<p><strong>ಬೆಂಗಳೂರು</strong>: ರಸ್ತೆ ಸಾರಿಗೆ ನಿಗಮಗಳ ನೌಕರರು ಮಂಗಳವಾರ ಬೆಳಿಗ್ಗೆಯಿಂದಲೇ ಮುಷ್ಕರ ಅರಂಭಿಸಿದ ಪರಿಣಾಮ ಸಾರ್ವಜನಿಕರು ಪ್ರಯಾಣಕ್ಕೆ ಬಸ್ಗಳಿಲ್ಲದೇ ಪರದಾಡಿದರು.</p><p>ಕೆಂಪೇಗೌಡ ಬಸ್ ನಿಲ್ದಾಣ ಸೇರಿದಂತೆ ಹಲವು ನಿಲ್ದಾಣಗಳಿಗೆ ಬೆಳಿಗ್ಗೆಯೇ ಬಂದ ಪ್ರಯಾಣಿಕರಿಗೆ ಬಸ್ಗಳು ಲಭ್ಯವಾದವು. </p><p>ಮಂತ್ರಾಲಯ, ಹೈದರಾಬಾದ್ ಮೈಸೂರು ಸೇರಿದಂತೆ ಕೆಲ ಭಾಗಗಳ ಬಸ್ಗಳು ಸಂಚಾರ ಅರಂಭಿಸಿದವು. ಆದರೆ, 8 ಗಂಟೆಯ ನಂತರ ಬಸ್ ಸೇವೆಗಳು ಸಂಪೂರ್ಣ ಸ್ಥಗಿತಗೊಂಡವು. </p><p>ಕೋರ್ಟ್ ಅದೇಶದಂತೆ ಮುಷ್ಕರ ಮುಂದೂಡಬಹುದು ಎಂದು ನಿರೀಕ್ಷಿಸಿ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರು ಸಂಕಷ್ಟ ಅನುಭವಿಸಿದರು.</p><p>ಮುಂಗಡ ಬುಕ್ಕಿಂಗ್ ಕಾಯ್ದಿರಿಸಿದ್ದ ಪ್ರಯಾಣಿಕರು ಮುಂಗಡ ಕಾಯ್ದಿರಿಸುವಿಕೆ ವಿಭಾಗದ ಸಿಬ್ನಂದಿ ಜತೆ ವಾಗ್ವಾದ ನಡೆದರು. ಬುಕ್ಕಿಂಗ್ ಹಣ ವಾಪಸ್ ಪಡೆಯಲು ಜನ ಸಂದಣಿ ಏರ್ಪಟ್ಟಿತ್ತು.</p><p>ನಿಯಮದಂತೆ ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ವೇತನ ಪರಿಷ್ಕರಣೆ ಮಾಡಬೇಕು. ಹಿಂದಿನ ಪರಿಷ್ಕರಣೆಯ ನಂತರ ಹೆಚ್ಚಳ ಮಾಡಲಾಗಿದ್ದ 38 ತಿಂಗಳ ವೇತನ ಬಾಕಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಸಾರಿಗೆ ನಿಗಮದ ನೌಕರರ ವಿವಿಧ ಸಂಘಟನೆಗಳು ಮುಷ್ಕರ ನಡೆಸುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಸ್ತೆ ಸಾರಿಗೆ ನಿಗಮಗಳ ನೌಕರರು ಮಂಗಳವಾರ ಬೆಳಿಗ್ಗೆಯಿಂದಲೇ ಮುಷ್ಕರ ಅರಂಭಿಸಿದ ಪರಿಣಾಮ ಸಾರ್ವಜನಿಕರು ಪ್ರಯಾಣಕ್ಕೆ ಬಸ್ಗಳಿಲ್ಲದೇ ಪರದಾಡಿದರು.</p><p>ಕೆಂಪೇಗೌಡ ಬಸ್ ನಿಲ್ದಾಣ ಸೇರಿದಂತೆ ಹಲವು ನಿಲ್ದಾಣಗಳಿಗೆ ಬೆಳಿಗ್ಗೆಯೇ ಬಂದ ಪ್ರಯಾಣಿಕರಿಗೆ ಬಸ್ಗಳು ಲಭ್ಯವಾದವು. </p><p>ಮಂತ್ರಾಲಯ, ಹೈದರಾಬಾದ್ ಮೈಸೂರು ಸೇರಿದಂತೆ ಕೆಲ ಭಾಗಗಳ ಬಸ್ಗಳು ಸಂಚಾರ ಅರಂಭಿಸಿದವು. ಆದರೆ, 8 ಗಂಟೆಯ ನಂತರ ಬಸ್ ಸೇವೆಗಳು ಸಂಪೂರ್ಣ ಸ್ಥಗಿತಗೊಂಡವು. </p><p>ಕೋರ್ಟ್ ಅದೇಶದಂತೆ ಮುಷ್ಕರ ಮುಂದೂಡಬಹುದು ಎಂದು ನಿರೀಕ್ಷಿಸಿ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರು ಸಂಕಷ್ಟ ಅನುಭವಿಸಿದರು.</p><p>ಮುಂಗಡ ಬುಕ್ಕಿಂಗ್ ಕಾಯ್ದಿರಿಸಿದ್ದ ಪ್ರಯಾಣಿಕರು ಮುಂಗಡ ಕಾಯ್ದಿರಿಸುವಿಕೆ ವಿಭಾಗದ ಸಿಬ್ನಂದಿ ಜತೆ ವಾಗ್ವಾದ ನಡೆದರು. ಬುಕ್ಕಿಂಗ್ ಹಣ ವಾಪಸ್ ಪಡೆಯಲು ಜನ ಸಂದಣಿ ಏರ್ಪಟ್ಟಿತ್ತು.</p><p>ನಿಯಮದಂತೆ ಪ್ರತಿ ನಾಲ್ಕು ವರ್ಷಗಳಿಗೆ ಒಮ್ಮೆ ವೇತನ ಪರಿಷ್ಕರಣೆ ಮಾಡಬೇಕು. ಹಿಂದಿನ ಪರಿಷ್ಕರಣೆಯ ನಂತರ ಹೆಚ್ಚಳ ಮಾಡಲಾಗಿದ್ದ 38 ತಿಂಗಳ ವೇತನ ಬಾಕಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಸಾರಿಗೆ ನಿಗಮದ ನೌಕರರ ವಿವಿಧ ಸಂಘಟನೆಗಳು ಮುಷ್ಕರ ನಡೆಸುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>