<p><strong>ಬೆಂಗಳೂರು</strong>: ‘ಹೆಚ್ಚಿನ ಜವಾಬ್ದಾರಿಯಿಂದ ಜನಗಣತಿ ಕಾರ್ಯ ಕೈಗೊಳ್ಳಬೇಕು’ ಎಂದು ಕಂದಾಯ ಸಚಿವ ಆರ್. ಅಶೋಕ ಸಲಹೆ ನೀಡಿದರು.</p>.<p>ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ರಾಜ್ಯಮಟ್ಟದ ಪ್ರಧಾನ ಜನಗಣತಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಈ ಬಾರಿ ಮೊಬೈಲ್ ಆ್ಯಪ್ ಮೂಲಕ ಜನಗಣತಿ ಮಾಡಲಾಗುತ್ತಿದೆ. ಹೀಗಾಗಿ, ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕಾಗುತ್ತದೆ’ ಎಂದರು.</p>.<p>‘ಸರ್ಕಾರದ ಯೋಜನೆಗಳ ಜಾರಿಗೆ ಗಣತಿಯಿಂದ ಲಭ್ಯವಾಗುವ ಮಾಹಿತಿಗಳು ಅತ್ಯಂತ ಮಹತ್ವದ್ದಾಗಿದೆ. ಸೌಲಭ್ಯಗಳ ವಿತರಣೆಗೂ ಅಂಕಿ-ಅಂಶ ಆಧಾರ. ಜನಗಣತಿ ಮಾಹಿತಿ ಆಧರಿಸಿಯೇ ವಾರ್ಡ್ಗಳ ವಿಂಗಡಣೆ, ವಿಧಾನಸಭೆ, ಲೋಕಸಭೆ ಕ್ಷೇತ್ರಗಳ ಪುನರ್ರಚನೆ ಮಾಡಲಾಗುತ್ತದೆ’ ಎಂದರು.</p>.<p>‘ಕೆಳಹಂತದ ಅಧಿಕಾರಿಗಳಿಗೆ ಪ್ರಧಾನ ಜನಗಣತಿ ಅಧಿಕಾರಿಗಳು ಸೂಕ್ತ ಮಾರ್ಗದರ್ಶನ ನೀಡಬೇಕು’ ಎಂದು ಮಹಿಳಾ ಮತ್ತು ಕಲ್ಯಾಣ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.</p>.<p>ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮಾತನಾಡಿ, ‘ಸ್ವಾತಂತ್ರ್ಯದ ಬಳಿಕ ಎಂಟನೇ ಜನಗಣತಿ ನಡೆಯುತ್ತಿದೆ. ಏ. 15ರಿಂದ ಮೇ 30ರ ವರೆಗೆ ಗಣತಿ ಕಾರ್ಯ ನಡೆಯಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಹೆಚ್ಚಿನ ಜವಾಬ್ದಾರಿಯಿಂದ ಜನಗಣತಿ ಕಾರ್ಯ ಕೈಗೊಳ್ಳಬೇಕು’ ಎಂದು ಕಂದಾಯ ಸಚಿವ ಆರ್. ಅಶೋಕ ಸಲಹೆ ನೀಡಿದರು.</p>.<p>ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ರಾಜ್ಯಮಟ್ಟದ ಪ್ರಧಾನ ಜನಗಣತಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಈ ಬಾರಿ ಮೊಬೈಲ್ ಆ್ಯಪ್ ಮೂಲಕ ಜನಗಣತಿ ಮಾಡಲಾಗುತ್ತಿದೆ. ಹೀಗಾಗಿ, ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕಾಗುತ್ತದೆ’ ಎಂದರು.</p>.<p>‘ಸರ್ಕಾರದ ಯೋಜನೆಗಳ ಜಾರಿಗೆ ಗಣತಿಯಿಂದ ಲಭ್ಯವಾಗುವ ಮಾಹಿತಿಗಳು ಅತ್ಯಂತ ಮಹತ್ವದ್ದಾಗಿದೆ. ಸೌಲಭ್ಯಗಳ ವಿತರಣೆಗೂ ಅಂಕಿ-ಅಂಶ ಆಧಾರ. ಜನಗಣತಿ ಮಾಹಿತಿ ಆಧರಿಸಿಯೇ ವಾರ್ಡ್ಗಳ ವಿಂಗಡಣೆ, ವಿಧಾನಸಭೆ, ಲೋಕಸಭೆ ಕ್ಷೇತ್ರಗಳ ಪುನರ್ರಚನೆ ಮಾಡಲಾಗುತ್ತದೆ’ ಎಂದರು.</p>.<p>‘ಕೆಳಹಂತದ ಅಧಿಕಾರಿಗಳಿಗೆ ಪ್ರಧಾನ ಜನಗಣತಿ ಅಧಿಕಾರಿಗಳು ಸೂಕ್ತ ಮಾರ್ಗದರ್ಶನ ನೀಡಬೇಕು’ ಎಂದು ಮಹಿಳಾ ಮತ್ತು ಕಲ್ಯಾಣ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.</p>.<p>ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮಾತನಾಡಿ, ‘ಸ್ವಾತಂತ್ರ್ಯದ ಬಳಿಕ ಎಂಟನೇ ಜನಗಣತಿ ನಡೆಯುತ್ತಿದೆ. ಏ. 15ರಿಂದ ಮೇ 30ರ ವರೆಗೆ ಗಣತಿ ಕಾರ್ಯ ನಡೆಯಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>