ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತ್ತಿಬೆಲೆ ಪಟಾಕಿ ದುರಂತ: ಲಾರಿ ಚಾಲಕ ಬಂಧನ

Published 13 ಡಿಸೆಂಬರ್ 2023, 15:58 IST
Last Updated 13 ಡಿಸೆಂಬರ್ 2023, 15:58 IST
ಅಕ್ಷರ ಗಾತ್ರ

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಪೊಲೀಸರು, ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ತಮಿಳುನಾಡಿನ ತೆಂಕಾಸಿ ಜಿಲ್ಲೆಯ ತಿರುವೇಂಗಡಮ್‌ ತಾಲ್ಲೂಕಿನ ನಿವಾಸಿ ಲಾರಿ ಚಾಲಕ ಮರದುಪಾಂಡಿ ಮಾರಿಮುತ್ತು (34) ಎಂಬಾತನನ್ನು ಬಂಧಿಸಿದ್ದಾರೆ.

‘ತಮಿಳುನಾಡಿನ ಶಿವಕಾಶಿಯಿಂದ ಪಟಾಕಿಯನ್ನು ಗಡಿಪ್ರದೇಶ ಅತ್ತಿಬೆಲೆಗೆ ಸಾಗಣೆ ಮಾಡಲು ಯಾವುದೇ ಪರವಾನಗಿ ಪಡೆದಿರಲಿಲ್ಲ. ಅಕ್ಟೋಬರ್‌ 7ರಂದು ಶಿವಕಾಶಿಯಿಂದ ಪಟಾಕಿ ತಂದು ಅತ್ತಿಬೆಲೆಯ ಗೋದಾಮಿನಲ್ಲಿ ಇಳಿಸುತ್ತಿದ್ದಾಗ ದುರಂತ ಸಂಭವಿಸಿತ್ತು. ಬೆಂಕಿ ಕಾಣಿಸಿಕೊಂಡ ಮೇಲೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದ. ಪ್ರಕರಣದಲ್ಲಿ 7ನೇ ಆರೋಪಿಯಾಗಿದ್ದ ಮರದುಪಾಂಡಿ ಮಾರಿಮುತ್ತುನನ್ನು ಬಂಧಿಸಲಾಗಿದೆ’ ಎಂದು ಸಿಐಡಿ ಮೂಲಗಳು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT