<p><strong>ಆ.20ರಿಂದ ಪುಸ್ತಕಗಳ ಪ್ರದರ್ಶನ</strong></p>.<p><strong>ಬೆಂಗಳೂರು</strong>: 2022ರಲ್ಲಿ ಪ್ರಥಮ ಮುದ್ರಣಗೊಂಡ ಪುಸ್ತಕಗಳ ಆಯ್ಕೆ ಪ್ರಕ್ರಿಯೆಯನ್ನು ರಾಜ್ಯಮಟ್ಟದ ಆಯ್ಕೆ ಸಮಿತಿ ಪೂರ್ಣಗೊಳಿಸಿದೆ. ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ವಿಜಯನಗರದ ಎಂ.ಸಿ. ಬಡಾವಣೆಯ ವಿಷ್ಣುವರ್ಧನ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರದಲ್ಲಿ ಆ.20 ರಿಂದ 22ರವರೆಗೆ ಏರ್ಪಡಿಸಲಾಗಿದೆ.</p>.<p>ಪ್ರತಿದಿನ ಬೆಳಿಗ್ಗೆ 10ರಿಂದ ಸಂಜೆ 5.30ರವರಗೆ ಪುಸ್ತಕ ಪ್ರದರ್ಶನ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.</p>.<p>ತಾತ್ಕಾಲಿಕ ಆಯ್ಕೆಪಟ್ಟಿಯನ್ನು ರಾಜ್ಯದ ಎಲ್ಲ ಜಿಲ್ಲಾ, ನಗರ ಕೇಂದ್ರ ಗ್ರಂಥಾಲಯಗಳ ಉಪ ನಿರ್ದೇಶಕರು, ಮುಖ್ಯ ಗ್ರಂಥಾಲಯಗಳ ಕಚೇರಿಗಳಲ್ಲಿ ಪ್ರದರ್ಶಿಸಲಾಗುವುದು. ಇಲಾಖೆಯ ಅಧಿಕೃತ ವೆಬ್ಸೈಟ್ www.dpl.karnataka.gov.inನಲ್ಲಿ ಪ್ರಕಟಿಸಲಾಗುವುದು.</p>.<p>ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 30ರ ಒಳಗೆ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು – 560001 ಇಲ್ಲಿಗೆ ಲಿಖಿತವಾಗಿ ಸಲ್ಲಿಸಲು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಮುಖ್ಯ ಗ್ರಂಥಾಲಯ ಅಧಿಕಾರಿ ಅನಿತಾ ಆರ್. ತಿಳಿಸಿದ್ದಾರೆ.</p>.<p><strong>ಟೂಲ್ ಡಿಸೈನ್ ಕೋರ್ಸ್</strong></p>.<p><strong>ಬೆಂಗಳೂರು</strong>: ಬೆಂಗಳೂರಿನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ 2025-26ನೇ ಸಾಲಿನ ‘ಪೋಸ್ಟ್ ಡಿಪ್ಲೊಮಾ ಇನ್ ಟೂಲ್ ಡಿಸೈನ್’ ಕೋರ್ಸ್ಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.</p>.<p>ಡಿಎಂಇ, ಡಿಟಿಡಿಎಂ, ಬಿಇ (ಮೆಕ್ಯಾನಿಕಲ್, ಇಂಡಸ್ಟ್ರಿಯಲ್ ಆ್ಯಂಡ್ ಮ್ಯಾನುಫ್ಯಾಕ್ಚರಿಂಗ್, ಇಂಡಸ್ಟ್ರಿಯಲ್ ಆ್ಯಂಡ್ ಪ್ರೊಡಕ್ಷನ್, ಅಟೊಮೊಬೈಲ್ ಎಂಜಿನಿಯರಿಂಗ್) ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಪ್ರಾಂಶುಪಾಲರು ಪಿಜಿ/ಪಿಡಿ ಸ್ಟಡೀಸ್ ಕೇಂದ್ರ, ರಾಜಾಜಿನಗರ, ಬೆಂಗಳೂರು. ಮೊಬೈಲ್: 9141629584, 9880217473, ವೆಬ್ಸೈಟ್: https://gttc.karnataka.gov.in ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<p><strong>ಅರ್ಜಿ ಆಹ್ವಾನ</strong></p>.<p><strong>ಬೆಂಗಳೂರು</strong>: ಬೆಂಗಳೂರಿನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ‘ಎಂ-ಟೆಕ್ ಇನ್ ಟೂಲ್ ಎಂಜಿನಿಯರಿಂಗ್’ ಕೋರ್ಸಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.</p>.<p>ಬಿಇ ಮೆಕ್ಯಾನಿಕಲ್ ಎಂಜಿನಿಯರಿಂಗ್, ಅಟೊಮೊಬೈಲ್ ಎಂಜಿನಿಯರಿಂಗ್, ಆಟೊಮೇಷನ್ ಆ್ಯಂಡ್ ರೊಬೊಟಿಕ್ ಎಂಜಿನಿಯರಿಂಗ್, ಇಂಡಸ್ಟ್ರಿಯಲ್ ಆ್ಯಂಡ್ ಪ್ರೊಡಕ್ಷನ್ ಎಂಜಿನಿಯರಿಂಗ್, ಮೆಕ್ಯಾಟ್ರಾನಿಕ್ಸ್ ಎಂಜಿನಿಯರಿಂಗ್ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.</p>.<p>ಮಾಹಿತಿಗೆ ಮತ್ತು ಅರ್ಜಿ ಸಲ್ಲಿಸಲು ಪ್ರಾಂಶುಪಾಲರು ಪಿಜಿ/ಪಿಡಿ ಸ್ಟಡೀಸ್ ಕೇಂದ್ರ, ರಾಜಾಜಿನಗರ, ಬೆಂಗಳೂರು. ಮೊಬೈಲ್: 9141629584, 9880217473, ವೆಬ್ಸೈಟ್: https://gttc.karnataka.gov.in ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<p><strong>ಬಿಎಂಶ್ರೀ ಪ್ರತಿಷ್ಠಾನಕ್ಕೆ ಆಯ್ಕೆ</strong></p>.<p><strong>ಬೆಂಗಳೂರು</strong>: ಬಿಎಂಶ್ರೀ ಪ್ರತಿಷ್ಠಾನದ ಕಾರ್ಯಕಾರಿ ಸಮಿತಿಗೆ ಸಾಹಿತಿ ಸಿಸಿರಾ ಸೇರಿದಂತೆ ಐದು ಜನರು ಆಯ್ಕೆಯಾಗಿದ್ದಾರೆ.</p>.<p>2025--28ರ ಅವಧಿಗೆ ಕಾರ್ಯಕಾರಿ ಸಮಿತಿಯ ಐದು ಸ್ಥಾನಗಳಿಗೆ ಇತ್ತೀಚೆಗೆ ಚುನಾವಣೆ ಮೂಲಕ ಆಯ್ಕೆ ಮಾಡಲಾಯಿತು ಎಂದು ಪ್ರತಿಷ್ಠಾನದ ಅಧ್ಯಕ್ಷ ಬೈರಮಂಗಲ ರಾಮೇಗೌಡ, ಕಾರ್ಯದರ್ಶಿ ಶಾಂತರಾಜು ತಿಳಿಸಿದ್ದಾರೆ.</p>.<p>ಎಸ್.ರಾಮಲಿಂಗೇಶ್ವರ (ಸಿಸಿರಾ), ಜಿ. ಅಶ್ವತ್ಥನಾರಾಯಣ, ಎಸ್.ಜಿ. ಮಾಲತಿ ಶೆಟ್ಟಿ, ಬಿ.ಆರ್. ರವೀಂದ್ರನಾಥ್, ಸಂಗಮೇಶ್ ಬಾದವಾಡಗಿ ಆಯ್ಕೆಯಾಗಿದ್ದಾರೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆ.20ರಿಂದ ಪುಸ್ತಕಗಳ ಪ್ರದರ್ಶನ</strong></p>.<p><strong>ಬೆಂಗಳೂರು</strong>: 2022ರಲ್ಲಿ ಪ್ರಥಮ ಮುದ್ರಣಗೊಂಡ ಪುಸ್ತಕಗಳ ಆಯ್ಕೆ ಪ್ರಕ್ರಿಯೆಯನ್ನು ರಾಜ್ಯಮಟ್ಟದ ಆಯ್ಕೆ ಸಮಿತಿ ಪೂರ್ಣಗೊಳಿಸಿದೆ. ಆಯ್ಕೆಯಾದ ಮತ್ತು ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ವಿಜಯನಗರದ ಎಂ.ಸಿ. ಬಡಾವಣೆಯ ವಿಷ್ಣುವರ್ಧನ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರದಲ್ಲಿ ಆ.20 ರಿಂದ 22ರವರೆಗೆ ಏರ್ಪಡಿಸಲಾಗಿದೆ.</p>.<p>ಪ್ರತಿದಿನ ಬೆಳಿಗ್ಗೆ 10ರಿಂದ ಸಂಜೆ 5.30ರವರಗೆ ಪುಸ್ತಕ ಪ್ರದರ್ಶನ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.</p>.<p>ತಾತ್ಕಾಲಿಕ ಆಯ್ಕೆಪಟ್ಟಿಯನ್ನು ರಾಜ್ಯದ ಎಲ್ಲ ಜಿಲ್ಲಾ, ನಗರ ಕೇಂದ್ರ ಗ್ರಂಥಾಲಯಗಳ ಉಪ ನಿರ್ದೇಶಕರು, ಮುಖ್ಯ ಗ್ರಂಥಾಲಯಗಳ ಕಚೇರಿಗಳಲ್ಲಿ ಪ್ರದರ್ಶಿಸಲಾಗುವುದು. ಇಲಾಖೆಯ ಅಧಿಕೃತ ವೆಬ್ಸೈಟ್ www.dpl.karnataka.gov.inನಲ್ಲಿ ಪ್ರಕಟಿಸಲಾಗುವುದು.</p>.<p>ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 30ರ ಒಳಗೆ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀದಿ, ಬೆಂಗಳೂರು – 560001 ಇಲ್ಲಿಗೆ ಲಿಖಿತವಾಗಿ ಸಲ್ಲಿಸಲು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಮುಖ್ಯ ಗ್ರಂಥಾಲಯ ಅಧಿಕಾರಿ ಅನಿತಾ ಆರ್. ತಿಳಿಸಿದ್ದಾರೆ.</p>.<p><strong>ಟೂಲ್ ಡಿಸೈನ್ ಕೋರ್ಸ್</strong></p>.<p><strong>ಬೆಂಗಳೂರು</strong>: ಬೆಂಗಳೂರಿನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ 2025-26ನೇ ಸಾಲಿನ ‘ಪೋಸ್ಟ್ ಡಿಪ್ಲೊಮಾ ಇನ್ ಟೂಲ್ ಡಿಸೈನ್’ ಕೋರ್ಸ್ಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.</p>.<p>ಡಿಎಂಇ, ಡಿಟಿಡಿಎಂ, ಬಿಇ (ಮೆಕ್ಯಾನಿಕಲ್, ಇಂಡಸ್ಟ್ರಿಯಲ್ ಆ್ಯಂಡ್ ಮ್ಯಾನುಫ್ಯಾಕ್ಚರಿಂಗ್, ಇಂಡಸ್ಟ್ರಿಯಲ್ ಆ್ಯಂಡ್ ಪ್ರೊಡಕ್ಷನ್, ಅಟೊಮೊಬೈಲ್ ಎಂಜಿನಿಯರಿಂಗ್) ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಪ್ರಾಂಶುಪಾಲರು ಪಿಜಿ/ಪಿಡಿ ಸ್ಟಡೀಸ್ ಕೇಂದ್ರ, ರಾಜಾಜಿನಗರ, ಬೆಂಗಳೂರು. ಮೊಬೈಲ್: 9141629584, 9880217473, ವೆಬ್ಸೈಟ್: https://gttc.karnataka.gov.in ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<p><strong>ಅರ್ಜಿ ಆಹ್ವಾನ</strong></p>.<p><strong>ಬೆಂಗಳೂರು</strong>: ಬೆಂಗಳೂರಿನ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ‘ಎಂ-ಟೆಕ್ ಇನ್ ಟೂಲ್ ಎಂಜಿನಿಯರಿಂಗ್’ ಕೋರ್ಸಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.</p>.<p>ಬಿಇ ಮೆಕ್ಯಾನಿಕಲ್ ಎಂಜಿನಿಯರಿಂಗ್, ಅಟೊಮೊಬೈಲ್ ಎಂಜಿನಿಯರಿಂಗ್, ಆಟೊಮೇಷನ್ ಆ್ಯಂಡ್ ರೊಬೊಟಿಕ್ ಎಂಜಿನಿಯರಿಂಗ್, ಇಂಡಸ್ಟ್ರಿಯಲ್ ಆ್ಯಂಡ್ ಪ್ರೊಡಕ್ಷನ್ ಎಂಜಿನಿಯರಿಂಗ್, ಮೆಕ್ಯಾಟ್ರಾನಿಕ್ಸ್ ಎಂಜಿನಿಯರಿಂಗ್ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು.</p>.<p>ಮಾಹಿತಿಗೆ ಮತ್ತು ಅರ್ಜಿ ಸಲ್ಲಿಸಲು ಪ್ರಾಂಶುಪಾಲರು ಪಿಜಿ/ಪಿಡಿ ಸ್ಟಡೀಸ್ ಕೇಂದ್ರ, ರಾಜಾಜಿನಗರ, ಬೆಂಗಳೂರು. ಮೊಬೈಲ್: 9141629584, 9880217473, ವೆಬ್ಸೈಟ್: https://gttc.karnataka.gov.in ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<p><strong>ಬಿಎಂಶ್ರೀ ಪ್ರತಿಷ್ಠಾನಕ್ಕೆ ಆಯ್ಕೆ</strong></p>.<p><strong>ಬೆಂಗಳೂರು</strong>: ಬಿಎಂಶ್ರೀ ಪ್ರತಿಷ್ಠಾನದ ಕಾರ್ಯಕಾರಿ ಸಮಿತಿಗೆ ಸಾಹಿತಿ ಸಿಸಿರಾ ಸೇರಿದಂತೆ ಐದು ಜನರು ಆಯ್ಕೆಯಾಗಿದ್ದಾರೆ.</p>.<p>2025--28ರ ಅವಧಿಗೆ ಕಾರ್ಯಕಾರಿ ಸಮಿತಿಯ ಐದು ಸ್ಥಾನಗಳಿಗೆ ಇತ್ತೀಚೆಗೆ ಚುನಾವಣೆ ಮೂಲಕ ಆಯ್ಕೆ ಮಾಡಲಾಯಿತು ಎಂದು ಪ್ರತಿಷ್ಠಾನದ ಅಧ್ಯಕ್ಷ ಬೈರಮಂಗಲ ರಾಮೇಗೌಡ, ಕಾರ್ಯದರ್ಶಿ ಶಾಂತರಾಜು ತಿಳಿಸಿದ್ದಾರೆ.</p>.<p>ಎಸ್.ರಾಮಲಿಂಗೇಶ್ವರ (ಸಿಸಿರಾ), ಜಿ. ಅಶ್ವತ್ಥನಾರಾಯಣ, ಎಸ್.ಜಿ. ಮಾಲತಿ ಶೆಟ್ಟಿ, ಬಿ.ಆರ್. ರವೀಂದ್ರನಾಥ್, ಸಂಗಮೇಶ್ ಬಾದವಾಡಗಿ ಆಯ್ಕೆಯಾಗಿದ್ದಾರೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>