<p><strong>ಬೆಂಗಳೂರು</strong>: ನಗರದ ವಿವಿಧೆಡೆ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಡಿ.ಜೆ.ಹಳ್ಳಿ ನಿವಾಸಿ ಮೊಹಮದ್ ರಾಖೀಬ್, ಕೆ.ಜಿ.ಹಳ್ಳಿಯ ರಫೀಕ್ ಬಾಷ ಹಾಗೂ ಪೀಣ್ಯ ನಿವಾಸಿ ಮೊಹಮದ್ ಅಸ್ಗರ್ ಎಂಬುವರನ್ನು ಬಂಧಿಸಿ, ₹5.50 ಲಕ್ಷ ಮೌಲ್ಯದ ಹತ್ತು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಠಾಣಾ ವ್ಯಾಪ್ತಿಯ ಲಿಂಗರಾಜಪುರದ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡು, ಪೊಲೀಸರು ತನಿಖೆ ಕೈಗೊಂಡರು. <br /><br />ಸಿ.ಸಿ.ಟಿ.ವಿ. ಕ್ಯಾಮೆರಾಗಳ ದೃಶ್ಯಾವಳಿ ಪರಿಶೀಲನೆ ಹಾಗೂ ಬಾತ್ಮೀದಾರರ ಮಾಹಿತಿ ಆಧರಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ವಾಹನಗಳನ್ನು ಕಳವು ಮಾಡಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡರು ಎಂದು ಪೊಲೀಸರು ತಿಳಿಸಿದರು.</p>.<p>ವಿವಿಧ ಕಂಪನಿಯ ಹತ್ತು ದ್ವಿಚಕ್ರ ವಾಹನಗಳನ್ನು ಶಾಂಪುರ ಎಂಬ ಸ್ಥಳದಲ್ಲಿ ವಶಕ್ಕೆ ಪಡೆದುಕೊಳ್ಳಲಾಯಿತು.</p>.<p>ಆರೋಪಿಗಳ ಬಂಧನದಿಂದ ಬಾಣಸವಾಡಿ ಪೊಲೀಸ್ ಠಾಣೆಯ ಎರಡು, ಡಿ.ಜೆ.ಹಳ್ಳಿ ಪೊಲೀಸ್ ಠಾಣೆ, ಗೋವಿಂದಪುರ, ರಾಜರಾಜೇಶ್ವರಿ, ಉಪ್ಪಾರಪೇಟೆ, ನೆಲಮಂಗಲ ಪೊಲೀಸ್ ಠಾಣೆಯ ತಲಾ ಒಂದು ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಪತ್ತೆಯಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ವಿವಿಧೆಡೆ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಡಿ.ಜೆ.ಹಳ್ಳಿ ನಿವಾಸಿ ಮೊಹಮದ್ ರಾಖೀಬ್, ಕೆ.ಜಿ.ಹಳ್ಳಿಯ ರಫೀಕ್ ಬಾಷ ಹಾಗೂ ಪೀಣ್ಯ ನಿವಾಸಿ ಮೊಹಮದ್ ಅಸ್ಗರ್ ಎಂಬುವರನ್ನು ಬಂಧಿಸಿ, ₹5.50 ಲಕ್ಷ ಮೌಲ್ಯದ ಹತ್ತು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<p>ಠಾಣಾ ವ್ಯಾಪ್ತಿಯ ಲಿಂಗರಾಜಪುರದ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡು, ಪೊಲೀಸರು ತನಿಖೆ ಕೈಗೊಂಡರು. <br /><br />ಸಿ.ಸಿ.ಟಿ.ವಿ. ಕ್ಯಾಮೆರಾಗಳ ದೃಶ್ಯಾವಳಿ ಪರಿಶೀಲನೆ ಹಾಗೂ ಬಾತ್ಮೀದಾರರ ಮಾಹಿತಿ ಆಧರಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ವಾಹನಗಳನ್ನು ಕಳವು ಮಾಡಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡರು ಎಂದು ಪೊಲೀಸರು ತಿಳಿಸಿದರು.</p>.<p>ವಿವಿಧ ಕಂಪನಿಯ ಹತ್ತು ದ್ವಿಚಕ್ರ ವಾಹನಗಳನ್ನು ಶಾಂಪುರ ಎಂಬ ಸ್ಥಳದಲ್ಲಿ ವಶಕ್ಕೆ ಪಡೆದುಕೊಳ್ಳಲಾಯಿತು.</p>.<p>ಆರೋಪಿಗಳ ಬಂಧನದಿಂದ ಬಾಣಸವಾಡಿ ಪೊಲೀಸ್ ಠಾಣೆಯ ಎರಡು, ಡಿ.ಜೆ.ಹಳ್ಳಿ ಪೊಲೀಸ್ ಠಾಣೆ, ಗೋವಿಂದಪುರ, ರಾಜರಾಜೇಶ್ವರಿ, ಉಪ್ಪಾರಪೇಟೆ, ನೆಲಮಂಗಲ ಪೊಲೀಸ್ ಠಾಣೆಯ ತಲಾ ಒಂದು ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಪತ್ತೆಯಾಗಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>