<p><strong>ಬೆಂಗಳೂರು:</strong> ಕಟ್ಟಡ ಪ್ರಾರಂಭಿಕ ಪ್ರಮಾಣ ಪತ್ರ (ಸಿಸಿ) ಹಾಗೂ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಇಲ್ಲದಿರುವ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರು ಸಂಪರ್ಕ ನೀಡುವ ಬಗ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಯಾವುದೇ ತೀರ್ಮಾನ ಆಗಿಲ್ಲ.</p>.<p>ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ರಾಜ್ಯದ ಇತರೆಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತು ಇರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಈ ಸಭೆ ಕರೆಯಲಾಗಿತ್ತು.</p>.<p>‘ಗುರುವಾರ (ಅ.9) ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಲಾಯಿತು. ಈ ಬಗ್ಗೆ ಪ್ರಸ್ತಾವ ಸಲ್ಲಿಸುವಂತೆ ಕಾನೂನು ಸಚಿವ ಎಚ್.ಕೆ.ಪಾಟೀಲ ಮತ್ತು ಇತರ ಇಲಾಖೆಗಳ ಸಚಿವರಿಗೆ ಮುಖ್ಯಮಂತ್ರಿ ಸೂಚಿಸಿದರು’ ಎಂದು ಸಭೆಯ ಬಳಿಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.</p>.<p>‘30X40 ಅಡಿ ಅಳತೆಯ ನಿವೇಶನದಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ಅನುಮತಿ ನೀಡಲು ತೀರ್ಮಾನ ಮಾಡಿದ್ದೇವೆ. ಇದರ ಅನುಷ್ಠಾನಕ್ಕೆ ಇಂಧನ ಇಲಾಖೆಗೆ ಕಾನೂನಿನ ಅಡೆತಡೆಗಳಿವೆ. ಈ ಅಡೆತಡೆಗಳನ್ನು ನಿವಾರಿಸಲು ಚರ್ಚೆ ನಡೆಸಲಾಯಿತು’ ಎಂದು ಅವರು ಹೇಳಿದರು.</p>.<p>‘ಈ ವಿಚಾರವಾಗಿ ಹಲವು ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆಯ ನೋಟಿಸ್ ಜಾರಿ ಮಾಡಿದೆ. ತಮಿಳುನಾಡಿನಿಂದ ಈ ಕುರಿತ ಮಾಹಿತಿಯನ್ನು ಪಡೆದಿದ್ದೇವೆ. ಕಾನೂನು ಚೌಕಟ್ಟಿನಲ್ಲಿ ದಾರಿ ಹುಡುಕುತ್ತಿದ್ದೇವೆ. ಜಿಬಿಎ ಮಾತ್ರವಲ್ಲದೇ ಇಡೀ ರಾಜ್ಯಕ್ಕೆ ಅನ್ವಯ ಆಗುವಂತೆ ಮಾಡಲು ಕಾನೂನು ತಜ್ಞರ ಜತೆ ಚರ್ಚಿಸಿ, ಪ್ರಸ್ತಾವನೆ ಸಲ್ಲಿಸಲು ಕಾನೂನು ಇಲಾಖೆಗೆ ಸೂಚಿಸಿದ್ದೇವೆ’ ಎಂದು ಶಿವಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಟ್ಟಡ ಪ್ರಾರಂಭಿಕ ಪ್ರಮಾಣ ಪತ್ರ (ಸಿಸಿ) ಹಾಗೂ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಇಲ್ಲದಿರುವ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರು ಸಂಪರ್ಕ ನೀಡುವ ಬಗ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಯಾವುದೇ ತೀರ್ಮಾನ ಆಗಿಲ್ಲ.</p>.<p>ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ರಾಜ್ಯದ ಇತರೆಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತು ಇರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಈ ಸಭೆ ಕರೆಯಲಾಗಿತ್ತು.</p>.<p>‘ಗುರುವಾರ (ಅ.9) ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಲಾಯಿತು. ಈ ಬಗ್ಗೆ ಪ್ರಸ್ತಾವ ಸಲ್ಲಿಸುವಂತೆ ಕಾನೂನು ಸಚಿವ ಎಚ್.ಕೆ.ಪಾಟೀಲ ಮತ್ತು ಇತರ ಇಲಾಖೆಗಳ ಸಚಿವರಿಗೆ ಮುಖ್ಯಮಂತ್ರಿ ಸೂಚಿಸಿದರು’ ಎಂದು ಸಭೆಯ ಬಳಿಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.</p>.<p>‘30X40 ಅಡಿ ಅಳತೆಯ ನಿವೇಶನದಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ಅನುಮತಿ ನೀಡಲು ತೀರ್ಮಾನ ಮಾಡಿದ್ದೇವೆ. ಇದರ ಅನುಷ್ಠಾನಕ್ಕೆ ಇಂಧನ ಇಲಾಖೆಗೆ ಕಾನೂನಿನ ಅಡೆತಡೆಗಳಿವೆ. ಈ ಅಡೆತಡೆಗಳನ್ನು ನಿವಾರಿಸಲು ಚರ್ಚೆ ನಡೆಸಲಾಯಿತು’ ಎಂದು ಅವರು ಹೇಳಿದರು.</p>.<p>‘ಈ ವಿಚಾರವಾಗಿ ಹಲವು ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆಯ ನೋಟಿಸ್ ಜಾರಿ ಮಾಡಿದೆ. ತಮಿಳುನಾಡಿನಿಂದ ಈ ಕುರಿತ ಮಾಹಿತಿಯನ್ನು ಪಡೆದಿದ್ದೇವೆ. ಕಾನೂನು ಚೌಕಟ್ಟಿನಲ್ಲಿ ದಾರಿ ಹುಡುಕುತ್ತಿದ್ದೇವೆ. ಜಿಬಿಎ ಮಾತ್ರವಲ್ಲದೇ ಇಡೀ ರಾಜ್ಯಕ್ಕೆ ಅನ್ವಯ ಆಗುವಂತೆ ಮಾಡಲು ಕಾನೂನು ತಜ್ಞರ ಜತೆ ಚರ್ಚಿಸಿ, ಪ್ರಸ್ತಾವನೆ ಸಲ್ಲಿಸಲು ಕಾನೂನು ಇಲಾಖೆಗೆ ಸೂಚಿಸಿದ್ದೇವೆ’ ಎಂದು ಶಿವಕುಮಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>