<p><strong>ಬೆಂಗಳೂರು: </strong>ನಗರತ್ಪೇಟೆಯ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ರಾಜಸ್ಥಾನ ಮೂಲದ ಮದನ್ ಅವರು ಸಜೀವದಹನವಾಗಿದ್ದಾರೆ.</p><p>ಮಹಿಳೆ ಹಾಗೂ ಇಬ್ಬರು ಮಕ್ಕಳು ಕಟ್ಟಡದ ಒಳಗೆ ಸಿಲುಕಿರುವ ಶಂಕೆಯಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ನಾಲ್ಕು ತಾಸು ಕಾರ್ಯಾಚರಣೆ ನಡೆಸಿದರೂ ಮೂವರ ಸುಳಿವು ಸಿಕ್ಕಿಲ್ಲ. ಕಾರ್ಯಾಚರಣೆ ಮುಂದುವರೆದಿದೆ.</p><p>ಶನಿವಾರ ಮುಂಜಾನೆ ಈ ಬೆಂಕಿ ಅವಘಡ ಸಂಭವಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದಿರುವ ಅಗ್ನಿಶಾಮಕದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.</p><p>ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.</p><p>ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.</p><p>ಮೂರು ಅಂತಸ್ತಿನ ಕಟ್ಟಡದಲ್ಲಿ ಫ್ಲೋರ್ಮ್ಯಾಟ್ ತಯಾರಿಸುವ ಘಟಕವಿತ್ತು. ಮೊದಲಿಗೆ ಅಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ಹೇಳಲಾಗಿದೆ.</p><p>ಶುಕ್ರವಾರ ಆಡುಗೋಡಿಯ ಶ್ರೀರಾಮ ಕಾಲೊನಿಯಲ್ಲಿ ಘಟನೆ ನಡೆದು ಬಾಲಕ ಮೃತಪಟ್ಟಿದ್ದ. ಇಂದು ಅದೇ ಮಾದರಿಯಲ್ಲಿ ಅನಾಹುತ ಸಂಭವಿಸಿದೆ.</p>.ಬೆಂಗಳೂರು| ಆಡುಗೋಡಿಯಲ್ಲಿ ನಿಗೂಢ ಸ್ಫೋಟ: ಬಾಲಕ ಸಾವು, 9 ಮಂದಿಗೆ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರತ್ಪೇಟೆಯ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ರಾಜಸ್ಥಾನ ಮೂಲದ ಮದನ್ ಅವರು ಸಜೀವದಹನವಾಗಿದ್ದಾರೆ.</p><p>ಮಹಿಳೆ ಹಾಗೂ ಇಬ್ಬರು ಮಕ್ಕಳು ಕಟ್ಟಡದ ಒಳಗೆ ಸಿಲುಕಿರುವ ಶಂಕೆಯಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ನಾಲ್ಕು ತಾಸು ಕಾರ್ಯಾಚರಣೆ ನಡೆಸಿದರೂ ಮೂವರ ಸುಳಿವು ಸಿಕ್ಕಿಲ್ಲ. ಕಾರ್ಯಾಚರಣೆ ಮುಂದುವರೆದಿದೆ.</p><p>ಶನಿವಾರ ಮುಂಜಾನೆ ಈ ಬೆಂಕಿ ಅವಘಡ ಸಂಭವಿಸಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದಿರುವ ಅಗ್ನಿಶಾಮಕದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.</p><p>ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.</p><p>ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.</p><p>ಮೂರು ಅಂತಸ್ತಿನ ಕಟ್ಟಡದಲ್ಲಿ ಫ್ಲೋರ್ಮ್ಯಾಟ್ ತಯಾರಿಸುವ ಘಟಕವಿತ್ತು. ಮೊದಲಿಗೆ ಅಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ಹೇಳಲಾಗಿದೆ.</p><p>ಶುಕ್ರವಾರ ಆಡುಗೋಡಿಯ ಶ್ರೀರಾಮ ಕಾಲೊನಿಯಲ್ಲಿ ಘಟನೆ ನಡೆದು ಬಾಲಕ ಮೃತಪಟ್ಟಿದ್ದ. ಇಂದು ಅದೇ ಮಾದರಿಯಲ್ಲಿ ಅನಾಹುತ ಸಂಭವಿಸಿದೆ.</p>.ಬೆಂಗಳೂರು| ಆಡುಗೋಡಿಯಲ್ಲಿ ನಿಗೂಢ ಸ್ಫೋಟ: ಬಾಲಕ ಸಾವು, 9 ಮಂದಿಗೆ ಗಾಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>