<p><strong>ಬೆಂಗಳೂರು:</strong> ನಿರ್ಜನ ರಸ್ತೆಯೊಂದರಲ್ಲಿ ದ್ವಿಚಕ್ರ ವಾಹನ ಸವಾರನನ್ನು ಅಡ್ಡಗಟ್ಟಿ ಸುಲಿಗೆಗೆ ಯತ್ನಿಸಿರುವ ಘಟನೆ ಶಾಂತಿನಗರ ಸಮೀಪದ ಚರ್ಚ್ ರಸ್ತೆಯಲ್ಲಿ ನಡೆದಿದೆ.</p>.<p>ನವೆಂಬರ್ 15ರ ಬೆಳಗಿನ ಜಾವ ಸ್ಕೂಟರ್ನಲ್ಲಿ ಹೋಗುತ್ತಿದ್ದ ಸವಾರನನ್ನು ಮತ್ತೊಂದು ಬೈಕ್ನಲ್ಲಿ ಬಂದ ಮೂವರು ಅಡ್ಡಗಟ್ಟಿದ್ದಾರೆ. ಈ ಪೈಕಿ ಇಬ್ಬರು ಇಳಿದು, ಸವಾರನ ಬಳಿಯಿದ್ದ ಹಣ, ಮೊಬೈಲ್ ಫೋನ್ ದೋಚಲು ಯತ್ನಿಸಿದ್ದಾರೆ. ಆದರೆ, ಸವಾರ ಪ್ರತಿರೋಧವೊಡ್ಡಿದ್ದಾರೆ. ಆಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.</p>.<p>ಅಶೋಕನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. <br /><br />ಮಾರಕಾಸ್ತ್ರ ಪ್ರದರ್ಶಿಸಿ ಸುಲಿಗೆ ಯತ್ನ: ಸಾರ್ವಜನಿಕರನ್ನು ಅಡ್ಡಗಟ್ಟಿ ಸುಲಿಗೆ ಮಾಡಲು ಯತ್ನಿಸಿರುವ ಘಟನೆ ಯಶವಂತಪುರ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.</p>.<p>ದ್ವಿಚಕ್ರ ವಾಹನದಲ್ಲಿ ಬಂದ ಮೂವರು ಕಿಡಿಗೇಡಿಗಳು ನಸುಕಿನ ಜಾವ ಫುಟ್ಪಾತ್ ಮೇಲೆ ಹೋಗುತ್ತಿದ್ದ ವ್ಯಕ್ತಿಗೆ ಮಚ್ಚು ತೋರಿಸಿ, ಹಣ ಕೇಳಿದ್ದಾರೆ. ಕೊಡದಿದ್ದರೆ ಮಚ್ಚಿನಿಂದ ಹಲ್ಲೆ ಮಾಡುವುದಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.</p>.<p>ಈ ವೇಳೆ ಪಕ್ಕದಲ್ಲೇ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೊಬೈಲ್ನಲ್ಲಿ ವಿಡಿಯೊ ಚಿತ್ರೀಕರಣ ಮಾಡುತ್ತಿರುವುದನ್ನು ಗಮನಿಸಿ, ಮಚ್ಚಿನಿಂದ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಕೂಡಲೇ 'ಪೊಲೀಸ್ ಪೊಲೀಸ್' ಎಂದು ಕೂಗಿಕೊಂಡಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.</p>.<p>ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೊ ಹರಿದಾಡಿದ್ದು, ಪರಿಶೀಲನೆ ನಡೆಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಿರ್ಜನ ರಸ್ತೆಯೊಂದರಲ್ಲಿ ದ್ವಿಚಕ್ರ ವಾಹನ ಸವಾರನನ್ನು ಅಡ್ಡಗಟ್ಟಿ ಸುಲಿಗೆಗೆ ಯತ್ನಿಸಿರುವ ಘಟನೆ ಶಾಂತಿನಗರ ಸಮೀಪದ ಚರ್ಚ್ ರಸ್ತೆಯಲ್ಲಿ ನಡೆದಿದೆ.</p>.<p>ನವೆಂಬರ್ 15ರ ಬೆಳಗಿನ ಜಾವ ಸ್ಕೂಟರ್ನಲ್ಲಿ ಹೋಗುತ್ತಿದ್ದ ಸವಾರನನ್ನು ಮತ್ತೊಂದು ಬೈಕ್ನಲ್ಲಿ ಬಂದ ಮೂವರು ಅಡ್ಡಗಟ್ಟಿದ್ದಾರೆ. ಈ ಪೈಕಿ ಇಬ್ಬರು ಇಳಿದು, ಸವಾರನ ಬಳಿಯಿದ್ದ ಹಣ, ಮೊಬೈಲ್ ಫೋನ್ ದೋಚಲು ಯತ್ನಿಸಿದ್ದಾರೆ. ಆದರೆ, ಸವಾರ ಪ್ರತಿರೋಧವೊಡ್ಡಿದ್ದಾರೆ. ಆಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.</p>.<p>ಅಶೋಕನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. <br /><br />ಮಾರಕಾಸ್ತ್ರ ಪ್ರದರ್ಶಿಸಿ ಸುಲಿಗೆ ಯತ್ನ: ಸಾರ್ವಜನಿಕರನ್ನು ಅಡ್ಡಗಟ್ಟಿ ಸುಲಿಗೆ ಮಾಡಲು ಯತ್ನಿಸಿರುವ ಘಟನೆ ಯಶವಂತಪುರ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.</p>.<p>ದ್ವಿಚಕ್ರ ವಾಹನದಲ್ಲಿ ಬಂದ ಮೂವರು ಕಿಡಿಗೇಡಿಗಳು ನಸುಕಿನ ಜಾವ ಫುಟ್ಪಾತ್ ಮೇಲೆ ಹೋಗುತ್ತಿದ್ದ ವ್ಯಕ್ತಿಗೆ ಮಚ್ಚು ತೋರಿಸಿ, ಹಣ ಕೇಳಿದ್ದಾರೆ. ಕೊಡದಿದ್ದರೆ ಮಚ್ಚಿನಿಂದ ಹಲ್ಲೆ ಮಾಡುವುದಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.</p>.<p>ಈ ವೇಳೆ ಪಕ್ಕದಲ್ಲೇ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೊಬೈಲ್ನಲ್ಲಿ ವಿಡಿಯೊ ಚಿತ್ರೀಕರಣ ಮಾಡುತ್ತಿರುವುದನ್ನು ಗಮನಿಸಿ, ಮಚ್ಚಿನಿಂದ ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಕೂಡಲೇ 'ಪೊಲೀಸ್ ಪೊಲೀಸ್' ಎಂದು ಕೂಗಿಕೊಂಡಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.</p>.<p>ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೊ ಹರಿದಾಡಿದ್ದು, ಪರಿಶೀಲನೆ ನಡೆಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>