<p><strong>ಬೆಂಗಳೂರು:</strong> ಬಿಎಂಟಿಸಿ ಬಸ್ ಹರಿದು ಹನ್ನೊಂದು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಕೆ.ಆರ್.ಮಾರುಕಟ್ಟೆ ಬಳಿ ಭಾನುವಾರ ನಡೆದಿದೆ.</p>.<p>ಜಿ.ಎಂ.ಪಾಳ್ಯ ನಿವಾಸಿ ಸುನಿಲ್ ಕುಮಾರ್ ಅವರ ಅಣ್ಣನ ಮಗ ಶಬರೀಶ್ ಮೃತ ಬಾಲಕ.</p>.<p>ಸ್ಥಳೀಯ ದೇವಸ್ಥಾನದ ಅರ್ಚಕರಾಗಿರುವ ಸುನಿಲ್ ಕುಮಾರ್ ಅವರು ತನ್ನ ಅಣ್ಣ ದಿವಂಗತ ದಿಲೀಪ್ ಕುಮಾರ್ ಅವರ ಮಗನ ಜತೆ ದ್ವಿಚಕ್ರ ವಾಹನದಲ್ಲಿ ಕೆ.ಆರ್.ಮಾರ್ಕೆಟ್ಗೆ ಸಂಜೆ 5ರ ಸುಮಾರಿಗೆ ಬಂದಿದ್ದರು. ಈ ವೇಳೆ ದ್ವಿಚಕ್ರ ವಾಹನಕ್ಕೆ ಬಸ್ ತಾಗಿದ್ದರಿಂದ ಶಬರೀಶ್ ಕೆಳಗೆ ಬಿದ್ದಿದ್ದಾನೆ. ಆಗ ಆತನ ಮೇಲೆ ಬಸ್ನ ಚಕ್ರಗಳು ಹರಿದ ಪರಿಣಾಮ, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಲ ಭಾಗಕ್ಕೆ ಬಿದ್ದ ಸುನಿಲ್ ಕುಮಾರ್ ಅವರಿಗೆ ಸಣ್ಣ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬಿಎಂಟಿಸಿ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಾರ್ವಜನಿಕರು, ವ್ಯಾಪಾರಿಗಳು ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣೆ ಎದುರು ಜಮಾವಣೆಗೊಂಡರು. ಮೃತನ ಬಾಲಕನ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು. </p>.<p>ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಸ್ ಚಾಲಕ ಸಂತೋಷ್, ನಿರ್ವಾಹಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ನಾಲ್ಕು ದಿನಗಳ ಹಿಂದೆಯಷ್ಟೇ ಬಿಎಂಟಿಸಿ ಬಸ್ 5ನೇ ತರಗತಿ ವಿದ್ಯಾರ್ಥಿನಿ ತನ್ವೀ ಕೃಷ್ಣ (10) ತಲೆಯ ಮೇಲೆ ಹರಿದ ಪರಿಣಾಮ ಮೃತಪಟ್ಟಿದ್ದಳು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಎಂಟಿಸಿ ಬಸ್ ಹರಿದು ಹನ್ನೊಂದು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಕೆ.ಆರ್.ಮಾರುಕಟ್ಟೆ ಬಳಿ ಭಾನುವಾರ ನಡೆದಿದೆ.</p>.<p>ಜಿ.ಎಂ.ಪಾಳ್ಯ ನಿವಾಸಿ ಸುನಿಲ್ ಕುಮಾರ್ ಅವರ ಅಣ್ಣನ ಮಗ ಶಬರೀಶ್ ಮೃತ ಬಾಲಕ.</p>.<p>ಸ್ಥಳೀಯ ದೇವಸ್ಥಾನದ ಅರ್ಚಕರಾಗಿರುವ ಸುನಿಲ್ ಕುಮಾರ್ ಅವರು ತನ್ನ ಅಣ್ಣ ದಿವಂಗತ ದಿಲೀಪ್ ಕುಮಾರ್ ಅವರ ಮಗನ ಜತೆ ದ್ವಿಚಕ್ರ ವಾಹನದಲ್ಲಿ ಕೆ.ಆರ್.ಮಾರ್ಕೆಟ್ಗೆ ಸಂಜೆ 5ರ ಸುಮಾರಿಗೆ ಬಂದಿದ್ದರು. ಈ ವೇಳೆ ದ್ವಿಚಕ್ರ ವಾಹನಕ್ಕೆ ಬಸ್ ತಾಗಿದ್ದರಿಂದ ಶಬರೀಶ್ ಕೆಳಗೆ ಬಿದ್ದಿದ್ದಾನೆ. ಆಗ ಆತನ ಮೇಲೆ ಬಸ್ನ ಚಕ್ರಗಳು ಹರಿದ ಪರಿಣಾಮ, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಲ ಭಾಗಕ್ಕೆ ಬಿದ್ದ ಸುನಿಲ್ ಕುಮಾರ್ ಅವರಿಗೆ ಸಣ್ಣ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬಿಎಂಟಿಸಿ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಾರ್ವಜನಿಕರು, ವ್ಯಾಪಾರಿಗಳು ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣೆ ಎದುರು ಜಮಾವಣೆಗೊಂಡರು. ಮೃತನ ಬಾಲಕನ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಆಗ್ರಹಿಸಿದರು. </p>.<p>ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಸ್ ಚಾಲಕ ಸಂತೋಷ್, ನಿರ್ವಾಹಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ನಾಲ್ಕು ದಿನಗಳ ಹಿಂದೆಯಷ್ಟೇ ಬಿಎಂಟಿಸಿ ಬಸ್ 5ನೇ ತರಗತಿ ವಿದ್ಯಾರ್ಥಿನಿ ತನ್ವೀ ಕೃಷ್ಣ (10) ತಲೆಯ ಮೇಲೆ ಹರಿದ ಪರಿಣಾಮ ಮೃತಪಟ್ಟಿದ್ದಳು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>