ರಸ್ತೆಯಲ್ಲಿ ನೀರು ಸಂಗ್ರಹದಿಂದ ಅವಘಡ:
‘ಜೋರು ಮಳೆಯಿಂದ ಕೆಂಪಾಪುರದ ಬಳಿ ರಸ್ತೆಯಲ್ಲಿ ಸೋಮವಾರ ರಾತ್ರಿ ಅಪಾರ ಪ್ರಮಾಣದ ನೀರು ಸಂಗ್ರಹಗೊಂಡು ಹಳ್ಳದಂತೆ ನೀರು ಹರಿಯುತ್ತಿತ್ತು. ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್ನಲ್ಲಿ ನೀರು ತುಂಬಿದ ಕಾರಣಕ್ಕೆ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆಯಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ನಿಖರ ಕಾರಣ ತಿಳಿಯಲು ತನಿಖೆ ನಡೆಸಲಾಗುತ್ತಿದೆ’ ಎಂದು ಬಿಎಂಟಿಸಿ ತಿಳಿಸಿದೆ.