<p><strong>ಬೆಂಗಳೂರು</strong>: ನಗರದಲ್ಲಿ ಪ್ರತಿನಿತ್ಯ 520 ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (ಆರ್ಡಿಎಫ್) ಸಂಗ್ರಹಿಸುತ್ತಿದ್ದು, ಇದರಲ್ಲಿ ಬಹುತೇಕ ಆರ್ಡಿಎಫ್ ಅನ್ನು ಸಿಮೆಂಟ್ ಕಾರ್ಖಾನೆಗೆ ರವಾನಿಸಲಾಗುತ್ತಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ (ಬಿಎಸ್ಡಬ್ಲ್ಯುಎಂಎಲ್) ಸಿಇಒ ಕರೀಗೌಡ ತಿಳಿಸಿದರು.</p>.<p>2025ರ ಅಕ್ಟೋಬರ್ 9ರಿಂದ 2026ರ ಫೆಬ್ರುವರಿ 26ರವರೆಗೆ ಒಟ್ಟು 19,470 ಟನ್ ಆರ್ಡಿಎಫ್ ಸಂಗ್ರಹಿಸಲಾಗಿದೆ. ಈ ಅವಧಿಯಲ್ಲಿ, ಸಿಮೆಂಟ್ ಕಾರ್ಖಾನೆ ದಾಲ್ಮಿಯಾ ಸಿಮೆಂಟ್ಸ್ಗೆ 18,625 ಟನ್ ಆರ್ಡಿಎಫ್ ರವಾನಿಸಲಾಗಿದೆ. ಸುಮಾರು ₹1.8 ಕೋಟಿ ಲಾಭ ಬರಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾಹಿತಿ ನೀಡಿದರು.</p>.<p>ನಗರದಲ್ಲಿ ಪ್ರತಿದಿನ ಸರಾಸರಿ 6,000 ಟನ್ ಘನತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಅದರಲ್ಲಿ ಸುಮಾರು 520 ಟನ್ ಆರ್ಡಿಎಫ್ ಸಂಗ್ರಹಿಸಲಾಗುತ್ತಿದ್ದು, ಈ ಪ್ರಮಾಣವನ್ನು 1,000 ಟನ್ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.</p>.<p>ಸಾರ್ವಜನಿಕ ಜಾಗೃತಿಗಾಗಿ ಕೈಗೊಂಡ ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಕಾರ್ಯಕ್ರಮಗಳ ಪರಿಣಾಮವಾಗಿ ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರೊಂದಿಗೆ, ಆರ್ಡಿಎಫ್ ಸಂಗ್ರಹಣೆಯಲ್ಲಿಯೂ ಮಹತ್ತರ ಪ್ರಗತಿ ಸಾಧಿಸಲಾಗಿದೆ. ಪ್ಲಾಸ್ಟಿಕ್ ವಿಂಗಡಣೆ ಹೆಚ್ಚಿದಂತೆ ಭೂಭರ್ತಿಗೆ ರವಾನೆಯಾಗುವ ತ್ಯಾಜ್ಯದ ಪ್ರಮಾಣ ಕ್ರಮೇಣ ಕಡಿಮೆಯಾಗುತ್ತಿದೆ. ಇದು ಘನತ್ಯಾಜ್ಯ ನಿರ್ವಹಣೆಯಲ್ಲಿ ಕೈಗೊಂಡ ದಿಟ್ಟ ಕ್ರಮಗಳ ಫಲವಾಗಿದೆ ಎಂದು ಹೇಳಿದರು.</p>.<p>2025ರ ಅಕ್ಟೋಬರ್ಗೂ ಮೊದಲು ಆರ್ಡಿಎಫ್ ಸಂಗ್ರಹ ಸುಮಾರು ಶೇ 10ರಷ್ಟಿತ್ತು. ಆ ನಂತರ ಜಾರಿಗೆ ತಂದ ಜಾಗೃತಿ ಕಾರ್ಯಕ್ರಮಗಳು ಹಾಗೂ ಕಟ್ಟುನಿಟ್ಟಿನ ಕ್ರಮಗಳ ಫಲವಾಗಿ ಆರ್ಡಿಎಫ್ ಸಂಗ್ರಹ ಪ್ರಮಾಣ ಈಗ ಶೇ 50ಕ್ಕೂ ಹೆಚ್ಚಾಗಿದೆ ಎಂದರು.</p>.<p>ದಾಲ್ಮಿಯಾ ಸಿಮೆಂಟ್ಸ್ ಘಟಕಕ್ಕೆ ಆರ್ಡಿಎಫ್ ರವಾನಿಸಲಾಗಿದೆ. ಅವರು ವಿಸ್ತೃತ ಉತ್ಪಾದಕರ ಜವಾಬ್ದಾರಿ (ಇಪಿಆರ್) ಕ್ರೆಡಿಟ್ಗಳನ್ನು ಬಿಎಸ್ಎಂಡಬ್ಲ್ಯುಎಂಎಲ್ಗೆ ನೀಡುತ್ತಾರೆ. ಇವುಗಳ ವಹಿವಾಟಿನಿಂದ ಕಂಪನಿ ಆರ್ಥಿಕವಾಗಿ ಬಲವರ್ಧನೆಯಾಗಲಿದ್ದು, ಘನತ್ಯಾಜ್ಯ ನಿರ್ವಹಣೆಗೆ ನೆರವಾಗಲಿದೆ ಎಂದು ಹೇಳಿದರು.</p>.<p>2025ರ ಡಿಸೆಂಬರ್ನಿಂದ 2026 ಜನವರಿವರೆಗೆ 3,600 ಇಪಿಆರ್ ಕ್ರೆಡಿಟ್ಗಳನ್ನು ಪಡೆದುಕೊಳ್ಳಲಾಗಿದೆ. ಇವುಗಳನ್ನು ಉತ್ಪಾದಕರು, ಆಮದುದಾರರು ಹಾಗೂ ಬ್ರ್ಯಾಂಡ್ ಮಾಲೀಕರಿಗೆ (ಪಿಐಬಿಒ), ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಗಳು-2024ರ ಅನ್ವಯ ಮಾರಾಟ ಮಾಡಿದರೆ, ₹1.80 ಕೋಟಿವರೆಗೆ ಆದಾಯ ಬರಲಿದೆ ಎಂದು ಮಾಹಿತಿ ನೀಡಿದರು.</p>.<p>ಜಿಬಿಎ ವ್ಯಾಪ್ತಿಯಲ್ಲಿ ರಸ್ತೆಬದಿ ಕಸ ಬಿಸಾಡುವ ಹಾಗೂ ಕಸ ವಿಂಗಡಿಸದೆ ನೀಡುವವರಿಂದ ಪ್ರತಿ ತಿಂಗಳು ಸರಾಸರಿ ₹60 ಲಕ್ಷ ದಂಡ ಸಂಗ್ರಹಿಸಲಾಗುತ್ತಿದೆ. ಈ ಹಣದಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೊಂದು ಟ್ರ್ಯಾಕ್ಟರ್ ಖರೀದಿಸಲಾಗಿದೆ. ಟ್ರ್ಯಾಕ್ಟರ್ಗಳ ಮೂಲಕ ಬಲ್ಕ್ ವೇಸ್ಟ್ ತೆರವುಗೊಳಿಸಲಾಗುತ್ತಿದ್ದು, ಮೂರು ತಿಂಗಳ ಅವಧಿಯಲ್ಲಿ 6,000 ಮೆಟ್ರಿಕ್ ಟನ್ಕ್ಕಿಂತ ಹೆಚ್ಚು ಬಲ್ಕ್ ವೇಸ್ಟ್ ಸಂಗ್ರಹಿಸಲಾಗಿದೆ ಎಂದು ಕರೀಗೌಡ ತಿಳಿಸಿದರು.</p>.<p><strong>‘ಸ್ವಚ್ಛ ಸರ್ವೇಕ್ಷಣ್’ ರಾಯಭಾರಿಗಳು</strong></p><p>ಜಿಬಿಎ ವ್ಯಾಪ್ತಿಯಲ್ಲಿ ‘ಸ್ವಚ್ಛ ಸರ್ವೇಕ್ಷಣ್’ ಅಭಿಯಾನದ ಅಂಗವಾಗಿ ನಾಗರಿಕರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ಪದ್ಮಶ್ರೀ ಪುರಸ್ಕೃತರಾದ ಮಂಜಮ್ಮ ಜೋಗತಿ ಚಲನಚಿತ್ರ ನಟ ಅನಿರುದ್ಧ ಜತಕರ ಹಾಗೂ ಸಾಮಾಜಿಕ ಕಾರ್ಯಕರ್ತ ಅರುಣ್ ಪೈ ಅವರನ್ನು ರಾಯಭಾರಿಗಳಾಗಿ ನೇಮಿಸಲಾಗುತ್ತಿದೆ. ಈ ಸಂಬಂಧ ಟೌನ್ಹಾಲ್ನಲ್ಲಿ ಮಾರ್ಚ್ 9ರಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಯಭಾರಿಗಳ ಮೂಲಕ ನಗರದಲ್ಲಿ ಸ್ವಚ್ಛತೆ ಕಾಪಾಡುವ ಕುರಿತು ಜನಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಕರೀಗೌಡ ತಿಳಿಸಿದರು.</p>.<p><strong>ಎರಡು ಕಡೆ ತಲಾ 100 ಎಕರೆ ಭೂಸ್ವಾಧೀನ</strong></p><p>ಸಮಗ್ರ ಘನತ್ಯಾಜ್ಯ ನಿರ್ವಹಣೆ ಯೋಜನೆಗೆ ಎರಡು ಕಡೆ ತಲಾ 100 ಎಕರೆ ಜಾಗವನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ ಎಂದು ಬಿಎಸ್ಡಬ್ಲ್ಯುಎಂಎಲ್ನ ಸಿಇಒ ಕರೀಗೌಡ ತಿಳಿಸಿದರು.</p><p>ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿಯ ಕುಂಟನಹಳ್ಳಿ ಗ್ರಾಮದಲ್ಲಿರುವ ಟೆರ್ರಾಫಾರ್ಮ್ ಪ್ರದೇಶದ ಜೊತೆಗೆ ಸರ್ಕಾರದ ಆದೇಶದಂತೆ ಎಕರೆಗೆ ₹1.57 ಕೋಟಿ ನೀಡಿ 30 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದರು.</p><p>ಬೆಂಗಳೂರು ದಕ್ಷಿಣ ವ್ಯಾಪ್ತಿಯಲ್ಲಿ ನೈಸ್ ರಸ್ತೆ ಸಮೀಪದ ಗೊಲ್ಲಹಳ್ಳಿಯಲ್ಲಿ ಸರ್ಕಾರಿ ಜಾಗವನ್ನು ಬಿಎಸ್ಡಬ್ಲ್ಯುಎಂಎಲ್ ವಶಕ್ಕೆ ಪಡೆದಿದೆ. ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು ಈ ಎರಡೂ ಕಡೆ ಘನತ್ಯಾಜ್ಯ ಸಂಸ್ಕರಣೆಯ ಪ್ರಕ್ರಿಯೆಗಳು ಆರಂಭವಾಗಲಿವೆ. ಇದರಿಂದ ತ್ಯಾಜ್ಯ ವಿಲೇವಾರಿಯ ಬಹುತೇಕ ಸಮಸ್ಯೆ ಬಗೆಹರಿಯಲಿದೆ ಎಂದು ಕರೀಗೌಡ ಹೇಳಿದರು.</p><p>ಜಿಬಿಎ ವ್ಯಾಪ್ತಿಯ ಯಾವುದೇ ಪ್ರದೇಶದಲ್ಲಿ ಕಸದ ಸಮಸ್ಯೆ ಇದ್ದರೆ ಸಹಾಯ 2.0 ತಂತ್ರಾಂಶ ಜಿಬಿಎ ಸಹಾಯವಾಣಿ ಸಂಖ್ಯೆ 1533 ಅಥವಾ ವಾಟ್ಸ್ಆ್ಯಪ್ ಚಾಟ್ಬಾಟ್ ಸಂಖ್ಯೆ 94481 97197ಕ್ಕೆ ಸಂದೇಶ ಕಳುಹಿಸಬಹುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದಲ್ಲಿ ಪ್ರತಿನಿತ್ಯ 520 ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (ಆರ್ಡಿಎಫ್) ಸಂಗ್ರಹಿಸುತ್ತಿದ್ದು, ಇದರಲ್ಲಿ ಬಹುತೇಕ ಆರ್ಡಿಎಫ್ ಅನ್ನು ಸಿಮೆಂಟ್ ಕಾರ್ಖಾನೆಗೆ ರವಾನಿಸಲಾಗುತ್ತಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ (ಬಿಎಸ್ಡಬ್ಲ್ಯುಎಂಎಲ್) ಸಿಇಒ ಕರೀಗೌಡ ತಿಳಿಸಿದರು.</p>.<p>2025ರ ಅಕ್ಟೋಬರ್ 9ರಿಂದ 2026ರ ಫೆಬ್ರುವರಿ 26ರವರೆಗೆ ಒಟ್ಟು 19,470 ಟನ್ ಆರ್ಡಿಎಫ್ ಸಂಗ್ರಹಿಸಲಾಗಿದೆ. ಈ ಅವಧಿಯಲ್ಲಿ, ಸಿಮೆಂಟ್ ಕಾರ್ಖಾನೆ ದಾಲ್ಮಿಯಾ ಸಿಮೆಂಟ್ಸ್ಗೆ 18,625 ಟನ್ ಆರ್ಡಿಎಫ್ ರವಾನಿಸಲಾಗಿದೆ. ಸುಮಾರು ₹1.8 ಕೋಟಿ ಲಾಭ ಬರಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾಹಿತಿ ನೀಡಿದರು.</p>.<p>ನಗರದಲ್ಲಿ ಪ್ರತಿದಿನ ಸರಾಸರಿ 6,000 ಟನ್ ಘನತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಅದರಲ್ಲಿ ಸುಮಾರು 520 ಟನ್ ಆರ್ಡಿಎಫ್ ಸಂಗ್ರಹಿಸಲಾಗುತ್ತಿದ್ದು, ಈ ಪ್ರಮಾಣವನ್ನು 1,000 ಟನ್ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.</p>.<p>ಸಾರ್ವಜನಿಕ ಜಾಗೃತಿಗಾಗಿ ಕೈಗೊಂಡ ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಕಾರ್ಯಕ್ರಮಗಳ ಪರಿಣಾಮವಾಗಿ ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರೊಂದಿಗೆ, ಆರ್ಡಿಎಫ್ ಸಂಗ್ರಹಣೆಯಲ್ಲಿಯೂ ಮಹತ್ತರ ಪ್ರಗತಿ ಸಾಧಿಸಲಾಗಿದೆ. ಪ್ಲಾಸ್ಟಿಕ್ ವಿಂಗಡಣೆ ಹೆಚ್ಚಿದಂತೆ ಭೂಭರ್ತಿಗೆ ರವಾನೆಯಾಗುವ ತ್ಯಾಜ್ಯದ ಪ್ರಮಾಣ ಕ್ರಮೇಣ ಕಡಿಮೆಯಾಗುತ್ತಿದೆ. ಇದು ಘನತ್ಯಾಜ್ಯ ನಿರ್ವಹಣೆಯಲ್ಲಿ ಕೈಗೊಂಡ ದಿಟ್ಟ ಕ್ರಮಗಳ ಫಲವಾಗಿದೆ ಎಂದು ಹೇಳಿದರು.</p>.<p>2025ರ ಅಕ್ಟೋಬರ್ಗೂ ಮೊದಲು ಆರ್ಡಿಎಫ್ ಸಂಗ್ರಹ ಸುಮಾರು ಶೇ 10ರಷ್ಟಿತ್ತು. ಆ ನಂತರ ಜಾರಿಗೆ ತಂದ ಜಾಗೃತಿ ಕಾರ್ಯಕ್ರಮಗಳು ಹಾಗೂ ಕಟ್ಟುನಿಟ್ಟಿನ ಕ್ರಮಗಳ ಫಲವಾಗಿ ಆರ್ಡಿಎಫ್ ಸಂಗ್ರಹ ಪ್ರಮಾಣ ಈಗ ಶೇ 50ಕ್ಕೂ ಹೆಚ್ಚಾಗಿದೆ ಎಂದರು.</p>.<p>ದಾಲ್ಮಿಯಾ ಸಿಮೆಂಟ್ಸ್ ಘಟಕಕ್ಕೆ ಆರ್ಡಿಎಫ್ ರವಾನಿಸಲಾಗಿದೆ. ಅವರು ವಿಸ್ತೃತ ಉತ್ಪಾದಕರ ಜವಾಬ್ದಾರಿ (ಇಪಿಆರ್) ಕ್ರೆಡಿಟ್ಗಳನ್ನು ಬಿಎಸ್ಎಂಡಬ್ಲ್ಯುಎಂಎಲ್ಗೆ ನೀಡುತ್ತಾರೆ. ಇವುಗಳ ವಹಿವಾಟಿನಿಂದ ಕಂಪನಿ ಆರ್ಥಿಕವಾಗಿ ಬಲವರ್ಧನೆಯಾಗಲಿದ್ದು, ಘನತ್ಯಾಜ್ಯ ನಿರ್ವಹಣೆಗೆ ನೆರವಾಗಲಿದೆ ಎಂದು ಹೇಳಿದರು.</p>.<p>2025ರ ಡಿಸೆಂಬರ್ನಿಂದ 2026 ಜನವರಿವರೆಗೆ 3,600 ಇಪಿಆರ್ ಕ್ರೆಡಿಟ್ಗಳನ್ನು ಪಡೆದುಕೊಳ್ಳಲಾಗಿದೆ. ಇವುಗಳನ್ನು ಉತ್ಪಾದಕರು, ಆಮದುದಾರರು ಹಾಗೂ ಬ್ರ್ಯಾಂಡ್ ಮಾಲೀಕರಿಗೆ (ಪಿಐಬಿಒ), ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ನಿಯಮಗಳು-2024ರ ಅನ್ವಯ ಮಾರಾಟ ಮಾಡಿದರೆ, ₹1.80 ಕೋಟಿವರೆಗೆ ಆದಾಯ ಬರಲಿದೆ ಎಂದು ಮಾಹಿತಿ ನೀಡಿದರು.</p>.<p>ಜಿಬಿಎ ವ್ಯಾಪ್ತಿಯಲ್ಲಿ ರಸ್ತೆಬದಿ ಕಸ ಬಿಸಾಡುವ ಹಾಗೂ ಕಸ ವಿಂಗಡಿಸದೆ ನೀಡುವವರಿಂದ ಪ್ರತಿ ತಿಂಗಳು ಸರಾಸರಿ ₹60 ಲಕ್ಷ ದಂಡ ಸಂಗ್ರಹಿಸಲಾಗುತ್ತಿದೆ. ಈ ಹಣದಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೊಂದು ಟ್ರ್ಯಾಕ್ಟರ್ ಖರೀದಿಸಲಾಗಿದೆ. ಟ್ರ್ಯಾಕ್ಟರ್ಗಳ ಮೂಲಕ ಬಲ್ಕ್ ವೇಸ್ಟ್ ತೆರವುಗೊಳಿಸಲಾಗುತ್ತಿದ್ದು, ಮೂರು ತಿಂಗಳ ಅವಧಿಯಲ್ಲಿ 6,000 ಮೆಟ್ರಿಕ್ ಟನ್ಕ್ಕಿಂತ ಹೆಚ್ಚು ಬಲ್ಕ್ ವೇಸ್ಟ್ ಸಂಗ್ರಹಿಸಲಾಗಿದೆ ಎಂದು ಕರೀಗೌಡ ತಿಳಿಸಿದರು.</p>.<p><strong>‘ಸ್ವಚ್ಛ ಸರ್ವೇಕ್ಷಣ್’ ರಾಯಭಾರಿಗಳು</strong></p><p>ಜಿಬಿಎ ವ್ಯಾಪ್ತಿಯಲ್ಲಿ ‘ಸ್ವಚ್ಛ ಸರ್ವೇಕ್ಷಣ್’ ಅಭಿಯಾನದ ಅಂಗವಾಗಿ ನಾಗರಿಕರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ಪದ್ಮಶ್ರೀ ಪುರಸ್ಕೃತರಾದ ಮಂಜಮ್ಮ ಜೋಗತಿ ಚಲನಚಿತ್ರ ನಟ ಅನಿರುದ್ಧ ಜತಕರ ಹಾಗೂ ಸಾಮಾಜಿಕ ಕಾರ್ಯಕರ್ತ ಅರುಣ್ ಪೈ ಅವರನ್ನು ರಾಯಭಾರಿಗಳಾಗಿ ನೇಮಿಸಲಾಗುತ್ತಿದೆ. ಈ ಸಂಬಂಧ ಟೌನ್ಹಾಲ್ನಲ್ಲಿ ಮಾರ್ಚ್ 9ರಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಯಭಾರಿಗಳ ಮೂಲಕ ನಗರದಲ್ಲಿ ಸ್ವಚ್ಛತೆ ಕಾಪಾಡುವ ಕುರಿತು ಜನಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಕರೀಗೌಡ ತಿಳಿಸಿದರು.</p>.<p><strong>ಎರಡು ಕಡೆ ತಲಾ 100 ಎಕರೆ ಭೂಸ್ವಾಧೀನ</strong></p><p>ಸಮಗ್ರ ಘನತ್ಯಾಜ್ಯ ನಿರ್ವಹಣೆ ಯೋಜನೆಗೆ ಎರಡು ಕಡೆ ತಲಾ 100 ಎಕರೆ ಜಾಗವನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ ಎಂದು ಬಿಎಸ್ಡಬ್ಲ್ಯುಎಂಎಲ್ನ ಸಿಇಒ ಕರೀಗೌಡ ತಿಳಿಸಿದರು.</p><p>ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿಯ ಕುಂಟನಹಳ್ಳಿ ಗ್ರಾಮದಲ್ಲಿರುವ ಟೆರ್ರಾಫಾರ್ಮ್ ಪ್ರದೇಶದ ಜೊತೆಗೆ ಸರ್ಕಾರದ ಆದೇಶದಂತೆ ಎಕರೆಗೆ ₹1.57 ಕೋಟಿ ನೀಡಿ 30 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದರು.</p><p>ಬೆಂಗಳೂರು ದಕ್ಷಿಣ ವ್ಯಾಪ್ತಿಯಲ್ಲಿ ನೈಸ್ ರಸ್ತೆ ಸಮೀಪದ ಗೊಲ್ಲಹಳ್ಳಿಯಲ್ಲಿ ಸರ್ಕಾರಿ ಜಾಗವನ್ನು ಬಿಎಸ್ಡಬ್ಲ್ಯುಎಂಎಲ್ ವಶಕ್ಕೆ ಪಡೆದಿದೆ. ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು ಈ ಎರಡೂ ಕಡೆ ಘನತ್ಯಾಜ್ಯ ಸಂಸ್ಕರಣೆಯ ಪ್ರಕ್ರಿಯೆಗಳು ಆರಂಭವಾಗಲಿವೆ. ಇದರಿಂದ ತ್ಯಾಜ್ಯ ವಿಲೇವಾರಿಯ ಬಹುತೇಕ ಸಮಸ್ಯೆ ಬಗೆಹರಿಯಲಿದೆ ಎಂದು ಕರೀಗೌಡ ಹೇಳಿದರು.</p><p>ಜಿಬಿಎ ವ್ಯಾಪ್ತಿಯ ಯಾವುದೇ ಪ್ರದೇಶದಲ್ಲಿ ಕಸದ ಸಮಸ್ಯೆ ಇದ್ದರೆ ಸಹಾಯ 2.0 ತಂತ್ರಾಂಶ ಜಿಬಿಎ ಸಹಾಯವಾಣಿ ಸಂಖ್ಯೆ 1533 ಅಥವಾ ವಾಟ್ಸ್ಆ್ಯಪ್ ಚಾಟ್ಬಾಟ್ ಸಂಖ್ಯೆ 94481 97197ಕ್ಕೆ ಸಂದೇಶ ಕಳುಹಿಸಬಹುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>