<p>ಬೆಂಗಳೂರು: ಗ್ರಾಮೀಣ ಭಾಗದ ವಿದ್ಯುತ್ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಬೆಸ್ಕಾಂ ವ್ಯಾಪ್ತಿಯ 104 ಗ್ರಾಮಗಳಲ್ಲಿ ಶನಿವಾರ ನಡೆದ ಮೊದಲ ವಿದ್ಯುತ್ ಅದಾಲತ್ಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.</p>.<p>ಗ್ರಾಹಕರು ವಿದ್ಯುತ್ ಸಂಬಂಧಿತ ಸಮಸ್ಯೆಗಳ ಕುರಿತು ಹಿರಿಯ ಅಧಿಕಾರಿಗಳ ಗಮನ ಸೆಳೆದರು.</p>.<p>ಹೊಸ ಪರಿವರ್ತಕಗಳು, ಹೆಚ್ಚುವರಿ ವಿದ್ಯುತ್ ಕಂಬಗಳು, ಹೊಸ ವಿದ್ಯುತ್ ಸಂಪರ್ಕ, ಗುಣಮಟ್ಟದ ವಿದ್ಯುತ್ ಪೂರೈಕೆ, ಹಳೇ ಲೈನ್ ಬದಲಾವಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಗ್ರಾಹಕರು ಬೆಸ್ಕಾಂ ಅಧಿಕಾರಿಗಳ ಮುಂದಿಟ್ಟರು.</p>.<p>ಬಿಲ್ಲಿಂಗ್, ವಿದ್ಯುತ್ ವ್ಯತ್ಯಯ, ಹೊಸ ಸಂಪರ್ಕ, ಹೊಸ ವಿದ್ಯುತ್ ಪರಿವರ್ತಕ, ಎಲ್ಟಿ ಲೈನ್ ಬೇಡಿಕೆ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಗ್ರಾಹಕರು ಅದಾಲತ್ನಲ್ಲಿ ಗಮನ ಸೆಳೆದರು ಎಂದು ಅಧಿಕಾರಿಗಳು ತಿಳಿಸಿದರು.</p>.<p>ಸುಮಾರು 150 ಮಂದಿ ಅದಾಲತ್ನಲ್ಲಿ ಭಾಗವಹಿಸಿದ್ದರು. ಹೊಸ ವಿದ್ಯುತ್ ಸಂಪರ್ಕಗಳಿಗೆ ಗ್ರಾಹಕರಿಂದ ಬೇಡಿಕೆ ವ್ಯಕ್ತವಾಯಿತು. ಬೆಳಕು ಯೋಜನೆ ಮತ್ತಿತರ ಬೆಸ್ಕಾಂ ವಿದ್ಯುತ್ ಯೋಜನೆಗಳಿಗೆ ಗ್ರಾಹಕರು ನಿರ್ದೇಶಕರಿಗೆ ಬೇಡಿಕೆ ಸಲ್ಲಿಸಿದರು.</p>.<p>ಅದಾಲತ್ಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೊಸ ವಿದ್ಯುತ್ ಸಂಪರ್ಕಕಕ್ಕೆ ಅರ್ಜಿ ಸಲ್ಲಿಸಿರುವ ಗ್ರಾಹಕರಿಗೆ ಶೀಘ್ರ ವಿದ್ಯುತ್ ಸಂಪರ್ಕ ನೀಡುವ ಭರವಸೆ ನೀಡಲಾಗಿದೆ ಎಂದು ಬೆಸ್ಕಾಂ ನಿರ್ದೇಶಕ ಡಿ. ನಾಗಾರ್ಜನ ಚಿಂತಾಮಣಿ ತಿಳಿಸಿದರು.</p>.<p>ಚಂದಾಪುರದ ವೀರಸಂದ್ರ ಉಪ ವಿಭಾಗದ ಮುತ್ತನಲ್ಲೂರಿನಲ್ಲಿ ನಡೆದ ಅದಾಲತ್ನಲ್ಲಿ ಭಾಗವಹಿಸಿದ್ದ ಗ್ರಾಹಕರು, ನೀರು ಸಂಪರ್ಕ ಮತ್ತು ಮನೆಗಳ ವಿದ್ಯುತ್ ಸಂಪರ್ಕಕ್ಕೆ ಒದಗಿಸಿರುವ ವಿದ್ಯುತ್ ಪರಿವರ್ತಕದ ಲೋಡ್ ಸಾಮರ್ಥ್ಯ ಹೆಚ್ಚಿಸುವಂತೆ ಬೆಸ್ಕಾಂನ ಪ್ರಧಾನ ವ್ಯವಸ್ಥಾಪಕ (ಗ್ರಾಹಕ ಸಂಪರ್ಕ) ಎಸ್.ಆರ್.ನಾಗರಾಜಗೆ ವಿನಂತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಗ್ರಾಮೀಣ ಭಾಗದ ವಿದ್ಯುತ್ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಬೆಸ್ಕಾಂ ವ್ಯಾಪ್ತಿಯ 104 ಗ್ರಾಮಗಳಲ್ಲಿ ಶನಿವಾರ ನಡೆದ ಮೊದಲ ವಿದ್ಯುತ್ ಅದಾಲತ್ಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.</p>.<p>ಗ್ರಾಹಕರು ವಿದ್ಯುತ್ ಸಂಬಂಧಿತ ಸಮಸ್ಯೆಗಳ ಕುರಿತು ಹಿರಿಯ ಅಧಿಕಾರಿಗಳ ಗಮನ ಸೆಳೆದರು.</p>.<p>ಹೊಸ ಪರಿವರ್ತಕಗಳು, ಹೆಚ್ಚುವರಿ ವಿದ್ಯುತ್ ಕಂಬಗಳು, ಹೊಸ ವಿದ್ಯುತ್ ಸಂಪರ್ಕ, ಗುಣಮಟ್ಟದ ವಿದ್ಯುತ್ ಪೂರೈಕೆ, ಹಳೇ ಲೈನ್ ಬದಲಾವಣೆ ಸೇರಿದಂತೆ ಹಲವು ಬೇಡಿಕೆಗಳನ್ನು ಗ್ರಾಹಕರು ಬೆಸ್ಕಾಂ ಅಧಿಕಾರಿಗಳ ಮುಂದಿಟ್ಟರು.</p>.<p>ಬಿಲ್ಲಿಂಗ್, ವಿದ್ಯುತ್ ವ್ಯತ್ಯಯ, ಹೊಸ ಸಂಪರ್ಕ, ಹೊಸ ವಿದ್ಯುತ್ ಪರಿವರ್ತಕ, ಎಲ್ಟಿ ಲೈನ್ ಬೇಡಿಕೆ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಗ್ರಾಹಕರು ಅದಾಲತ್ನಲ್ಲಿ ಗಮನ ಸೆಳೆದರು ಎಂದು ಅಧಿಕಾರಿಗಳು ತಿಳಿಸಿದರು.</p>.<p>ಸುಮಾರು 150 ಮಂದಿ ಅದಾಲತ್ನಲ್ಲಿ ಭಾಗವಹಿಸಿದ್ದರು. ಹೊಸ ವಿದ್ಯುತ್ ಸಂಪರ್ಕಗಳಿಗೆ ಗ್ರಾಹಕರಿಂದ ಬೇಡಿಕೆ ವ್ಯಕ್ತವಾಯಿತು. ಬೆಳಕು ಯೋಜನೆ ಮತ್ತಿತರ ಬೆಸ್ಕಾಂ ವಿದ್ಯುತ್ ಯೋಜನೆಗಳಿಗೆ ಗ್ರಾಹಕರು ನಿರ್ದೇಶಕರಿಗೆ ಬೇಡಿಕೆ ಸಲ್ಲಿಸಿದರು.</p>.<p>ಅದಾಲತ್ಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೊಸ ವಿದ್ಯುತ್ ಸಂಪರ್ಕಕಕ್ಕೆ ಅರ್ಜಿ ಸಲ್ಲಿಸಿರುವ ಗ್ರಾಹಕರಿಗೆ ಶೀಘ್ರ ವಿದ್ಯುತ್ ಸಂಪರ್ಕ ನೀಡುವ ಭರವಸೆ ನೀಡಲಾಗಿದೆ ಎಂದು ಬೆಸ್ಕಾಂ ನಿರ್ದೇಶಕ ಡಿ. ನಾಗಾರ್ಜನ ಚಿಂತಾಮಣಿ ತಿಳಿಸಿದರು.</p>.<p>ಚಂದಾಪುರದ ವೀರಸಂದ್ರ ಉಪ ವಿಭಾಗದ ಮುತ್ತನಲ್ಲೂರಿನಲ್ಲಿ ನಡೆದ ಅದಾಲತ್ನಲ್ಲಿ ಭಾಗವಹಿಸಿದ್ದ ಗ್ರಾಹಕರು, ನೀರು ಸಂಪರ್ಕ ಮತ್ತು ಮನೆಗಳ ವಿದ್ಯುತ್ ಸಂಪರ್ಕಕ್ಕೆ ಒದಗಿಸಿರುವ ವಿದ್ಯುತ್ ಪರಿವರ್ತಕದ ಲೋಡ್ ಸಾಮರ್ಥ್ಯ ಹೆಚ್ಚಿಸುವಂತೆ ಬೆಸ್ಕಾಂನ ಪ್ರಧಾನ ವ್ಯವಸ್ಥಾಪಕ (ಗ್ರಾಹಕ ಸಂಪರ್ಕ) ಎಸ್.ಆರ್.ನಾಗರಾಜಗೆ ವಿನಂತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>