‘ಈ ವಿಷಯದಲ್ಲಿ ಮಾರ್ಗಸೂಚಿಗಳನ್ನು ರಚಿಸಲು ಯಾವ ಕಾನೂನಿನ ಅಡಿಯಲ್ಲಿ ನಿಮಗೆ ಅಧಿಕಾರವಿದೆ ಎಂಬುದನ್ನು ತೋರಿಸಿ’ ಎಂದು ಬಿಬಿಎಂಪಿ ಪರ ವಕೀಲರನ್ನು ನ್ಯಾಯಪೀಠ ಖಾರವಾಗಿ ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಬಿಬಿಎಂಪಿ ಪರ ವಕೀಲ ವಿ.ಶ್ರೀನಿಧಿ, ‘ಮಾರ್ಗಸೂಚಿ ಆಕ್ಷೇಪಿಸಿ ನಗರದ ಪ್ರಾಣಿ ಪ್ರಿಯರು, ಸಂಘ ಸಂಸ್ಥೆಗಳು ಮತ್ತು ಸಾರ್ವಜನಿಕರಿಂದ ಈಗಾಗಲೇ ಹಲವು ಮನವಿಗಳು ಬಂದಿವೆ. ಹೀಗಾಗಿ ಅಧಿಸೂಚನೆ ಮರುಪರಿಶೀಲಿಸಲಾಗುವುದು. ಅದಕ್ಕಾಗಿ ಕಾಲಾವಕಾಶ ನೀಡಬೇಕು’ ಎಂದು ಕೋರಿದರು.