<p><strong>ಬೆಂಗಳೂರು</strong>: ಮೆಜೆಸ್ಟಿಕ್ ಕೇಂದ್ರ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಗುದ್ದಿ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು, ಅಪಘಾತಕ್ಕೆ ಕಾರಣವಾದ ಆರೋಪದಡಿ ಚಾಲಕ ಚನ್ನಯ್ಯ (43) ಅವರನ್ನು ಉಪ್ಪಾರಪೇಟೆ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ರಾಜರಾಜೇಶ್ವರಿನಗರ ಡಿಪೊಗೆ ಸೇರಿದ್ದ ಬಿಎಂಟಿಸಿ ಬಸ್ (ಕೆಎ 57 ಎಫ್ 5187), ಸೋಮವಾರ ಸಂಜೆ ನಿಲ್ದಾಣಕ್ಕೆ ಬಂದಿತ್ತು. ಚಾಲಕ ಚನ್ನಯ್ಯ, ನಿಗದಿತ ಸ್ಥಳದಲ್ಲಿ ಬಸ್ ನಿಲ್ಲಿಸುತ್ತಿದ್ದರು. ಅದೇ ಸಂದರ್ಭದಲ್ಲಿ ಪ್ರಯಾಣಿಕ, ನಿಲ್ದಾಣದೊಳಗೆ ರಸ್ತೆ ದಾಟುತ್ತಿದ್ದರು.’</p>.<p>‘ಚಾಲಕ, ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ಬಸ್ ಚಲಾಯಿಸಿದ್ದ. ಪ್ರಯಾಣಿಕನಿಗೆ ಗುದ್ದಿತ್ತು. ರಸ್ತೆಗೆ ಬಿದ್ದಿದ್ದ ಪ್ರಯಾಣಿಕನ ತಲೆಗೆ ತೀವ್ರ ಪೆಟ್ಟಾಗಿತ್ತು. ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮಾರ್ಗಮಧ್ಯೆಯೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರು’ ಎಂದು ಪೊಲೀಸರು ತಿಳಿಸಿದರು.</p>.<p>‘ಪ್ರಯಾಣಿಕನ ಬಳಿ ಯಾವುದೇ ಗುರುತಿನ ಚೀಟಿಗಳಿಲ್ಲ. ಹೆಸರು ಗೊತ್ತಾಗಿಲ್ಲ. 25 ವರ್ಷದಿಂದ 30 ವರ್ಷ ವಯಸ್ಸಾಗಿರಬಹುದೆಂದು ಅಂದಾಜಿಸಲಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಸಂಬಂಧಿಕರು ಸಿಕ್ಕ ಬಳಿಕವೇ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ಆರಂಭಿಸಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮೆಜೆಸ್ಟಿಕ್ ಕೇಂದ್ರ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಗುದ್ದಿ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು, ಅಪಘಾತಕ್ಕೆ ಕಾರಣವಾದ ಆರೋಪದಡಿ ಚಾಲಕ ಚನ್ನಯ್ಯ (43) ಅವರನ್ನು ಉಪ್ಪಾರಪೇಟೆ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ರಾಜರಾಜೇಶ್ವರಿನಗರ ಡಿಪೊಗೆ ಸೇರಿದ್ದ ಬಿಎಂಟಿಸಿ ಬಸ್ (ಕೆಎ 57 ಎಫ್ 5187), ಸೋಮವಾರ ಸಂಜೆ ನಿಲ್ದಾಣಕ್ಕೆ ಬಂದಿತ್ತು. ಚಾಲಕ ಚನ್ನಯ್ಯ, ನಿಗದಿತ ಸ್ಥಳದಲ್ಲಿ ಬಸ್ ನಿಲ್ಲಿಸುತ್ತಿದ್ದರು. ಅದೇ ಸಂದರ್ಭದಲ್ಲಿ ಪ್ರಯಾಣಿಕ, ನಿಲ್ದಾಣದೊಳಗೆ ರಸ್ತೆ ದಾಟುತ್ತಿದ್ದರು.’</p>.<p>‘ಚಾಲಕ, ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ಬಸ್ ಚಲಾಯಿಸಿದ್ದ. ಪ್ರಯಾಣಿಕನಿಗೆ ಗುದ್ದಿತ್ತು. ರಸ್ತೆಗೆ ಬಿದ್ದಿದ್ದ ಪ್ರಯಾಣಿಕನ ತಲೆಗೆ ತೀವ್ರ ಪೆಟ್ಟಾಗಿತ್ತು. ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮಾರ್ಗಮಧ್ಯೆಯೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರು’ ಎಂದು ಪೊಲೀಸರು ತಿಳಿಸಿದರು.</p>.<p>‘ಪ್ರಯಾಣಿಕನ ಬಳಿ ಯಾವುದೇ ಗುರುತಿನ ಚೀಟಿಗಳಿಲ್ಲ. ಹೆಸರು ಗೊತ್ತಾಗಿಲ್ಲ. 25 ವರ್ಷದಿಂದ 30 ವರ್ಷ ವಯಸ್ಸಾಗಿರಬಹುದೆಂದು ಅಂದಾಜಿಸಲಾಗಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಸಂಬಂಧಿಕರು ಸಿಕ್ಕ ಬಳಿಕವೇ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ಆರಂಭಿಸಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>