<p><strong>ಬೆಂಗಳೂರು</strong>: ಕಲಾಸಿಪಾಳ್ಯದಲ್ಲಿ ಸುಸಜ್ಜಿತ ಬಸ್ ನಿಲ್ದಾಣದ (ಟಿಟಿಎಂಸಿ) ಕಾಮಗಾರಿ ಆರಂಭವಾಗಿ ನಾಲ್ಕು ವರ್ಷಗಳು ಕಳೆದಿವೆ. ಇನ್ನೂ ಕಾಮಗಾರಿ ಕುಂಟುತ್ತಾ ಸಾಗಿದೆ.</p>.<p>1940ರಲ್ಲಿ ದಿವಾನರಾಗಿದ್ದ ಸರ್ ಮಿರ್ಜಾ ಇಸ್ಮಾಯಿಲ್ ಅವರ ಮಾರ್ಗದರ್ಶನದಲ್ಲಿ ಇಲ್ಲಿ ಬಸ್ ನಿಲ್ದಾಣ ಸ್ಥಾಪಿಸಲಾಗಿತ್ತು. ರಾಜ್ಯದ ಪ್ರಮುಖ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ನಿಲ್ದಾಣ ಇದಾಗಿತ್ತು. ಕೆ.ಆರ್.ಮಾರುಕಟ್ಟೆಗೆ ಸಮೀಪ ಇರುವ ಕಾರಣ ಇದು ಈಗಲೂ ಅತ್ಯಂತ ಜನನಿಬಿಡ ಪ್ರದೇಶ.</p>.<p>ಈ ಜಾಗದಲ್ಲಿ ಸುಸಜ್ಜಿತ ಟಿಟಿಎಂಸಿ ನಿರ್ಮಾಣಕ್ಕೆ 2016ರಲ್ಲಿ ಅಂದಿನ ಮುಖ್ಯ ಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿ ದ್ದರು. 4.13 ಎಕರೆ ವಿಸ್ತೀರ್ಣದಲ್ಲಿ ₹60 ಕೋಟಿ ವೆಚ್ಚದಲ್ಲಿ ನಿಲ್ದಾಣ ನಿರ್ಮಾಣವಾಗುತ್ತಿದೆ.</p>.<p>‘ಕೆಎಂವಿ ಪ್ರಾಜೆಕ್ಟ್ಸ್ ಲಿಮಿಟೆಡ್ ಸಂಸ್ಥೆಯು ಯೋಜನೆಯ ಗುತ್ತಿಗೆ ಪಡೆದಿದ್ದು, ನಿಗದಿಯಂತೆ 2019ರ ನವೆಂಬರ್ನಲ್ಲೇ ಕಾಮಗಾರಿ ಮುಗಿಯಬೇಕಿತ್ತು. ಆದರೆ, ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ನವೆಂಬರ್ನಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರಲಿಲ್ಲ. ಆದರೆ, ಅನುದಾನ ಬಿಡುಗಡೆ ವಿಳಂಬವಾದ ಕಾರಣ ಕಾಮಗಾರಿ ವಿಳಂಬವಾಯಿತು’ ಎನ್ನುತ್ತಾರೆ ಗುತ್ತಿಗೆದಾರರು.</p>.<p>‘ಅನುದಾನ ಬಿಡುಗಡೆಯಾದ ಬಳಿಕ ಲಾಕ್ಡೌನ್ ಜಾರಿಯಾಯಿತು. ಬಳಿಕ ಕಾರ್ಮಿಕರ ಕೊರತೆಯಿಂದಾಗಿ ಈ ಕಾಮಗಾರಿ ಯೂ ಸ್ಥಗಿತಗೊಂಡಿತ್ತು. ಈಗ ತ್ವರಿತಗತಿಯಲ್ಲಿ ಕೆಲಸ ನಡೆಸುತ್ತಿದ್ದೇವೆ. ಶೀಘ್ರವೇ ಪೂರ್ಣಗೊಳಿಸುತ್ತೇವೆ’ ಎಂದು ಅವರು ಹೇಳುತ್ತಾರೆ.</p>.<p>ಈ ಟಿಟಿಎಂಸಿಯಿಂದ ಬಿಎಂಟಿಸಿ ಬಸ್ಗಳು ಮಾತ್ರವಲ್ಲ ಕೆಎಸ್ಆರ್ಟಿಸಿ ಬಸ್ಗಳೂ ಕಾರ್ಯಾಚರಣೆ ನಡೆಸಲಿವೆ. ನಿರ್ಮಾಣವಾಗಿರುವ ಕಟ್ಟಡದ ಒಳಗೆ ಕೆಎಸ್ಆರ್ಟಿಸಿ ಬಸ್ಗಳು ನಿಲ್ಲಲಿದ್ದು, ಹೊರಾಂಗಣದಲ್ಲಿ ಬಿಎಂಟಿಸಿ ಬಸ್ಗಳಿಗೆ ಸ್ಥಳಾವಕಾಶ ಕಲ್ಪಿಸಲಾಗುತ್ತದೆ. ಬಸ್ಗಳು ಮತ್ತು ಪ್ರಯಾಣಿಕರ ನಿಲುಗಡೆಗೆ ಪ್ರತ್ಯೇಕ ತಾಣಗಳನ್ನು ನಿರ್ಮಿಸಲಾಗಿದೆ.</p>.<p>ಕೆ.ಆರ್. ಮಾರುಕಟ್ಟೆ ಕಡೆಯಿಂದ ಬರುವ ಜನರು ನೇರವಾಗಿ ಕೆಎಸ್ಆರ್ಟಿಸಿ ಬಸ್ ನಿಲುಗಡೆ ತಾಣದ ಕಡೆಗೆ ಹೋಗಲು ಸುರಂಗ ಮಾರ್ಗವೊಂದನ್ನು ನಿರ್ಮಿಸಲಾಗಿದೆ. ಬಿಎಂಟಿಸಿ ಬಸ್ಗಳು ನಿಲ್ಲುವ ಜಾಗದಿಂದ ಮೇಲಕ್ಕೆ ಹತ್ತಲು ಅಲ್ಲಲ್ಲಿ ಮೆಟ್ಟಿಲುಗಳನ್ನು ನಿರ್ಮಿಸಲಾಗಿದೆ.</p>.<p>ಸುಸಜ್ಜಿತವಾದ ಟಿಟಿಎಂಸಿ ನಿರ್ಮಾಣವಾಗುತ್ತಿರುವುದು ಖುಷಿಯ ವಿಚಾರ. ಆದರೆ, ಅದು ಸಾರ್ವಜನಿಕರ ಬಳಕೆಗೆ ಲಭ್ಯವಾಗಲು ಇನ್ನೂ ಕಾಲಾವಕಾಶ ಹಿಡಿಯಲಿದೆ. ಕಾಮಗಾರಿಯನ್ನು ಚುರುಕುಗೊಳಿಸಿದರೆ ಒಳ್ಳೆಯದು ಎನ್ನುತ್ತಾರೆ ಸ್ಥಳೀಯರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಲಾಸಿಪಾಳ್ಯದಲ್ಲಿ ಸುಸಜ್ಜಿತ ಬಸ್ ನಿಲ್ದಾಣದ (ಟಿಟಿಎಂಸಿ) ಕಾಮಗಾರಿ ಆರಂಭವಾಗಿ ನಾಲ್ಕು ವರ್ಷಗಳು ಕಳೆದಿವೆ. ಇನ್ನೂ ಕಾಮಗಾರಿ ಕುಂಟುತ್ತಾ ಸಾಗಿದೆ.</p>.<p>1940ರಲ್ಲಿ ದಿವಾನರಾಗಿದ್ದ ಸರ್ ಮಿರ್ಜಾ ಇಸ್ಮಾಯಿಲ್ ಅವರ ಮಾರ್ಗದರ್ಶನದಲ್ಲಿ ಇಲ್ಲಿ ಬಸ್ ನಿಲ್ದಾಣ ಸ್ಥಾಪಿಸಲಾಗಿತ್ತು. ರಾಜ್ಯದ ಪ್ರಮುಖ ಸ್ಥಳಗಳಿಗೆ ಸಂಪರ್ಕ ಕಲ್ಪಿಸುವ ನಿಲ್ದಾಣ ಇದಾಗಿತ್ತು. ಕೆ.ಆರ್.ಮಾರುಕಟ್ಟೆಗೆ ಸಮೀಪ ಇರುವ ಕಾರಣ ಇದು ಈಗಲೂ ಅತ್ಯಂತ ಜನನಿಬಿಡ ಪ್ರದೇಶ.</p>.<p>ಈ ಜಾಗದಲ್ಲಿ ಸುಸಜ್ಜಿತ ಟಿಟಿಎಂಸಿ ನಿರ್ಮಾಣಕ್ಕೆ 2016ರಲ್ಲಿ ಅಂದಿನ ಮುಖ್ಯ ಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿ ದ್ದರು. 4.13 ಎಕರೆ ವಿಸ್ತೀರ್ಣದಲ್ಲಿ ₹60 ಕೋಟಿ ವೆಚ್ಚದಲ್ಲಿ ನಿಲ್ದಾಣ ನಿರ್ಮಾಣವಾಗುತ್ತಿದೆ.</p>.<p>‘ಕೆಎಂವಿ ಪ್ರಾಜೆಕ್ಟ್ಸ್ ಲಿಮಿಟೆಡ್ ಸಂಸ್ಥೆಯು ಯೋಜನೆಯ ಗುತ್ತಿಗೆ ಪಡೆದಿದ್ದು, ನಿಗದಿಯಂತೆ 2019ರ ನವೆಂಬರ್ನಲ್ಲೇ ಕಾಮಗಾರಿ ಮುಗಿಯಬೇಕಿತ್ತು. ಆದರೆ, ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ನವೆಂಬರ್ನಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರಲಿಲ್ಲ. ಆದರೆ, ಅನುದಾನ ಬಿಡುಗಡೆ ವಿಳಂಬವಾದ ಕಾರಣ ಕಾಮಗಾರಿ ವಿಳಂಬವಾಯಿತು’ ಎನ್ನುತ್ತಾರೆ ಗುತ್ತಿಗೆದಾರರು.</p>.<p>‘ಅನುದಾನ ಬಿಡುಗಡೆಯಾದ ಬಳಿಕ ಲಾಕ್ಡೌನ್ ಜಾರಿಯಾಯಿತು. ಬಳಿಕ ಕಾರ್ಮಿಕರ ಕೊರತೆಯಿಂದಾಗಿ ಈ ಕಾಮಗಾರಿ ಯೂ ಸ್ಥಗಿತಗೊಂಡಿತ್ತು. ಈಗ ತ್ವರಿತಗತಿಯಲ್ಲಿ ಕೆಲಸ ನಡೆಸುತ್ತಿದ್ದೇವೆ. ಶೀಘ್ರವೇ ಪೂರ್ಣಗೊಳಿಸುತ್ತೇವೆ’ ಎಂದು ಅವರು ಹೇಳುತ್ತಾರೆ.</p>.<p>ಈ ಟಿಟಿಎಂಸಿಯಿಂದ ಬಿಎಂಟಿಸಿ ಬಸ್ಗಳು ಮಾತ್ರವಲ್ಲ ಕೆಎಸ್ಆರ್ಟಿಸಿ ಬಸ್ಗಳೂ ಕಾರ್ಯಾಚರಣೆ ನಡೆಸಲಿವೆ. ನಿರ್ಮಾಣವಾಗಿರುವ ಕಟ್ಟಡದ ಒಳಗೆ ಕೆಎಸ್ಆರ್ಟಿಸಿ ಬಸ್ಗಳು ನಿಲ್ಲಲಿದ್ದು, ಹೊರಾಂಗಣದಲ್ಲಿ ಬಿಎಂಟಿಸಿ ಬಸ್ಗಳಿಗೆ ಸ್ಥಳಾವಕಾಶ ಕಲ್ಪಿಸಲಾಗುತ್ತದೆ. ಬಸ್ಗಳು ಮತ್ತು ಪ್ರಯಾಣಿಕರ ನಿಲುಗಡೆಗೆ ಪ್ರತ್ಯೇಕ ತಾಣಗಳನ್ನು ನಿರ್ಮಿಸಲಾಗಿದೆ.</p>.<p>ಕೆ.ಆರ್. ಮಾರುಕಟ್ಟೆ ಕಡೆಯಿಂದ ಬರುವ ಜನರು ನೇರವಾಗಿ ಕೆಎಸ್ಆರ್ಟಿಸಿ ಬಸ್ ನಿಲುಗಡೆ ತಾಣದ ಕಡೆಗೆ ಹೋಗಲು ಸುರಂಗ ಮಾರ್ಗವೊಂದನ್ನು ನಿರ್ಮಿಸಲಾಗಿದೆ. ಬಿಎಂಟಿಸಿ ಬಸ್ಗಳು ನಿಲ್ಲುವ ಜಾಗದಿಂದ ಮೇಲಕ್ಕೆ ಹತ್ತಲು ಅಲ್ಲಲ್ಲಿ ಮೆಟ್ಟಿಲುಗಳನ್ನು ನಿರ್ಮಿಸಲಾಗಿದೆ.</p>.<p>ಸುಸಜ್ಜಿತವಾದ ಟಿಟಿಎಂಸಿ ನಿರ್ಮಾಣವಾಗುತ್ತಿರುವುದು ಖುಷಿಯ ವಿಚಾರ. ಆದರೆ, ಅದು ಸಾರ್ವಜನಿಕರ ಬಳಕೆಗೆ ಲಭ್ಯವಾಗಲು ಇನ್ನೂ ಕಾಲಾವಕಾಶ ಹಿಡಿಯಲಿದೆ. ಕಾಮಗಾರಿಯನ್ನು ಚುರುಕುಗೊಳಿಸಿದರೆ ಒಳ್ಳೆಯದು ಎನ್ನುತ್ತಾರೆ ಸ್ಥಳೀಯರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>