<p>ಬೆಂಗಳೂರು: ಬಿಎಂಟಿಸಿಯ ಕಾರ್ಮಿಕ ಮತ್ತು ಕಲ್ಯಾಣ ವಿಭಾಗದಿಂದ ಬಿಎಂಟಿಸಿ ಘಟಕ 11ರ (ಪುಟ್ಟೇನಹಳ್ಳಿ) ಸಿಬ್ಬಂದಿಗೆ ಆರೋಗ್ಯ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಆರೋಗ್ಯ ಹಾಗೂ ಕಲ್ಯಾಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಘಟಕಗಳನ್ನು ಗುರುತಿಸಿ, ‘ಉತ್ತಮ ಘಟಕ’ ಪ್ರಶಂಸನಾ ಪತ್ರ ಹಾಗೂ ಸ್ಮರಣಿಕೆ ವಿತರಿಸಿ ಗೌರವಿಸಲಾಯಿತು.</p>.<p>ಬಿಎಂಟಿಸಿ ನಿರ್ದೇಶಕ (ಭದ್ರತೆ ಮತ್ತು ಜಾಗೃತಿ) ಅಬ್ದುಲ್ ಅಹದ್ ಮಾತನಾಡಿ, ‘ನೌಕರರು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಒತ್ತಡ ನಿವಾರಣೆಗಾಗಿ ವಿವಿಧ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಸುಲಭ ಯೋಗಾಭ್ಯಾಸ ಹಾಗೂ ಧ್ಯಾನಗಳನ್ನು ಮಾಡಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ನೌಕರರ ಆರೋಗ್ಯಾಭಿವೃದ್ಧಿಗಾಗಿ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಪಿ.ವೈ. ನಾಯಕ್ ಮಾಹಿತಿ ನೀಡಿದರು.</p>.<p>ಸಂಸ್ಥೆಯ ಏಳು ವಲಯಗಳ ವಿಭಾಗೀಯ ನಿಯಂತ್ರಣ ಅಧಿಕಾರಿಗಳು ಹಾಗೂ 51 ಘಟಕಗಳ ವ್ಯವಸ್ಥಾಪಕರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-4-1179287642</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬಿಎಂಟಿಸಿಯ ಕಾರ್ಮಿಕ ಮತ್ತು ಕಲ್ಯಾಣ ವಿಭಾಗದಿಂದ ಬಿಎಂಟಿಸಿ ಘಟಕ 11ರ (ಪುಟ್ಟೇನಹಳ್ಳಿ) ಸಿಬ್ಬಂದಿಗೆ ಆರೋಗ್ಯ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಆರೋಗ್ಯ ಹಾಗೂ ಕಲ್ಯಾಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಘಟಕಗಳನ್ನು ಗುರುತಿಸಿ, ‘ಉತ್ತಮ ಘಟಕ’ ಪ್ರಶಂಸನಾ ಪತ್ರ ಹಾಗೂ ಸ್ಮರಣಿಕೆ ವಿತರಿಸಿ ಗೌರವಿಸಲಾಯಿತು.</p>.<p>ಬಿಎಂಟಿಸಿ ನಿರ್ದೇಶಕ (ಭದ್ರತೆ ಮತ್ತು ಜಾಗೃತಿ) ಅಬ್ದುಲ್ ಅಹದ್ ಮಾತನಾಡಿ, ‘ನೌಕರರು ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಒತ್ತಡ ನಿವಾರಣೆಗಾಗಿ ವಿವಿಧ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಸುಲಭ ಯೋಗಾಭ್ಯಾಸ ಹಾಗೂ ಧ್ಯಾನಗಳನ್ನು ಮಾಡಬೇಕು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ನೌಕರರ ಆರೋಗ್ಯಾಭಿವೃದ್ಧಿಗಾಗಿ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ಮುಖ್ಯ ಕಾರ್ಮಿಕ ಮತ್ತು ಕಲ್ಯಾಣಾಧಿಕಾರಿ ಪಿ.ವೈ. ನಾಯಕ್ ಮಾಹಿತಿ ನೀಡಿದರು.</p>.<p>ಸಂಸ್ಥೆಯ ಏಳು ವಲಯಗಳ ವಿಭಾಗೀಯ ನಿಯಂತ್ರಣ ಅಧಿಕಾರಿಗಳು ಹಾಗೂ 51 ಘಟಕಗಳ ವ್ಯವಸ್ಥಾಪಕರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-4-1179287642</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>