<p><strong>ಬೆಂಗಳೂರು:</strong> ಜೆ.ಪಿ ನಗರದ ಸಿಂಧೂರ ಕಲ್ಯಾಣ ಮಂಟಪದ ಸುತ್ತಮುತ್ತಲಿನ ಪ್ರದೇಶದಲ್ಲಿ ರಾಜಕಾಲುವೆ ಕಾಮಗಾರಿಯನ್ನು ವರ್ಷಾಂತ್ಯಕ್ಕೆ ಪೂರ್ಣಗೊಳಿಸಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ದಕ್ಷಿಣ ವಲಯ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸಿಂಧೂರ ಕಲ್ಯಾಣ ಮಂಟಪದಿಂದ ಕೆ-210ಕ್ಕೆ ಸಂಪರ್ಕ ಕಲ್ಪಿಸಲು 1.3 ಕಿ.ಮೀ ಉದ್ದದ ಮಳೆ ನೀರು ಹರಿಯುವ ರಾಜಕಾಲುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಪ್ರವಾಹ ಆಗುವುದನ್ನು ತಪ್ಪಿಸಬೇಕು ಎಂದರು.</p>.<p>ಹೊರ ವರ್ತುಲ ರಸ್ತೆಯ ಚರಂಡಿಗಳಲ್ಲಿ ಹೂಳೆತ್ತಿ ಸ್ವಚ್ಛತೆ ಕಾಪಾಡಬೇಕು. ಚರಂಡಿಗಳಿಂದ ತೆಗೆದ ಹೂಳನ್ನು ಸ್ಥಳದಲ್ಲಿಯೇ ಬಿಡದೆ ಕೂಡಲೇ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.</p>.<p>ಜಯನಗರದ 3ನೇ ಬ್ಲಾಕ್ನಲ್ಲಿ 5 ಟನ್ ಸಾಮರ್ಥ್ಯದ ಘನತ್ಯಾಜ್ಯ ಜೈವಿಕ ಅನಿಲ ಘಟಕವಿದೆ. ಇಂತಹ ಘಟಕಗಳನ್ನು ನಗರದ ಇತರೆ ಭಾಗಗಳಲ್ಲಿ ಸ್ಥಾಪಿಸಬೇಕು. ಕೆ.ಆರ್. ಮಾರುಕಟ್ಟೆಯಲ್ಲಿ ಸ್ಥಾಪಿಸಿದರೆ, ತ್ಯಾಜ್ಯ ನಿರ್ವಹಣಾ ಸಮಸ್ಯೆ ಬಗೆಹರಿಸಬಹುದು ಎಂದರು.</p>.<p>ವಿಲ್ಸನ್ ಗಾರ್ಡನ್ ಬಳಿಯಿರುವ ವಿದ್ಯುತ್ ಚಿತಾಗಾರಕ್ಕೆ ಅಂತ್ಯಕ್ರಿಯೆ ಮಾಡಲು ಬರುವವರಿಗಾಗಿ ಮೂಲಸೌಕರ್ಯಗಳ ವ್ಯವಸ್ಥೆ ಮಾಡಬೇಕು. ಅಲ್ಲದೇ ಹೆಚ್ಚುವರಿಯಾಗಿ ಎರಡು ಫರ್ನೆಸ್ ನಿರ್ಮಾಣ ಮಾಡಲು ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜೆ.ಪಿ ನಗರದ ಸಿಂಧೂರ ಕಲ್ಯಾಣ ಮಂಟಪದ ಸುತ್ತಮುತ್ತಲಿನ ಪ್ರದೇಶದಲ್ಲಿ ರಾಜಕಾಲುವೆ ಕಾಮಗಾರಿಯನ್ನು ವರ್ಷಾಂತ್ಯಕ್ಕೆ ಪೂರ್ಣಗೊಳಿಸಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ದಕ್ಷಿಣ ವಲಯ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸಿಂಧೂರ ಕಲ್ಯಾಣ ಮಂಟಪದಿಂದ ಕೆ-210ಕ್ಕೆ ಸಂಪರ್ಕ ಕಲ್ಪಿಸಲು 1.3 ಕಿ.ಮೀ ಉದ್ದದ ಮಳೆ ನೀರು ಹರಿಯುವ ರಾಜಕಾಲುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಪ್ರವಾಹ ಆಗುವುದನ್ನು ತಪ್ಪಿಸಬೇಕು ಎಂದರು.</p>.<p>ಹೊರ ವರ್ತುಲ ರಸ್ತೆಯ ಚರಂಡಿಗಳಲ್ಲಿ ಹೂಳೆತ್ತಿ ಸ್ವಚ್ಛತೆ ಕಾಪಾಡಬೇಕು. ಚರಂಡಿಗಳಿಂದ ತೆಗೆದ ಹೂಳನ್ನು ಸ್ಥಳದಲ್ಲಿಯೇ ಬಿಡದೆ ಕೂಡಲೇ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.</p>.<p>ಜಯನಗರದ 3ನೇ ಬ್ಲಾಕ್ನಲ್ಲಿ 5 ಟನ್ ಸಾಮರ್ಥ್ಯದ ಘನತ್ಯಾಜ್ಯ ಜೈವಿಕ ಅನಿಲ ಘಟಕವಿದೆ. ಇಂತಹ ಘಟಕಗಳನ್ನು ನಗರದ ಇತರೆ ಭಾಗಗಳಲ್ಲಿ ಸ್ಥಾಪಿಸಬೇಕು. ಕೆ.ಆರ್. ಮಾರುಕಟ್ಟೆಯಲ್ಲಿ ಸ್ಥಾಪಿಸಿದರೆ, ತ್ಯಾಜ್ಯ ನಿರ್ವಹಣಾ ಸಮಸ್ಯೆ ಬಗೆಹರಿಸಬಹುದು ಎಂದರು.</p>.<p>ವಿಲ್ಸನ್ ಗಾರ್ಡನ್ ಬಳಿಯಿರುವ ವಿದ್ಯುತ್ ಚಿತಾಗಾರಕ್ಕೆ ಅಂತ್ಯಕ್ರಿಯೆ ಮಾಡಲು ಬರುವವರಿಗಾಗಿ ಮೂಲಸೌಕರ್ಯಗಳ ವ್ಯವಸ್ಥೆ ಮಾಡಬೇಕು. ಅಲ್ಲದೇ ಹೆಚ್ಚುವರಿಯಾಗಿ ಎರಡು ಫರ್ನೆಸ್ ನಿರ್ಮಾಣ ಮಾಡಲು ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>