<p><strong>ಬೆಂಗಳೂರು</strong>: ನಗರದ ಕನಕಪುರ ರಸ್ತೆಯಲ್ಲಿ ಶನಿವಾರ ಬನಶಂಕರಿ ದೇವಿಯ ರಥೋತ್ಸವ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ನೆರವೇರಿತು. ಭಕ್ತರು ಉತ್ತತ್ತಿ, ಬಾಳೆ ಹಣ್ಣು ಎಸೆದು ಹರಕೆ ತೀರಿಸಿದರು.</p>.<p>ಬೆಳಿಗ್ಗಿನಿಂದ ಮೃತ್ಯುಂಜಯ ಪುರಸ್ಸರ ನವಗ್ರಹ ಶಾಂತಿ, ದೇವಿ ಮೂಲಮಂತ್ರ ಹೋಮ, ರಥಾಂಗಹೋಮಗಳು ಜರುಗಿದವು. ಮಧ್ಯಾಹ್ನ ಬನಶಂಕರಿ ಅಮ್ಮನವರ ಮೂರ್ತಿಯನ್ನು ಬ್ರಹ್ಮರಥದಲ್ಲಿ ಪ್ರತಿಷ್ಠಾಪಿಸಿ ರಥೋತ್ಸವ ನಡೆಸಲಾಯಿತು. ಜನರು ರಥ ಎಳೆದು ಭಕ್ತಿ ಭಾವ ಪ್ರದರ್ಶಿಸಿದರು.</p>.<p>ವೀರಗಾಸೆ, ಗೊಂಬೆ ಕುಣಿತ, ದೇವರ ಪಟ ಕುಣಿತ, ಚೆಂಡೆ ವಾದನಗಳು ಸಾಥ್ ನೀಡಿದವು. ಬನಶಂಕರಿ ದೇವಸ್ಥಾನದಲ್ಲಿ ಮಾತ್ರವಲ್ಲದೇ ಸುತ್ತಮುತ್ತಲಿನ ಎಲ್ಲ ದೇವಸ್ಥಾನಗಳಲ್ಲಿ ಪ್ರಸಾದ ವಿತರಣೆ ನಡೆಯಿತು. ಪೊಲೀಸರು ಬಿಗಿ ಬಂದೋಬಸ್ತು ಒದಗಿಸಿದ್ದರು.</p>.<p>ಸಂಜೆ ಶಾಕಾಂಬರಿ ದೇವಿಗೆ ದೂಳೋತ್ಸವ, ಬನಶಂಕರಿ ದೇವಿ, ಚೌಡೇಶ್ವರಿ ದೇವಿ, ಪುಟ್ಟೇನಹಳ್ಳಿ ಆಂಜನೇಯ ಸ್ವಾಮಿ, ಪಾರ್ವತಿ ಪರಮೇಶ್ವರ ದೇವರು, ಸೀತಾಲಕ್ಷ್ಮಣ ಹನುಮಂತ ಸಮೇತ ರಾಮಚಂದ್ರ ಸ್ವಾಮಿಗೆ, ಮಹಾಗಣಪತಿ, ವರಪ್ರಸಾದ್ ಆಂಜನೇಯ ಸ್ವಾಮಿ, ಸುಬ್ರಹ್ಮಣ್ಯೇಶ್ವರ ಸ್ವಾಮಿಗೆ ಮುತ್ತಿನ ಪಲಕ್ಕಿ ಉತ್ಸವ ನೆರವೇರಿತು.</p>.<p>‘ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮಾದಾಯ ದತ್ತಿ ಇಲಾಖೆ ವತಿಯಿಂದ ಬ್ರಹ್ಮರಥೋತ್ಸವ ಶಾಂತಿಯುತವಾಗಿ ನೆರವೇರಿತು’ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಕನಕಪುರ ರಸ್ತೆಯಲ್ಲಿ ಶನಿವಾರ ಬನಶಂಕರಿ ದೇವಿಯ ರಥೋತ್ಸವ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ನೆರವೇರಿತು. ಭಕ್ತರು ಉತ್ತತ್ತಿ, ಬಾಳೆ ಹಣ್ಣು ಎಸೆದು ಹರಕೆ ತೀರಿಸಿದರು.</p>.<p>ಬೆಳಿಗ್ಗಿನಿಂದ ಮೃತ್ಯುಂಜಯ ಪುರಸ್ಸರ ನವಗ್ರಹ ಶಾಂತಿ, ದೇವಿ ಮೂಲಮಂತ್ರ ಹೋಮ, ರಥಾಂಗಹೋಮಗಳು ಜರುಗಿದವು. ಮಧ್ಯಾಹ್ನ ಬನಶಂಕರಿ ಅಮ್ಮನವರ ಮೂರ್ತಿಯನ್ನು ಬ್ರಹ್ಮರಥದಲ್ಲಿ ಪ್ರತಿಷ್ಠಾಪಿಸಿ ರಥೋತ್ಸವ ನಡೆಸಲಾಯಿತು. ಜನರು ರಥ ಎಳೆದು ಭಕ್ತಿ ಭಾವ ಪ್ರದರ್ಶಿಸಿದರು.</p>.<p>ವೀರಗಾಸೆ, ಗೊಂಬೆ ಕುಣಿತ, ದೇವರ ಪಟ ಕುಣಿತ, ಚೆಂಡೆ ವಾದನಗಳು ಸಾಥ್ ನೀಡಿದವು. ಬನಶಂಕರಿ ದೇವಸ್ಥಾನದಲ್ಲಿ ಮಾತ್ರವಲ್ಲದೇ ಸುತ್ತಮುತ್ತಲಿನ ಎಲ್ಲ ದೇವಸ್ಥಾನಗಳಲ್ಲಿ ಪ್ರಸಾದ ವಿತರಣೆ ನಡೆಯಿತು. ಪೊಲೀಸರು ಬಿಗಿ ಬಂದೋಬಸ್ತು ಒದಗಿಸಿದ್ದರು.</p>.<p>ಸಂಜೆ ಶಾಕಾಂಬರಿ ದೇವಿಗೆ ದೂಳೋತ್ಸವ, ಬನಶಂಕರಿ ದೇವಿ, ಚೌಡೇಶ್ವರಿ ದೇವಿ, ಪುಟ್ಟೇನಹಳ್ಳಿ ಆಂಜನೇಯ ಸ್ವಾಮಿ, ಪಾರ್ವತಿ ಪರಮೇಶ್ವರ ದೇವರು, ಸೀತಾಲಕ್ಷ್ಮಣ ಹನುಮಂತ ಸಮೇತ ರಾಮಚಂದ್ರ ಸ್ವಾಮಿಗೆ, ಮಹಾಗಣಪತಿ, ವರಪ್ರಸಾದ್ ಆಂಜನೇಯ ಸ್ವಾಮಿ, ಸುಬ್ರಹ್ಮಣ್ಯೇಶ್ವರ ಸ್ವಾಮಿಗೆ ಮುತ್ತಿನ ಪಲಕ್ಕಿ ಉತ್ಸವ ನೆರವೇರಿತು.</p>.<p>‘ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮಾದಾಯ ದತ್ತಿ ಇಲಾಖೆ ವತಿಯಿಂದ ಬ್ರಹ್ಮರಥೋತ್ಸವ ಶಾಂತಿಯುತವಾಗಿ ನೆರವೇರಿತು’ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>