<p><strong>ಯಲಹಂಕ:</strong> ಪ್ರತಿ ಹೆಣ್ಣಿನ ಬಾಳಿನಲ್ಲಿ ತಾಯ್ತನ ಎಂಬುದು ಮಹತ್ವದ ಘಟ್ಟವಾಗಿದ್ದು, ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು ಹಾಗೂ ಸಮಾಜ ಆಕೆಯನ್ನು ಪ್ರೀತಿಯಿಂದ ಕಾಣಬೇಕು ಎಂದು ಬೆಟ್ಟಹಲಸೂರು ಗ್ರಾಮಪಂಚಾಯಿತಿ ಅಧ್ಯಕ್ಷೆ ಹೇಮಾವತಿ ನಾಗರಾಜ ಬಾಬು ಹೇಳಿದರು.</p>.<p>ಬೆಟ್ಟಹಲಸೂರು ಗ್ರಾಮಪಂಚಾಯಿತಿ ವತಿಯಿಂದ ಬೆಟ್ಟಹಲಸೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಆಯೋಜಿಸಿದ್ದ 2024-25ನೇ ಸಾಲಿನ ಮಹಿಳಾ ಗ್ರಾಮಸಭೆಯಲ್ಲಿ ಗರ್ಭಿಣಿಯರಿಗೆ ಸೀಮಂತಕಾರ್ಯ ನೆರವೇರಿಸಿ ಮಾತನಾಡಿದರು.</p>.<p>ಕೆಲವು ಗರ್ಭಿಣಿಯರಿಗೆ ಪೋಷಕರು ಇರುವುದಿಲ್ಲ; ಮತ್ತೆ ಕೆಲವರು ಹೊರರಾಜ್ಯಗಳಿಂದ ಬಂದು ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿರುತ್ತಾರೆ. ಇಂತಹವರಿಗೆ ಸೀಮಂತಕಾರ್ಯ ಮಾಡಲು ಶಕ್ತಿಯಿರುವುದಿಲ್ಲ. ಈ ದಿಸೆಯಲ್ಲಿ ಪಂಚಾಯಿತಿ ವತಿಯಿಂದ ಸೀಮಂತಕಾರ್ಯ ಮಾಡಲಾಗಿದೆ. ಹೆರಿಗೆಯಾದ ನಂತರ ತಾಯಿ ಮತ್ತು ಮಗುವಿಗೆ ಉಪಯೋಗವಾಗುವಂತಹ ವಸ್ತುಗಳನ್ನು ಒಳಗೊಂಡ ಕಿಟ್ ಸಹ ನೀಡಲಾಗಿದೆ ಎಂದರು.</p>.<p>ಪಂಚಾಯಿತಿ ವತಿಯಿಂದ ಆಶಾ, ಅಂಗನವಾಡಿ ಶಿಕ್ಷಕರು ಹಾಗೂ ಸಹಾಯಕಿಯರಿಗೆ ಸಹಾಯಧನದ ಚೆಕ್ ಹಾಗೂ ಸರ್ಕಾರಿ ಆಸ್ಪತ್ರೆಗೆ ಚೇರ್, ಟೇಬಲ್, ಯುಪಿಎಸ್ ಹಾಗೂ ಗೀಸರ್ ವಿತರಿಸಲಾಯಿತು. ಗರ್ಭಕೋಶ ಕಾಯಿಲೆಗೆ ಸಂಬಂಧಿಸಿದಂತೆ ಸ್ಕ್ರೀನಿಂಗ್ ಮತ್ತು ಆರೋಗ್ಯ ತಪಾಸಣೆ ಮತ್ತು ನಡೆಸಲಾಯಿತು.</p>.<p>ಮಹಿಳೆಯರಿಗಾಗಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಪೌರಕಾರ್ಮಿಕರಿಗೆ ನೆನಪಿನ ಕಾಣಿಕೆ ವಿತರಿಸಲಾಯಿತು. ಮಹಿಳೆಯರು ಹಾಗೂ ಹೆಣ್ಣುಮಕ್ಕಳಿಂದ ಹಾಡು, ನೃತ್ಯ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರಿಂದ ಮಾಸಿಕಸಂತೆ ಏರ್ಪಡಿಸಲಾಗಿತ್ತು.</p>.<p>ಗ್ರಾಮಪಂಚಾಯಿತಿ ಉಪಾಧ್ಯಕ್ಷ ಬಿ.ಆರ್.ಪ್ರವೀಣ್, ಮಾಜಿ ಉಪಾಧ್ಯಕ್ಷರಾದ ವಿಮಲಾ ಗಣೇಶ್, ವೀಣಾ ವೆಂಕಟೇಶ್, ಸದಸ್ಯರಾದ ಸುವರ್ಣಮ್ಮ, ತುಳಸಮ್ಮ, ಸಾವಿತ್ರಮ್ಮ, ಮಮತಾ, ನಾಗರತ್ನ, ಪಿಡಿಒ ಲೋಕನಾಥ್.ಪಿ.ಎಸ್, ಕಾರ್ಯದರ್ಶಿ ಸುಬ್ರಮಣ್ಯ.ಎಂ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ಪ್ರತಿ ಹೆಣ್ಣಿನ ಬಾಳಿನಲ್ಲಿ ತಾಯ್ತನ ಎಂಬುದು ಮಹತ್ವದ ಘಟ್ಟವಾಗಿದ್ದು, ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು ಹಾಗೂ ಸಮಾಜ ಆಕೆಯನ್ನು ಪ್ರೀತಿಯಿಂದ ಕಾಣಬೇಕು ಎಂದು ಬೆಟ್ಟಹಲಸೂರು ಗ್ರಾಮಪಂಚಾಯಿತಿ ಅಧ್ಯಕ್ಷೆ ಹೇಮಾವತಿ ನಾಗರಾಜ ಬಾಬು ಹೇಳಿದರು.</p>.<p>ಬೆಟ್ಟಹಲಸೂರು ಗ್ರಾಮಪಂಚಾಯಿತಿ ವತಿಯಿಂದ ಬೆಟ್ಟಹಲಸೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಆಯೋಜಿಸಿದ್ದ 2024-25ನೇ ಸಾಲಿನ ಮಹಿಳಾ ಗ್ರಾಮಸಭೆಯಲ್ಲಿ ಗರ್ಭಿಣಿಯರಿಗೆ ಸೀಮಂತಕಾರ್ಯ ನೆರವೇರಿಸಿ ಮಾತನಾಡಿದರು.</p>.<p>ಕೆಲವು ಗರ್ಭಿಣಿಯರಿಗೆ ಪೋಷಕರು ಇರುವುದಿಲ್ಲ; ಮತ್ತೆ ಕೆಲವರು ಹೊರರಾಜ್ಯಗಳಿಂದ ಬಂದು ಕೂಲಿ ಮಾಡಿಕೊಂಡು ಜೀವನ ನಡೆಸುತ್ತಿರುತ್ತಾರೆ. ಇಂತಹವರಿಗೆ ಸೀಮಂತಕಾರ್ಯ ಮಾಡಲು ಶಕ್ತಿಯಿರುವುದಿಲ್ಲ. ಈ ದಿಸೆಯಲ್ಲಿ ಪಂಚಾಯಿತಿ ವತಿಯಿಂದ ಸೀಮಂತಕಾರ್ಯ ಮಾಡಲಾಗಿದೆ. ಹೆರಿಗೆಯಾದ ನಂತರ ತಾಯಿ ಮತ್ತು ಮಗುವಿಗೆ ಉಪಯೋಗವಾಗುವಂತಹ ವಸ್ತುಗಳನ್ನು ಒಳಗೊಂಡ ಕಿಟ್ ಸಹ ನೀಡಲಾಗಿದೆ ಎಂದರು.</p>.<p>ಪಂಚಾಯಿತಿ ವತಿಯಿಂದ ಆಶಾ, ಅಂಗನವಾಡಿ ಶಿಕ್ಷಕರು ಹಾಗೂ ಸಹಾಯಕಿಯರಿಗೆ ಸಹಾಯಧನದ ಚೆಕ್ ಹಾಗೂ ಸರ್ಕಾರಿ ಆಸ್ಪತ್ರೆಗೆ ಚೇರ್, ಟೇಬಲ್, ಯುಪಿಎಸ್ ಹಾಗೂ ಗೀಸರ್ ವಿತರಿಸಲಾಯಿತು. ಗರ್ಭಕೋಶ ಕಾಯಿಲೆಗೆ ಸಂಬಂಧಿಸಿದಂತೆ ಸ್ಕ್ರೀನಿಂಗ್ ಮತ್ತು ಆರೋಗ್ಯ ತಪಾಸಣೆ ಮತ್ತು ನಡೆಸಲಾಯಿತು.</p>.<p>ಮಹಿಳೆಯರಿಗಾಗಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಪೌರಕಾರ್ಮಿಕರಿಗೆ ನೆನಪಿನ ಕಾಣಿಕೆ ವಿತರಿಸಲಾಯಿತು. ಮಹಿಳೆಯರು ಹಾಗೂ ಹೆಣ್ಣುಮಕ್ಕಳಿಂದ ಹಾಡು, ನೃತ್ಯ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರಿಂದ ಮಾಸಿಕಸಂತೆ ಏರ್ಪಡಿಸಲಾಗಿತ್ತು.</p>.<p>ಗ್ರಾಮಪಂಚಾಯಿತಿ ಉಪಾಧ್ಯಕ್ಷ ಬಿ.ಆರ್.ಪ್ರವೀಣ್, ಮಾಜಿ ಉಪಾಧ್ಯಕ್ಷರಾದ ವಿಮಲಾ ಗಣೇಶ್, ವೀಣಾ ವೆಂಕಟೇಶ್, ಸದಸ್ಯರಾದ ಸುವರ್ಣಮ್ಮ, ತುಳಸಮ್ಮ, ಸಾವಿತ್ರಮ್ಮ, ಮಮತಾ, ನಾಗರತ್ನ, ಪಿಡಿಒ ಲೋಕನಾಥ್.ಪಿ.ಎಸ್, ಕಾರ್ಯದರ್ಶಿ ಸುಬ್ರಮಣ್ಯ.ಎಂ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>