<p><strong>ಬೆಂಗಳೂರು</strong>: ಬೆಂಗಳೂರು ಆಟೊರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟ ಬೆಂಗಳೂರಲ್ಲಿ ಬೈಕ್ ಟ್ಯಾಕ್ಸಿ ನಿಷೇಧಿಸುವಂತೆ ಆಗ್ರಹಿಸಿ ಮಾರ್ಚ್ 20ರಂದು ಆಟೋ ಸಂಚಾರ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದೆ. ಇದರಿಂದ ನಾಳೆ ಸೋಮವಾರ ಇಡೀ ದಿನ ಸಾರ್ವಜನಿಕರಿಗೆ ಆಟೋ ಸೇವೆ ಸಿಗುವುದು ಅನುಮಾನ ಮೂಡಿಸಿದೆ.</p>.<p>ಭಾನುವಾರ ಸಂಜೆ ವೇಳೆಗೆ ಸಿಎಂ ಬೈಕ್ ಟ್ಯಾಕ್ಸಿ ಸೇವೆ ರದ್ದು ಮಾಡದಿದ್ದರೇ ಸೋಮವಾರ ಆಟೋ ಸೇವೆ ಬಂದ್ ಮಾಡುವುದು ನಿಶ್ಚಿತ ಎಂದು ಒಕ್ಕೂಟ ಎಚ್ಚರಿಸಿದೆ.</p>.<p>‘ಸಾರಿಗೆ ಇಲಾಖೆ ಮತ್ತು ಸಾರಿಗೆ ಸಚಿವರ ಕುಮ್ಮಕ್ಕಿನಿಂದ ಬೆಂಗಳೂರಿನಲ್ಲಿ ಕಳೆದ ಎರಡು ವರ್ಷಗಳಿಂದ ಆ್ಯಪ್ ಆಧಾರಿತ ಅನಧಿಕೃತ ವೈಟ್ಬೋರ್ಡ್ ಬೈಕ್ ಟ್ಯಾಕ್ಸಿಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಆಟೊ ಚಾಲಕರ ಸಂಪಾದನೆಯನ್ನು ಹಗಲು ದರೋಡೆ ಮಾಡಲಾಗುತ್ತಿದೆ. ಆಟೊ ಚಾಲಕರ ಭವಿಷ್ಯಕ್ಕೆ ಮಾರಕವಾಗಿರುವ ಈ ಯೋಜನೆಗೆ ಸರ್ಕಾರವೇ ಬೆಂಬಲ ನೀಡುತ್ತಿದೆ’ ಎಂದು ಒಕ್ಕೂಟ ಆರೋಪಿಸಿದೆ.</p>.<p>‘ಅಕ್ರಮ ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಬೇಕೆಂದು ಇದೇ 17ರಿಂದ ಮೂರು ದಿನಗಳವರೆಗೆ ಸರ್ಕಾರಕ್ಕೆ ಗಡುವು ನೀಡುತ್ತಿದ್ದೇವೆ. ಪ್ರತಿಭಟನೆಯ ಸಂಕೇತವಾಗಿ ಆ ಮೂರು ದಿನಗಳಲ್ಲಿ ಎಲ್ಲ ಆಟೊಗಳ ಮೇಲೆ ಕಪ್ಪು ಬಾವುಟ ಪ್ರದರ್ಶಿಸಲಾಗು<br />ವುದು. ದೆಹಲಿ, ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಈ ಬೈಕ್ ಟ್ಯಾಕ್ಸಿ ಗಳನ್ನು ಈಗಾಗಲೇ ಬಹಿಷ್ಕರಿಸಲಾಗಿದೆ. ಚುನಾವಣೆಗೂ ಮುನ್ನ ಇವುಗಳನ್ನು ನಿಯಂತ್ರಿಸದಿದ್ದರೇ ಚುನಾವಣೆಯನ್ನೇ ಬಹಿಷ್ಕರಿಸಲಾಗುವುದು’ ಎಂದು ಒಕ್ಕೂಟ ಆರೋಪಿಸಿದೆ.</p>.<p>ಬೆಂಗಳೂರಿನಲ್ಲಿ 21 ಆಟೊ ಚಾಲಕರ ಸಂಘಟನೆಗಳಿದ್ದು, 2.10 ಲಕ್ಷ ಆಟೊಗಳಿವೆ.</p>.<p><a href="https://www.prajavani.net/district/dakshina-kannada/preparations-was-being-made-to-blast-the-bomb-in-citys-kadri-temple-1024789.html" itemprop="url">ಮಂಗಳೂರು | ಕದ್ರಿ ದೇವಸ್ಥಾನ ಶಾರಿಕ್ ಗುರಿಯಾಗಿತ್ತು: ಎನ್ಐಎ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರು ಆಟೊರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟ ಬೆಂಗಳೂರಲ್ಲಿ ಬೈಕ್ ಟ್ಯಾಕ್ಸಿ ನಿಷೇಧಿಸುವಂತೆ ಆಗ್ರಹಿಸಿ ಮಾರ್ಚ್ 20ರಂದು ಆಟೋ ಸಂಚಾರ ಸ್ಥಗಿತಗೊಳಿಸುವ ಎಚ್ಚರಿಕೆ ನೀಡಿದೆ. ಇದರಿಂದ ನಾಳೆ ಸೋಮವಾರ ಇಡೀ ದಿನ ಸಾರ್ವಜನಿಕರಿಗೆ ಆಟೋ ಸೇವೆ ಸಿಗುವುದು ಅನುಮಾನ ಮೂಡಿಸಿದೆ.</p>.<p>ಭಾನುವಾರ ಸಂಜೆ ವೇಳೆಗೆ ಸಿಎಂ ಬೈಕ್ ಟ್ಯಾಕ್ಸಿ ಸೇವೆ ರದ್ದು ಮಾಡದಿದ್ದರೇ ಸೋಮವಾರ ಆಟೋ ಸೇವೆ ಬಂದ್ ಮಾಡುವುದು ನಿಶ್ಚಿತ ಎಂದು ಒಕ್ಕೂಟ ಎಚ್ಚರಿಸಿದೆ.</p>.<p>‘ಸಾರಿಗೆ ಇಲಾಖೆ ಮತ್ತು ಸಾರಿಗೆ ಸಚಿವರ ಕುಮ್ಮಕ್ಕಿನಿಂದ ಬೆಂಗಳೂರಿನಲ್ಲಿ ಕಳೆದ ಎರಡು ವರ್ಷಗಳಿಂದ ಆ್ಯಪ್ ಆಧಾರಿತ ಅನಧಿಕೃತ ವೈಟ್ಬೋರ್ಡ್ ಬೈಕ್ ಟ್ಯಾಕ್ಸಿಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಆಟೊ ಚಾಲಕರ ಸಂಪಾದನೆಯನ್ನು ಹಗಲು ದರೋಡೆ ಮಾಡಲಾಗುತ್ತಿದೆ. ಆಟೊ ಚಾಲಕರ ಭವಿಷ್ಯಕ್ಕೆ ಮಾರಕವಾಗಿರುವ ಈ ಯೋಜನೆಗೆ ಸರ್ಕಾರವೇ ಬೆಂಬಲ ನೀಡುತ್ತಿದೆ’ ಎಂದು ಒಕ್ಕೂಟ ಆರೋಪಿಸಿದೆ.</p>.<p>‘ಅಕ್ರಮ ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಬೇಕೆಂದು ಇದೇ 17ರಿಂದ ಮೂರು ದಿನಗಳವರೆಗೆ ಸರ್ಕಾರಕ್ಕೆ ಗಡುವು ನೀಡುತ್ತಿದ್ದೇವೆ. ಪ್ರತಿಭಟನೆಯ ಸಂಕೇತವಾಗಿ ಆ ಮೂರು ದಿನಗಳಲ್ಲಿ ಎಲ್ಲ ಆಟೊಗಳ ಮೇಲೆ ಕಪ್ಪು ಬಾವುಟ ಪ್ರದರ್ಶಿಸಲಾಗು<br />ವುದು. ದೆಹಲಿ, ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಈ ಬೈಕ್ ಟ್ಯಾಕ್ಸಿ ಗಳನ್ನು ಈಗಾಗಲೇ ಬಹಿಷ್ಕರಿಸಲಾಗಿದೆ. ಚುನಾವಣೆಗೂ ಮುನ್ನ ಇವುಗಳನ್ನು ನಿಯಂತ್ರಿಸದಿದ್ದರೇ ಚುನಾವಣೆಯನ್ನೇ ಬಹಿಷ್ಕರಿಸಲಾಗುವುದು’ ಎಂದು ಒಕ್ಕೂಟ ಆರೋಪಿಸಿದೆ.</p>.<p>ಬೆಂಗಳೂರಿನಲ್ಲಿ 21 ಆಟೊ ಚಾಲಕರ ಸಂಘಟನೆಗಳಿದ್ದು, 2.10 ಲಕ್ಷ ಆಟೊಗಳಿವೆ.</p>.<p><a href="https://www.prajavani.net/district/dakshina-kannada/preparations-was-being-made-to-blast-the-bomb-in-citys-kadri-temple-1024789.html" itemprop="url">ಮಂಗಳೂರು | ಕದ್ರಿ ದೇವಸ್ಥಾನ ಶಾರಿಕ್ ಗುರಿಯಾಗಿತ್ತು: ಎನ್ಐಎ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>