ಆರೋಪಿ ಸ್ಕೂಟರ್ ಸವಾರ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯೊಬ್ಬರು ಧರಿಸಿದ್ದ ಚಿನ್ನದ ಸರ ಅಪಹರಿಸಿ ಪರಾರಿಯಾಗಿದ್ದ. ಅದನ್ನು ಗಮನಿಸಿದ ಆಟೊ ಚಾಲಕ ಹನುಮಂತ, ಸ್ಕೂಟರ್ ಸವಾರನನ್ನು ಹಿಂಬಾಲಿಸಿದ್ದಾರೆ. ಅಲ್ಲದೆ, ಡಿಕ್ಕಿ ಹೊಡೆದು ಆತನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅದೇ ವೇಳೆ ಸ್ಥಳೀಯರೂ ಅಲ್ಲಿ ಜಮಾಯಿಸಿದ್ದಾರೆ. ಕೆಲಹೊತ್ತಿನಲ್ಲಿ ಅಲ್ಲಿಗೆ ಪೊಲೀಸರು ಬಂದಿದ್ದಾರೆ.