ಠಾಣೆಗಳಿಗೆ ಸಂದೇಶ ರವಾನಿಸಿರುವ ಅವರು, ‘ಕೊರೊನಾ ವೈರಾಣು ಬಗ್ಗೆ ನಾವೆಲ್ಲರೂ ಜನರಲ್ಲಿ ಅರಿವು ಮೂಡಿಸುತ್ತಿದ್ದೇವೆ. ಪ್ರತಿಯೊಂದು ಸ್ಥಳದಲ್ಲೂ ಭದ್ರತೆ ಒದಗಿಸುತ್ತಿದ್ದೇವೆ. ಕೊರೊನಾ ಯೋಧರಿಗೂ ವೈರಾಣು ಬಿಡುತ್ತಿಲ್ಲ. ನಾವೆಲ್ಲರೂ ಜಾಗೃತರಾಗಿಬೇಕು. ಹಿರಿಯ ಅಧಿಕಾರಿಗಳು ತಮ್ಮ ಸಿಬ್ಬಂದಿಯನ್ನು ಆರೋಗ್ಯವಾಗಿರುವಂತೆ ನೋಡಿಕೊಂಡು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು’ ಎಂದರು.