<p><strong>ಬೆಂಗಳೂರು:</strong> ವೈಟ್ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಉರುಳಿಬಿದ್ದು ಅಪಘಾತ ಸಂಭವಿಸಿದ್ದು, ರಂಜನ್ ರಾಯ್ (50) ಎಂಬುವವರು ಮೃತಪಟ್ಟಿದ್ದಾರೆ.</p>.<p>‘ಪಶ್ಚಿಮ ಬಂಗಾಳದ ರಂಜನ್, ನಗರದ ಕಂಪನಿಯೊಂದರಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು. ಸಹೋದ್ಯೋಗಿ ರಾಜಸ್ಥಾನದ ಕೃತಿಕಾ ಸಿಂಗ್ (23) ಜೊತೆ ದ್ವಿಚಕ್ರ ವಾಹನದಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಸಂಚಾರ ಪೊಲೀಸರು ಹೇಳಿದರು.</p>.<p>‘ರಂಜನ್ ಹಾಗೂ ಕೃತಿಕಾ, ಶನಿವಾರ ರಾತ್ರಿ ಊಟಕ್ಕೆಂದು ಹೋಟೆಲ್ಗೆ ಹೋಗಿದ್ದರು. ತಡರಾತ್ರಿ ಊಟ ಮುಗಿಸಿದ್ದ ಇಬ್ಬರೂ ದ್ವಿಚಕ್ರ ವಾಹನದಲ್ಲಿ ವಾಪಸು ಮನೆಗೆ ತೆರಳುತ್ತಿದ್ದರು. ಕುಂದಲಹಳ್ಳಿ ಕೆಳಸೇತುವೆ ಕಡೆಯಿಂದ ವರ್ತೂರು ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಹೊರಟಿತ್ತು.’</p>.<p>‘ರಂಜನ್ ಅವರು ನಿರ್ಲಕ್ಷ್ಯದಿಂದ ದ್ವಿಚಕ್ರ ವಾಹನ ಚಲಾಯಿಸಿದ್ದರು. ನಿಯಂತ್ರಣ ತಪ್ಪಿದ ವಾಹನ, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿತ್ತು. ನಂತರ, ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೂ ಗುದ್ದಿತ್ತು. ರಂಜನ್ ಹಾಗೂ ಕೃತಿಕಾ ಇಬ್ಬರೂ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು’ ಎಂದೂ ಪೊಲೀಸರು ತಿಳಿಸಿದರು.</p>.<p>‘ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ರಂಜನ್ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಕೃತಿಕಾ ಅವರನ್ನು ಸ್ಥಳೀಯರೇ ಆಸ್ಪತ್ರೆಗೆ ಸೇರಿಸಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ’ ಎಂದೂ ಹೇಳಿದರು.</p>.<p>‘ಸವಾರ ರಂಜನ್, ಮದ್ಯದ ಅಮಲಿನಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದರಿಂದ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಅವರ ವಿರುದ್ಧವೇ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದೂ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವೈಟ್ಫೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಉರುಳಿಬಿದ್ದು ಅಪಘಾತ ಸಂಭವಿಸಿದ್ದು, ರಂಜನ್ ರಾಯ್ (50) ಎಂಬುವವರು ಮೃತಪಟ್ಟಿದ್ದಾರೆ.</p>.<p>‘ಪಶ್ಚಿಮ ಬಂಗಾಳದ ರಂಜನ್, ನಗರದ ಕಂಪನಿಯೊಂದರಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು. ಸಹೋದ್ಯೋಗಿ ರಾಜಸ್ಥಾನದ ಕೃತಿಕಾ ಸಿಂಗ್ (23) ಜೊತೆ ದ್ವಿಚಕ್ರ ವಾಹನದಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಸಂಚಾರ ಪೊಲೀಸರು ಹೇಳಿದರು.</p>.<p>‘ರಂಜನ್ ಹಾಗೂ ಕೃತಿಕಾ, ಶನಿವಾರ ರಾತ್ರಿ ಊಟಕ್ಕೆಂದು ಹೋಟೆಲ್ಗೆ ಹೋಗಿದ್ದರು. ತಡರಾತ್ರಿ ಊಟ ಮುಗಿಸಿದ್ದ ಇಬ್ಬರೂ ದ್ವಿಚಕ್ರ ವಾಹನದಲ್ಲಿ ವಾಪಸು ಮನೆಗೆ ತೆರಳುತ್ತಿದ್ದರು. ಕುಂದಲಹಳ್ಳಿ ಕೆಳಸೇತುವೆ ಕಡೆಯಿಂದ ವರ್ತೂರು ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಹೊರಟಿತ್ತು.’</p>.<p>‘ರಂಜನ್ ಅವರು ನಿರ್ಲಕ್ಷ್ಯದಿಂದ ದ್ವಿಚಕ್ರ ವಾಹನ ಚಲಾಯಿಸಿದ್ದರು. ನಿಯಂತ್ರಣ ತಪ್ಪಿದ ವಾಹನ, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿತ್ತು. ನಂತರ, ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೂ ಗುದ್ದಿತ್ತು. ರಂಜನ್ ಹಾಗೂ ಕೃತಿಕಾ ಇಬ್ಬರೂ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು’ ಎಂದೂ ಪೊಲೀಸರು ತಿಳಿಸಿದರು.</p>.<p>‘ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ರಂಜನ್ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಕೃತಿಕಾ ಅವರನ್ನು ಸ್ಥಳೀಯರೇ ಆಸ್ಪತ್ರೆಗೆ ಸೇರಿಸಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ’ ಎಂದೂ ಹೇಳಿದರು.</p>.<p>‘ಸವಾರ ರಂಜನ್, ಮದ್ಯದ ಅಮಲಿನಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದರಿಂದ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಅವರ ವಿರುದ್ಧವೇ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದೂ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>