ತು ಶಿವಶಕ್ತಿ ಅಭಿವೃದ್ಧಿ ಟ್ರಸ್ಟ್ ಆಯೋಜಿಸಿದ್ದ ‘ಉಚಿತ ಶ್ವಾನ ದತ್ತು ಸ್ವೀಕಾರ ಮತ್ತು ಲಸಿಕಾ ಶಿಬಿರ’ದಲ್ಲಿ 10 ನಾಯಿಮರಿಗಳು ಮತ್ತು ಒಂದು ಬೆಕ್ಕಿನ ಮರಿ ಹೊಸ ಮನೆ ಕಂಡುಕೊಂಡವು.</p>.<p>ದತ್ತು ಪ್ರಕ್ರಿಯೆಯ ಜೊತೆಗೆ ಶ್ವಾನಗಳ ಆರೋಗ್ಯ ರಕ್ಷಣೆಯ ದೃಷ್ಟಿಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ಲಸಿಕಾ ಕಾರ್ಯಕ್ರಮದಲ್ಲಿ 20 ಶ್ವಾನಗಳಿಗೆ ಕಂಬೈನ್ಡ್ ವ್ಯಾಕ್ಸಿನ್ ನೀಡಲಾಯಿತು. ರೇಬೀಸ್ ರೋಗ ನಿಯಂತ್ರಣಕ್ಕಾಗಿ 30 ಶ್ವಾನಗಳಿಗೆ ಆಂಟಿ-ರೇಬಿಸ್ ಲಸಿಕೆ ಹಾಕಲಾಯಿತು.</p>.<p>‘ಬೀದಿ ಬದಿಯ ಮತ್ತು ಆಶ್ರಯ ರಹಿತ ಪ್ರಾಣಿಗಳಿಗೆ ಸುರಕ್ಷಿತ ಆಸರೆ ಕಲ್ಪಿಸುವುದು ಹಾಗೂ ಶ್ವಾನಗಳ ಆರೋಗ್ಯ ಕಾಪಾಡುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಮುಂದಿನ ದಿನಗಳಲ್ಲೂ ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದು ಪಾಲಿಕೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಶ್ರೀನಾಥ್ ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-4-2005786517</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>