<p>ಬೆಂಗಳೂರು: ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಘನತ್ಯಾಜ್ಯ ಟೆಂಡರ್ ಅಂತಿಮಗೊಳಿಸಲು, ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಮಂಡಳಿ (ಬಿಎಸ್ಡಬ್ಲ್ಯುಎಂಎಲ್) ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕರೀಗೌಡ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಸಂಗ್ರಹಿಸಿಡಲು ಸಕ್ಷಮ ಪ್ರಾಧಿಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಹೈಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ.</p>.<p>‘ಕರೀಗೌಡ ವಿರುದ್ಧ ಎಫ್ಐಆರ್ ದಾಖಲಿಸಿ ಎಸ್ಐಟಿ ತನಿಖೆಗೆ ನಿರ್ದೇಶಿಸಬೇಕು’ ಎಂದು ಕೋರಿ ‘ಬೆಂಗಳೂರು ನಗರ ಸ್ವಚ್ಛತೆ, ಲಾರಿ ಮಾಲೀಕರ ಮತ್ತು ಗುತ್ತಿಗೆದಾರರ ಸಂಘ’ದ ಪ್ರಧಾನ ಕಾರ್ಯದರ್ಶಿ ಬಾಲಸುಬ್ರಮಣಿಯಂ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಬಾಲಸುಬ್ರಮಣಿಯಂ ಪರ ಹೈಕೋರ್ಟ್ ವಕೀಲ ಪಿ.ಪ್ರಸನ್ನ ಕುಮಾರ್ ಅರ್ಜಿದಾರರ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಸಾಕ್ಷ್ಯಗಳನ್ನು ಅಡಕಗೊಳಿಸಲಾದ ಪ್ರಮಾಣ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.</p>.<p>ಅಂತೆಯೇ, ‘ಕರೀಗೌಡ ಅವರು ಕಾನೂನುಬಾಹಿರವಾಗಿ ಪ್ರತಿಫಲಾಪೇಕ್ಷೆ ವ್ಯಕ್ತಪಡಿಸಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಸಂಗತಿಗೆ ಸಾಕ್ಷ್ಯವಾಗಬಲ್ಲ ಬಿಎಸ್ಡಬ್ಲ್ಯುಎಂಎಲ್ ಕಚೇರಿಯಲ್ಲಿನ ಸಿಸಿಟಿವಿ ವಿಡಿಯೊ ತುಣುಕುಗಳು, ಹಾರ್ಡ್ ಡ್ರೈವ್ಸ್, ಟವರ್ ಡಂಪ್ ಲೊಕೇಷನ್ ಮತ್ತು ಪರಸ್ಪರ ಸಂಭಾಷಿಸಿರುವ ಮೊಬೈಲ್ ಕಾಲ್ಗಳ ವಿವರ ಸಂಗ್ರಹಗಳನ್ನು ಸಂಗ್ರಹಿಸಿ ಇರಿಸಲು ನಿರ್ದೇಶಿಸಬೇಕು’ ಎಂದು ಕೋರಲಾದ ಮಧ್ಯಂತರ ಅರ್ಜಿಯನ್ನೂ ಸಲ್ಲಿಸಿದರು.</p>.<p>ಪ್ರಕರಣ: ‘ಕರೀಗೌಡ ಅವರು ಅರ್ಜಿದಾರರನ್ನು ಮಾರ್ಚ್ 9ರಂದು ತಮ್ಮಲ್ಲಿಗೆ ಕರೆಯಿಸಿಕೊಂಡಿದ್ದರು. ಆ ವೇಳೆ ಅವರು ನೀವು ನಮಗೆ ಹಣ ನೀಡಬೇಕು. ಇಲ್ಲವಾದರೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ತುಷಾರ್ ಗಿರಿನಾಥ್ ಟೆಂಡರ್ ಅಂತಿಮಗೊಳಿಸುವುದಿಲ್ಲ ಎಂಬುದಾಗಿತಿಳಿಸಿದ್ದರು’ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.</p>.<p>‘ಏಳು ವರ್ಷದ ಗುತ್ತಿಗೆಗೆ ಸರ್ಕಾರ ಹಾಗೂ ನಗರಾಭಿವೃದ್ದಿ ಇಲಾಖೆಗೆ ಶೇ 15ರಷ್ಟು ಲಂಚ ನೀಡಬೇಕೆಂದು ಕೇಳಿದ್ದಾರೆ. ಲಂಚ ನೀಡದಿದ್ದರೆ ಅರ್ಜಿದಾರರ ಇತರೆ ಗುತ್ತಿಗೆಗಳನ್ನೂ ರದ್ದುಪಡಿಸುತ್ತೇವೆ ಎಂದು ಬೆದರಿಸಿದ್ದಾರೆ. ಈ ಬಗ್ಗೆ ಮಾರ್ಚ್ 11ರಂದು ಮುಖ್ಯ ಕಾರ್ಯದರ್ಶಿಗೆ ದೂರನ್ನೂ ನೀಡಲಾಗಿದೆ. ಅಂತಿಮವಾಗಿ ಲಂಚದ ಬೇಡಿಕೆಗೆ ಒಪ್ಪದೇ ಹೋದ ಕಾರಣಕ್ಕೆ ಜುಲೈ 30ರಂದು ಕರೆಯಲಾಗಿದ್ದ ಟೆಂಡರ್ ಹಿಂಪಡೆದು ಹೊಸ ಟೆಂಡರ್ ಪ್ರಕಟಿಸಿ 2026ರ ಮಾರ್ಚ್ 25ರಂದು ಅಧಿಸೂಚನೆ ಹೊರಡಿಸಲಾಗಿದೆ’ ಎಂದು ವಿವರಿಸಲಾಗಿದೆ.</p>.<p>‘ಈ ಹಿನ್ನೆಲೆಯಲ್ಲಿ ಟೆಂಡರ್ ಅಧಿಸೂಚನೆ ರದ್ದುಪಡಿಸಬೇಕು. ಅಧಿಕಾರ ದುರುಪಯೋಗ ಮಾಡಿಕೊಂಡು, ಟೆಂಡರ್ ಅಧಿಸೂಚನೆ ಹಿಂಪಡೆದ ಹಾಗೂ ಲಂಚಕ್ಕೆ ಬೇಡಿಕೆಯಿಟ್ಟ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆಗೆ ಆದೇಶಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-51-806667691</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಘನತ್ಯಾಜ್ಯ ಟೆಂಡರ್ ಅಂತಿಮಗೊಳಿಸಲು, ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಮಂಡಳಿ (ಬಿಎಸ್ಡಬ್ಲ್ಯುಎಂಎಲ್) ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕರೀಗೌಡ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಆರೋಪಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಸಂಗ್ರಹಿಸಿಡಲು ಸಕ್ಷಮ ಪ್ರಾಧಿಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಹೈಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ.</p>.<p>‘ಕರೀಗೌಡ ವಿರುದ್ಧ ಎಫ್ಐಆರ್ ದಾಖಲಿಸಿ ಎಸ್ಐಟಿ ತನಿಖೆಗೆ ನಿರ್ದೇಶಿಸಬೇಕು’ ಎಂದು ಕೋರಿ ‘ಬೆಂಗಳೂರು ನಗರ ಸ್ವಚ್ಛತೆ, ಲಾರಿ ಮಾಲೀಕರ ಮತ್ತು ಗುತ್ತಿಗೆದಾರರ ಸಂಘ’ದ ಪ್ರಧಾನ ಕಾರ್ಯದರ್ಶಿ ಬಾಲಸುಬ್ರಮಣಿಯಂ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ಬಾಲಸುಬ್ರಮಣಿಯಂ ಪರ ಹೈಕೋರ್ಟ್ ವಕೀಲ ಪಿ.ಪ್ರಸನ್ನ ಕುಮಾರ್ ಅರ್ಜಿದಾರರ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಸಾಕ್ಷ್ಯಗಳನ್ನು ಅಡಕಗೊಳಿಸಲಾದ ಪ್ರಮಾಣ ಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.</p>.<p>ಅಂತೆಯೇ, ‘ಕರೀಗೌಡ ಅವರು ಕಾನೂನುಬಾಹಿರವಾಗಿ ಪ್ರತಿಫಲಾಪೇಕ್ಷೆ ವ್ಯಕ್ತಪಡಿಸಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಸಂಗತಿಗೆ ಸಾಕ್ಷ್ಯವಾಗಬಲ್ಲ ಬಿಎಸ್ಡಬ್ಲ್ಯುಎಂಎಲ್ ಕಚೇರಿಯಲ್ಲಿನ ಸಿಸಿಟಿವಿ ವಿಡಿಯೊ ತುಣುಕುಗಳು, ಹಾರ್ಡ್ ಡ್ರೈವ್ಸ್, ಟವರ್ ಡಂಪ್ ಲೊಕೇಷನ್ ಮತ್ತು ಪರಸ್ಪರ ಸಂಭಾಷಿಸಿರುವ ಮೊಬೈಲ್ ಕಾಲ್ಗಳ ವಿವರ ಸಂಗ್ರಹಗಳನ್ನು ಸಂಗ್ರಹಿಸಿ ಇರಿಸಲು ನಿರ್ದೇಶಿಸಬೇಕು’ ಎಂದು ಕೋರಲಾದ ಮಧ್ಯಂತರ ಅರ್ಜಿಯನ್ನೂ ಸಲ್ಲಿಸಿದರು.</p>.<p>ಪ್ರಕರಣ: ‘ಕರೀಗೌಡ ಅವರು ಅರ್ಜಿದಾರರನ್ನು ಮಾರ್ಚ್ 9ರಂದು ತಮ್ಮಲ್ಲಿಗೆ ಕರೆಯಿಸಿಕೊಂಡಿದ್ದರು. ಆ ವೇಳೆ ಅವರು ನೀವು ನಮಗೆ ಹಣ ನೀಡಬೇಕು. ಇಲ್ಲವಾದರೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ತುಷಾರ್ ಗಿರಿನಾಥ್ ಟೆಂಡರ್ ಅಂತಿಮಗೊಳಿಸುವುದಿಲ್ಲ ಎಂಬುದಾಗಿತಿಳಿಸಿದ್ದರು’ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.</p>.<p>‘ಏಳು ವರ್ಷದ ಗುತ್ತಿಗೆಗೆ ಸರ್ಕಾರ ಹಾಗೂ ನಗರಾಭಿವೃದ್ದಿ ಇಲಾಖೆಗೆ ಶೇ 15ರಷ್ಟು ಲಂಚ ನೀಡಬೇಕೆಂದು ಕೇಳಿದ್ದಾರೆ. ಲಂಚ ನೀಡದಿದ್ದರೆ ಅರ್ಜಿದಾರರ ಇತರೆ ಗುತ್ತಿಗೆಗಳನ್ನೂ ರದ್ದುಪಡಿಸುತ್ತೇವೆ ಎಂದು ಬೆದರಿಸಿದ್ದಾರೆ. ಈ ಬಗ್ಗೆ ಮಾರ್ಚ್ 11ರಂದು ಮುಖ್ಯ ಕಾರ್ಯದರ್ಶಿಗೆ ದೂರನ್ನೂ ನೀಡಲಾಗಿದೆ. ಅಂತಿಮವಾಗಿ ಲಂಚದ ಬೇಡಿಕೆಗೆ ಒಪ್ಪದೇ ಹೋದ ಕಾರಣಕ್ಕೆ ಜುಲೈ 30ರಂದು ಕರೆಯಲಾಗಿದ್ದ ಟೆಂಡರ್ ಹಿಂಪಡೆದು ಹೊಸ ಟೆಂಡರ್ ಪ್ರಕಟಿಸಿ 2026ರ ಮಾರ್ಚ್ 25ರಂದು ಅಧಿಸೂಚನೆ ಹೊರಡಿಸಲಾಗಿದೆ’ ಎಂದು ವಿವರಿಸಲಾಗಿದೆ.</p>.<p>‘ಈ ಹಿನ್ನೆಲೆಯಲ್ಲಿ ಟೆಂಡರ್ ಅಧಿಸೂಚನೆ ರದ್ದುಪಡಿಸಬೇಕು. ಅಧಿಕಾರ ದುರುಪಯೋಗ ಮಾಡಿಕೊಂಡು, ಟೆಂಡರ್ ಅಧಿಸೂಚನೆ ಹಿಂಪಡೆದ ಹಾಗೂ ಲಂಚಕ್ಕೆ ಬೇಡಿಕೆಯಿಟ್ಟ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆಗೆ ಆದೇಶಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-51-806667691</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>