<p><strong>ಬೆಂಗಳೂರು:</strong> ಸ್ನೇಹಿತನ ನೋಡಲು ಉತ್ತರ ಪ್ರದೇಶದಿಂದ ಬಂದಿದ್ದ ವ್ಯಕ್ತಿಯ ಮೊಬೈಲ್ ಹಾಗೂ ₹2 ಸಾವಿರ ನಗದು ಸುಲಿಗೆ ಮಾಡಿದ ಆರೋಪದಡಿ ಆಟೊ ಚಾಲಕನ ವಿರುದ್ಧ ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ದಿನಗೂಲಿ ನೌಕರರಾಗಿರುವ ಉತ್ತರಪ್ರದೇಶದ ಮೊಹಮದ್ ಆಸೀಫ್ ಅವರ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದ್ದು, ಆರೋಪಿ ಪತ್ತೆಗೆ ಶೋಧ ಕೈಗೊಂಡಿದ್ದಾರೆ.</p>.<p>ಹಿಂದೆ ಚಿಕ್ಕಮಗಳೂರು ಸೇರಿ ಹಲವೆಡೆ ಎಸ್ಟೇಟ್ಗಳಲ್ಲಿ ಕೆಲಸ ಮಾಡಿದ್ದ ಆಸೀಫ್, ಸ್ನೇಹಿತನ ಸಲಹೆಯಂತೆ ಮತ್ತೆ ಉದ್ಯೋಗ ಅರಸಿ ನಗರಕ್ಕೆ ಬಂದಿದ್ದಾರೆ.</p>.<p>‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಶನಿವಾರ ಬೆಳಗಿನ ಜಾವ 4 ಗಂಟೆಗೆ ಬಂದಿಳಿದಿದ್ದಾರೆ. ಜೆ.ಪಿ.ನಗರದಲ್ಲಿ ವಾಸವಿರುವ ಸ್ನೇಹಿತನ ಮನೆಗೆ ತೆರಳಲು ಆಟೊದಲ್ಲಿ ಹೊರಟಿದ್ದಾರೆ. ಆದರೆ, ಚಾಲಕ ಶೇಷಾದ್ರಿಪುರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಅವರನ್ನು ಬೆದರಿಸಿ, ಮೊಬೈಲ್ ಹಾಗೂ ₹ 2 ಸಾವಿರ ನಗದು ಕಿತ್ತುಕೊಂಡು ಪರಾರಿಯಾಗಿದ್ದಾನೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸ್ನೇಹಿತನ ನೋಡಲು ಉತ್ತರ ಪ್ರದೇಶದಿಂದ ಬಂದಿದ್ದ ವ್ಯಕ್ತಿಯ ಮೊಬೈಲ್ ಹಾಗೂ ₹2 ಸಾವಿರ ನಗದು ಸುಲಿಗೆ ಮಾಡಿದ ಆರೋಪದಡಿ ಆಟೊ ಚಾಲಕನ ವಿರುದ್ಧ ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ದಿನಗೂಲಿ ನೌಕರರಾಗಿರುವ ಉತ್ತರಪ್ರದೇಶದ ಮೊಹಮದ್ ಆಸೀಫ್ ಅವರ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದ್ದು, ಆರೋಪಿ ಪತ್ತೆಗೆ ಶೋಧ ಕೈಗೊಂಡಿದ್ದಾರೆ.</p>.<p>ಹಿಂದೆ ಚಿಕ್ಕಮಗಳೂರು ಸೇರಿ ಹಲವೆಡೆ ಎಸ್ಟೇಟ್ಗಳಲ್ಲಿ ಕೆಲಸ ಮಾಡಿದ್ದ ಆಸೀಫ್, ಸ್ನೇಹಿತನ ಸಲಹೆಯಂತೆ ಮತ್ತೆ ಉದ್ಯೋಗ ಅರಸಿ ನಗರಕ್ಕೆ ಬಂದಿದ್ದಾರೆ.</p>.<p>‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಶನಿವಾರ ಬೆಳಗಿನ ಜಾವ 4 ಗಂಟೆಗೆ ಬಂದಿಳಿದಿದ್ದಾರೆ. ಜೆ.ಪಿ.ನಗರದಲ್ಲಿ ವಾಸವಿರುವ ಸ್ನೇಹಿತನ ಮನೆಗೆ ತೆರಳಲು ಆಟೊದಲ್ಲಿ ಹೊರಟಿದ್ದಾರೆ. ಆದರೆ, ಚಾಲಕ ಶೇಷಾದ್ರಿಪುರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಅವರನ್ನು ಬೆದರಿಸಿ, ಮೊಬೈಲ್ ಹಾಗೂ ₹ 2 ಸಾವಿರ ನಗದು ಕಿತ್ತುಕೊಂಡು ಪರಾರಿಯಾಗಿದ್ದಾನೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>