<p><strong>ಬೆಂಗಳೂರು:</strong> ಟೀ ಮತ್ತು ಸಿಗರೇಟ್ ತೆಗೆದುಕೊಂಡಿದ್ದಕ್ಕೆ ಹಣ ಕೇಳಿದ ಕಾಂಡಿಮೆಂಟ್ಸ್ ಮಾಲೀಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬ್ಯಾಟರಾಯನ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.</p>.<p>ಸೋಮವಾರ ಬೆಳಗಿನ ಜಾವ ಬಿಎಚ್ಇಎಲ್ ಎದುರುಗಡೆ ಇರುವ ಕಾಂಡಿಮೆಂಟ್ಸ್ವೊಂದರಲ್ಲಿ ಆರೋಪಿಗಳು ಟೀ ಮತ್ತು ಸಿಗರೇಟ್ ತೆಗೆದುಕೊಂಡಿದ್ದಾರೆ. ಅಂಗಡಿ ಮಾಲೀಕ ಪ್ರದೀಪ್ ಅವರು ಹಣ ನೀಡುವಂತೆ ಕೇಳುತ್ತಿದಂತೆ ಅವರ ಮೇಲೆ ಹಲ್ಲೆ ನಡೆಸಿ, ಬಾಟಲಿಗಳನ್ನು ಒಡೆದು ಹಾಕಿ ಗಲಾಟೆ ಮಾಡಿದ್ದಾರೆ.</p>.<p>ಪೊಲೀಸರಿಗೆ ದೂರು ನೀಡದಂತೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಹಲ್ಲೆಯ ದೃಶ್ಯ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-4-534092428</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಟೀ ಮತ್ತು ಸಿಗರೇಟ್ ತೆಗೆದುಕೊಂಡಿದ್ದಕ್ಕೆ ಹಣ ಕೇಳಿದ ಕಾಂಡಿಮೆಂಟ್ಸ್ ಮಾಲೀಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬ್ಯಾಟರಾಯನ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.</p>.<p>ಸೋಮವಾರ ಬೆಳಗಿನ ಜಾವ ಬಿಎಚ್ಇಎಲ್ ಎದುರುಗಡೆ ಇರುವ ಕಾಂಡಿಮೆಂಟ್ಸ್ವೊಂದರಲ್ಲಿ ಆರೋಪಿಗಳು ಟೀ ಮತ್ತು ಸಿಗರೇಟ್ ತೆಗೆದುಕೊಂಡಿದ್ದಾರೆ. ಅಂಗಡಿ ಮಾಲೀಕ ಪ್ರದೀಪ್ ಅವರು ಹಣ ನೀಡುವಂತೆ ಕೇಳುತ್ತಿದಂತೆ ಅವರ ಮೇಲೆ ಹಲ್ಲೆ ನಡೆಸಿ, ಬಾಟಲಿಗಳನ್ನು ಒಡೆದು ಹಾಕಿ ಗಲಾಟೆ ಮಾಡಿದ್ದಾರೆ.</p>.<p>ಪೊಲೀಸರಿಗೆ ದೂರು ನೀಡದಂತೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಹಲ್ಲೆಯ ದೃಶ್ಯ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-4-534092428</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>