<p><strong>ಬೆಂಗಳೂರು</strong>: ‘ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ, ಖಾಸಗಿ ಕ್ಯಾನ್ಸರ್ ಆಸ್ಪತ್ರೆಗಳು ಬಡ–ಮಧ್ಯಮ ವರ್ಗದವರ ಜೇಬಿಗೆ ಹೊರೆಯಾಗದಂತೆ ಚಿಕಿತ್ಸಾ ಸೌಲಭ್ಯ ಒದಗಿಸಬೇಕು’ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಅಭಿಪ್ರಾಯಪಟ್ಟರು.</p>.<p>ಹೊಂಬೇಗೌಡನಗರದಲ್ಲಿ ನಿರ್ಮಾಣವಾಗಿರುವ ಎಆರ್ಸಿ ಕ್ಯಾನ್ಸರ್ ಆಸ್ಪತ್ರೆ ಭಾನುವಾರ ಕಾರ್ಯಾರಂಭ ಮಾಡಿತು. ಈ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಬದಲಾದ ಜೀವನಶೈಲಿ ಸೇರಿದಂತೆ ವಿವಿಧ ಕಾರಣಗಳಿಂದ ಕ್ಯಾನ್ಸರ್ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಇದೇ ಅವಧಿಯಲ್ಲಿ ಚಿಕಿತ್ಸಾ ಪದ್ಧತಿಯಲ್ಲಿಯೂ ಹೊಸ ಹೊಸ ಆವಿಷ್ಕಾರಗಳಾಗುತ್ತಿವೆ. ಗುಣಮಟ್ಟದ ವೈದ್ಯಕೀಯ ಚಿಕಿತ್ಸೆಗಳು ಎಲ್ಲರಿಗೂ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಬಡ–ಮಧ್ಯಮ ವರ್ಗದವರಿಗೆ ಅಗತ್ಯ ಸೇವಾಸೌಲಭ್ಯ ಒದಗಿಸುವುದು ಖಾಸಗಿ ಕ್ಯಾನ್ಸರ್ ಆಸ್ಪತ್ರೆಗಳ ಗುರಿಯಾಗಬೇಕು. ಸೇವೆಯನ್ನೇ ಆದ್ಯತೆಯನ್ನಾಗಿಸಿಕೊಂಡಿರುವ ಖಾಸಗಿ ಆಸ್ಪತ್ರೆಗಳಿಗೂ ಸರ್ಕಾರ ನೆರವು ನೀಡಬೇಕು’ ಎಂದು ಹೇಳಿದರು.</p>.<p>ಎಆರ್ಸಿ ಕ್ಯಾನ್ಸರ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀಹರಿ ಶಾಪುರ್, ‘ಕ್ಯಾನ್ಸರ್ ಚಿಕಿತ್ಸೆಯಲ್ಲಿನ ಕಂದಕ ನಿವಾರಣೆಗೆ ಈ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ. ಸಮಾಜದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ಒದಗಿಸುವುದು ಈ ಆಸ್ಪತ್ರೆಯ ಗುರಿಯಾಗಿದೆ. ಬಿಪಿಎಲ್ ಕುಟುಂಬದ ಸದಸ್ಯರು ಹಾಗೂ ಆಯುಷ್ಮಾನ್ ಯೋಜನೆ ಫಲಾನುಭವಿಗಳಿಗೆ ಇಲ್ಲಿ ಚಿಕಿತ್ಸೆ ನೀಡಲು ಕ್ರಮವಹಿಸಲಾಗುತ್ತದೆ’ ಎಂದರು.</p>.<p>ಆಸ್ಪತ್ರೆಯ ಅಧ್ಯಕ್ಷ ಡಾ.ದಿನೇಶ್ ಮಾವಿನಹಳ್ಳಿ, ವೈದ್ಯಕೀಯ ನಿರ್ದೇಶಕಿ ಡಾ.ಸಂಸ್ಕೃತಿ ಪಿ. ಮೂರ್ತಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-4-1281593638</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕ್ಯಾನ್ಸರ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಈ ಸಂದರ್ಭದಲ್ಲಿ, ಖಾಸಗಿ ಕ್ಯಾನ್ಸರ್ ಆಸ್ಪತ್ರೆಗಳು ಬಡ–ಮಧ್ಯಮ ವರ್ಗದವರ ಜೇಬಿಗೆ ಹೊರೆಯಾಗದಂತೆ ಚಿಕಿತ್ಸಾ ಸೌಲಭ್ಯ ಒದಗಿಸಬೇಕು’ ಎಂದು ಮಾಜಿ ಸಚಿವ ಟಿ.ಬಿ.ಜಯಚಂದ್ರ ಅಭಿಪ್ರಾಯಪಟ್ಟರು.</p>.<p>ಹೊಂಬೇಗೌಡನಗರದಲ್ಲಿ ನಿರ್ಮಾಣವಾಗಿರುವ ಎಆರ್ಸಿ ಕ್ಯಾನ್ಸರ್ ಆಸ್ಪತ್ರೆ ಭಾನುವಾರ ಕಾರ್ಯಾರಂಭ ಮಾಡಿತು. ಈ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಬದಲಾದ ಜೀವನಶೈಲಿ ಸೇರಿದಂತೆ ವಿವಿಧ ಕಾರಣಗಳಿಂದ ಕ್ಯಾನ್ಸರ್ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಇದೇ ಅವಧಿಯಲ್ಲಿ ಚಿಕಿತ್ಸಾ ಪದ್ಧತಿಯಲ್ಲಿಯೂ ಹೊಸ ಹೊಸ ಆವಿಷ್ಕಾರಗಳಾಗುತ್ತಿವೆ. ಗುಣಮಟ್ಟದ ವೈದ್ಯಕೀಯ ಚಿಕಿತ್ಸೆಗಳು ಎಲ್ಲರಿಗೂ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಬಡ–ಮಧ್ಯಮ ವರ್ಗದವರಿಗೆ ಅಗತ್ಯ ಸೇವಾಸೌಲಭ್ಯ ಒದಗಿಸುವುದು ಖಾಸಗಿ ಕ್ಯಾನ್ಸರ್ ಆಸ್ಪತ್ರೆಗಳ ಗುರಿಯಾಗಬೇಕು. ಸೇವೆಯನ್ನೇ ಆದ್ಯತೆಯನ್ನಾಗಿಸಿಕೊಂಡಿರುವ ಖಾಸಗಿ ಆಸ್ಪತ್ರೆಗಳಿಗೂ ಸರ್ಕಾರ ನೆರವು ನೀಡಬೇಕು’ ಎಂದು ಹೇಳಿದರು.</p>.<p>ಎಆರ್ಸಿ ಕ್ಯಾನ್ಸರ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀಹರಿ ಶಾಪುರ್, ‘ಕ್ಯಾನ್ಸರ್ ಚಿಕಿತ್ಸೆಯಲ್ಲಿನ ಕಂದಕ ನಿವಾರಣೆಗೆ ಈ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ. ಸಮಾಜದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಚಿಕಿತ್ಸೆ ಒದಗಿಸುವುದು ಈ ಆಸ್ಪತ್ರೆಯ ಗುರಿಯಾಗಿದೆ. ಬಿಪಿಎಲ್ ಕುಟುಂಬದ ಸದಸ್ಯರು ಹಾಗೂ ಆಯುಷ್ಮಾನ್ ಯೋಜನೆ ಫಲಾನುಭವಿಗಳಿಗೆ ಇಲ್ಲಿ ಚಿಕಿತ್ಸೆ ನೀಡಲು ಕ್ರಮವಹಿಸಲಾಗುತ್ತದೆ’ ಎಂದರು.</p>.<p>ಆಸ್ಪತ್ರೆಯ ಅಧ್ಯಕ್ಷ ಡಾ.ದಿನೇಶ್ ಮಾವಿನಹಳ್ಳಿ, ವೈದ್ಯಕೀಯ ನಿರ್ದೇಶಕಿ ಡಾ.ಸಂಸ್ಕೃತಿ ಪಿ. ಮೂರ್ತಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260413-4-1281593638</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>