‘ಕನ್ನಡ ಚಿತ್ರೋದ್ಯಮಕ್ಕೆ ನೀಡಿರುವ ಕೊಡುಗೆಗಾಗಿ ವಿ. ರವಿಚಂದ್ರನ್ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿನ ಅನುಪಮ ಸೇವೆಗಾಗಿ ಎಂ.ಆರ್. ಜೈಶಂಕರ್ ಅವರಿಗೆ ಡಿ.ಲಿಟ್. ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿನ ಅತ್ಯುತ್ತಮ ಸೇವೆಗಾಗಿ ಡಾ. ಸತ್ಯನಾರಾಯಣ ಅವರಿಗೆ ಡಿ.ಎಸ್ಸಿ. ಪದವಿ ನೀಡಲಾಗುವುದು’ ಎಂದು ಕುಲಪತಿ ಪ್ರೊ. ಲಿಂಗರಾಜ ಗಾಂಧಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.