<p><strong>ಬೆಂಗಳೂರು:</strong> ಎರಡು ಪ್ರತ್ಯೇಕ ಸರ ಕಳವು ಪ್ರಕರಣಗಳಲ್ಲಿ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಮುಖಗವಸು (ಮಾಸ್ಕ್) ಧರಿಸಿ ವಾಯುವಿಹಾರ ಮಾಡುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು ಮಾಡಿದ್ದ ಆರೋಪಿಯನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಮಮೂರ್ತಿನಗರ ನಿವಾಸಿ ಹರೀಶ್(32) ಬಂಧಿತ.</p>.<p>ಆರೋಪಿಯಂದ ₹3.50 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಏಪ್ರಿಲ್ 16ರಂದು ಠಾಣೆ ವ್ಯಾಪ್ತಿಯ ಎಚ್ಆರ್ಬಿಆರ್ ಲೇಔಟ್ನಲ್ಲಿ ಮಹಿಳೆಯೊಬ್ಬರು ವಾಯುವಿಹಾರ ಮಾಡುವಾಗ ಬೈಕ್ನಲ್ಲಿ ಬಂದ ಆರೋಪಿ ಚಿನ್ನದ ಸರ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ. ಈ ಸಂಬಂಧ ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಮತ್ತೊಂದು ಪ್ರಕರಣದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಕಸಿದು ಪರಾರಿಯಾಗಿದ್ದ ಆರೋಪಿ ನದೀಮ್ (34) ಹಾಗೂ ಆ ಸರವನ್ನು ತೆಗೆದುಕೊಂಡಿದ್ದ ಮಹಿಳೆಯನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಆರೋಪಿಗಳ ಪೈಕಿ ನದೀಮ್, ಮಾರ್ಚ್ 25ರಂದು ಕೆಂಗೇರಿ ಉಪನಗರ ಮುಖ್ಯರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಕಸಿದುಕೊಂಡು ಪರಾರಿಯಾಗಿದ್ದ. ಅದನ್ನು ಮಹಿಳೆಯೊಬ್ಬಳಿಗೆ ನೀಡಿ ವಿಲೇವಾರಿ ಮಾಡಿಸಿದ್ದ. ಹೀಗಾಗಿ ಇಬ್ಬರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎರಡು ಪ್ರತ್ಯೇಕ ಸರ ಕಳವು ಪ್ರಕರಣಗಳಲ್ಲಿ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಮುಖಗವಸು (ಮಾಸ್ಕ್) ಧರಿಸಿ ವಾಯುವಿಹಾರ ಮಾಡುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು ಮಾಡಿದ್ದ ಆರೋಪಿಯನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಮಮೂರ್ತಿನಗರ ನಿವಾಸಿ ಹರೀಶ್(32) ಬಂಧಿತ.</p>.<p>ಆರೋಪಿಯಂದ ₹3.50 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಏಪ್ರಿಲ್ 16ರಂದು ಠಾಣೆ ವ್ಯಾಪ್ತಿಯ ಎಚ್ಆರ್ಬಿಆರ್ ಲೇಔಟ್ನಲ್ಲಿ ಮಹಿಳೆಯೊಬ್ಬರು ವಾಯುವಿಹಾರ ಮಾಡುವಾಗ ಬೈಕ್ನಲ್ಲಿ ಬಂದ ಆರೋಪಿ ಚಿನ್ನದ ಸರ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ. ಈ ಸಂಬಂಧ ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಮತ್ತೊಂದು ಪ್ರಕರಣದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಕಸಿದು ಪರಾರಿಯಾಗಿದ್ದ ಆರೋಪಿ ನದೀಮ್ (34) ಹಾಗೂ ಆ ಸರವನ್ನು ತೆಗೆದುಕೊಂಡಿದ್ದ ಮಹಿಳೆಯನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಆರೋಪಿಗಳ ಪೈಕಿ ನದೀಮ್, ಮಾರ್ಚ್ 25ರಂದು ಕೆಂಗೇರಿ ಉಪನಗರ ಮುಖ್ಯರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಕಸಿದುಕೊಂಡು ಪರಾರಿಯಾಗಿದ್ದ. ಅದನ್ನು ಮಹಿಳೆಯೊಬ್ಬಳಿಗೆ ನೀಡಿ ವಿಲೇವಾರಿ ಮಾಡಿಸಿದ್ದ. ಹೀಗಾಗಿ ಇಬ್ಬರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>