<p><strong>ಬೆಂಗಳೂರು</strong>: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ 14 ವರ್ಷದ ಬಾಲಕ, ದಕ್ಷಿಣ ತಾಲ್ಲೂಕಿನ ತಾತಗುಣಿ ಸಮೀಪ ಶವವಾಗಿ ಪತ್ತೆಯಾಗಿದ್ದಾನೆ.</p>.<p>ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಪೈಪ್ಲೈನ್ ಅಳವಡಿಕೆಗಾಗಿ ನಿರ್ಮಿಸಿದ್ದ ತೆರೆದ ಸಂಪ್ನಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ರಜನಿಕಾಂತ್ ಎಂಬುವವರ ಪುತ್ರ ಪ್ರೀತಮ್ (14) ಮೃತ ಬಾಲಕ.</p>.<p>‘ಈ ದುರ್ಘಟನೆಗೆ ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ. ಪೈಪ್ಲೈನ್ಗಾಗಿ ತೆಗೆಯಲಾಗಿದ್ದ ಸಂಪ್ ಅನ್ನು ಮುಚ್ಚಿರಲಿಲ್ಲ. ಬಾಲಕ ಓಡಾಡುವ ವೇಳೆ ಆಕಸ್ಮಿಕವಾಗಿ ಸಂಪ್ಗೆ ಬಿದ್ದಿರುವ ಸಾಧ್ಯತೆಯಿದೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.<p>ತಾತಗುಣಿಯ ಬಾಡಿಗೆ ಮನೆಯಲ್ಲಿ ರಜನಿಕಾಂತ್ ಕುಟುಂಬ ವಾಸವಿದೆ. ಪ್ರೀತಮ್ ಮೂರು ದಿನಗಳ ಹಿಂದೆ ಮನೆಯಿಂದ ಹೊರಗೆ ಹೋದವನು ವಾಪಸ್ ಬಂದಿರಲಿಲ್ಲ. ಈ ಸಂಬಂಧ ಪೋಷಕರು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.</p>.<p>ಪೊಲೀಸರು ಮತ್ತು ಸ್ಥಳೀಯರು ಹುಡುಕಾಟ ನಡೆಸುತ್ತಿದ್ದ ವೇಳೆ ಭಾನುವಾರ ಜಲಮಂಡಳಿ ಕಾಮಗಾರಿ ನಡೆಯುತ್ತಿದ್ದ ಸ್ಥಳದ ತೆರೆದ ಸಂಪ್ನಲ್ಲಿ ಶವ ಪತ್ತೆಯಾಗಿದೆ. ಮೃತದೇಹದ ಎದುರು ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.</p>.<p>ಸ್ಥಳಕ್ಕೆ ಧಾವಿಸಿದ ಕಗ್ಗಲೀಪುರ ಪೊಲೀಸರು ಮೃತದೇಹವನ್ನು ಸಂಪ್ನಿಂದ ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ಮುಂದಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ 14 ವರ್ಷದ ಬಾಲಕ, ದಕ್ಷಿಣ ತಾಲ್ಲೂಕಿನ ತಾತಗುಣಿ ಸಮೀಪ ಶವವಾಗಿ ಪತ್ತೆಯಾಗಿದ್ದಾನೆ.</p>.<p>ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಪೈಪ್ಲೈನ್ ಅಳವಡಿಕೆಗಾಗಿ ನಿರ್ಮಿಸಿದ್ದ ತೆರೆದ ಸಂಪ್ನಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ರಜನಿಕಾಂತ್ ಎಂಬುವವರ ಪುತ್ರ ಪ್ರೀತಮ್ (14) ಮೃತ ಬಾಲಕ.</p>.<p>‘ಈ ದುರ್ಘಟನೆಗೆ ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ. ಪೈಪ್ಲೈನ್ಗಾಗಿ ತೆಗೆಯಲಾಗಿದ್ದ ಸಂಪ್ ಅನ್ನು ಮುಚ್ಚಿರಲಿಲ್ಲ. ಬಾಲಕ ಓಡಾಡುವ ವೇಳೆ ಆಕಸ್ಮಿಕವಾಗಿ ಸಂಪ್ಗೆ ಬಿದ್ದಿರುವ ಸಾಧ್ಯತೆಯಿದೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.</p>.<p>ತಾತಗುಣಿಯ ಬಾಡಿಗೆ ಮನೆಯಲ್ಲಿ ರಜನಿಕಾಂತ್ ಕುಟುಂಬ ವಾಸವಿದೆ. ಪ್ರೀತಮ್ ಮೂರು ದಿನಗಳ ಹಿಂದೆ ಮನೆಯಿಂದ ಹೊರಗೆ ಹೋದವನು ವಾಪಸ್ ಬಂದಿರಲಿಲ್ಲ. ಈ ಸಂಬಂಧ ಪೋಷಕರು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.</p>.<p>ಪೊಲೀಸರು ಮತ್ತು ಸ್ಥಳೀಯರು ಹುಡುಕಾಟ ನಡೆಸುತ್ತಿದ್ದ ವೇಳೆ ಭಾನುವಾರ ಜಲಮಂಡಳಿ ಕಾಮಗಾರಿ ನಡೆಯುತ್ತಿದ್ದ ಸ್ಥಳದ ತೆರೆದ ಸಂಪ್ನಲ್ಲಿ ಶವ ಪತ್ತೆಯಾಗಿದೆ. ಮೃತದೇಹದ ಎದುರು ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.</p>.<p>ಸ್ಥಳಕ್ಕೆ ಧಾವಿಸಿದ ಕಗ್ಗಲೀಪುರ ಪೊಲೀಸರು ಮೃತದೇಹವನ್ನು ಸಂಪ್ನಿಂದ ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ಮುಂದಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>