<p><strong>ಬೆಂಗಳೂರು</strong>: ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣೆಯ ಹಳೆಯ ಕಟ್ಟಡದ ಪಕ್ಕದಲ್ಲಿರುವ ರೇಸ್ಕೋರ್ಸ್ ಪಾರ್ಕಿಂಗ್ ಶೆಡ್ನಲ್ಲಿನ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ವಿಜಯನಗರ ನಿವಾಸಿ ಯೋಗೇಶ್, ಕಮಲ್ ನಗರದ ಮಂಜುನಾಥ್ ಮತ್ತು ವಸಂತ್ ಎಂಬುವರನ್ನು ಬಂಧಿಸಿ, ₹2 ಲಕ್ಷ ನಗದು ಹಾಗೂ ಮೂರು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.</p>.<p>‘ನವೆಂಬರ್ 29ರಂದು ಆರೋಪಿಗಳು ಸಾರ್ವಜನಿಕರಿಂದ ಹಣ ಕಟ್ಟಿಸಿಕೊಂಡು ಬೆಟ್ಟಿಂಗ್ ಆಡಿಸುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ ಜೂಜಾಟದಲ್ಲಿ ತೊಡಗಿದ್ದ ಆರೋಪಿಗಳನ್ನು ಬಂಧಿಸಿ, ನಗದು, ಮೊಬೈಲ್, ರೇಸ್ ಪುಸ್ತಕಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಆರೋಪಿಗಳು ಪರವಾನಗಿ ಇಲ್ಲದೆ ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಟರ್ಫ್ ಕ್ಲಬ್ ಅವರ ಗಮನಕ್ಕೆ ಬಾರದಂತೆ ಬೆಟ್ಟಿಂಗ್ ನಡೆಸುತ್ತಿದ್ದರು. ಆರೋಪಿಗಳ ಪೈಕಿ ಮಂಜುನಾಥ್ ಅವರ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಫ್ರೀಜ್ ಮಾಡಲು ಕೋರಲಾಗಿದೆ’ ಎಂದು ಹೇಳಿದ್ದಾರೆ.</p>.<p>ಸಿಸಿಬಿ ಇನ್ಸ್ಪೆಕ್ಟರ್ ಎಸ್.ಆರ್.ವೀರೇಂದ್ರ ಪ್ರಸಾದ್ ಅವರ ದೂರು ಆಧರಿಸಿ, ಹೈಗ್ರೌಂಡ್ಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣೆಯ ಹಳೆಯ ಕಟ್ಟಡದ ಪಕ್ಕದಲ್ಲಿರುವ ರೇಸ್ಕೋರ್ಸ್ ಪಾರ್ಕಿಂಗ್ ಶೆಡ್ನಲ್ಲಿನ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ವಿಜಯನಗರ ನಿವಾಸಿ ಯೋಗೇಶ್, ಕಮಲ್ ನಗರದ ಮಂಜುನಾಥ್ ಮತ್ತು ವಸಂತ್ ಎಂಬುವರನ್ನು ಬಂಧಿಸಿ, ₹2 ಲಕ್ಷ ನಗದು ಹಾಗೂ ಮೂರು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.</p>.<p>‘ನವೆಂಬರ್ 29ರಂದು ಆರೋಪಿಗಳು ಸಾರ್ವಜನಿಕರಿಂದ ಹಣ ಕಟ್ಟಿಸಿಕೊಂಡು ಬೆಟ್ಟಿಂಗ್ ಆಡಿಸುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ ಜೂಜಾಟದಲ್ಲಿ ತೊಡಗಿದ್ದ ಆರೋಪಿಗಳನ್ನು ಬಂಧಿಸಿ, ನಗದು, ಮೊಬೈಲ್, ರೇಸ್ ಪುಸ್ತಕಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಆರೋಪಿಗಳು ಪರವಾನಗಿ ಇಲ್ಲದೆ ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಟರ್ಫ್ ಕ್ಲಬ್ ಅವರ ಗಮನಕ್ಕೆ ಬಾರದಂತೆ ಬೆಟ್ಟಿಂಗ್ ನಡೆಸುತ್ತಿದ್ದರು. ಆರೋಪಿಗಳ ಪೈಕಿ ಮಂಜುನಾಥ್ ಅವರ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ಫ್ರೀಜ್ ಮಾಡಲು ಕೋರಲಾಗಿದೆ’ ಎಂದು ಹೇಳಿದ್ದಾರೆ.</p>.<p>ಸಿಸಿಬಿ ಇನ್ಸ್ಪೆಕ್ಟರ್ ಎಸ್.ಆರ್.ವೀರೇಂದ್ರ ಪ್ರಸಾದ್ ಅವರ ದೂರು ಆಧರಿಸಿ, ಹೈಗ್ರೌಂಡ್ಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>