<p><strong>ಬೆಂಗಳೂರು:</strong> ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ 14ರಿಂದ 24ರ ಅವಧಿಯಲ್ಲಿ ಚುನಾವಣೆ ನಡೆಸಲಾಗುವುದು. ಇನ್ನೊಂದು ವಾರದಲ್ಲಿ ದಿನಾಂಕ ಪ್ರಕಟಿಸಿ, ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಿ.ಎಸ್. ಸಂಗ್ರೇಶಿ ಹೇಳಿದರು.</p>.<p>ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್, ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಹರೀಶ್ ಕುಮಾರ್, ನಗರ ಪಾಲಿಕೆಗಳ ಆಯುಕ್ತರಾದ ಡಿ.ಎಸ್. ರಮೇಶ್, ಪೊಮ್ಮಲ ಸುನಿಲ್ ಕುಮಾರ್, ಕೆ.ವಿ. ರಾಜೇಂದ್ರ ಸೇರಿದಂತೆ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳ ಜತೆಗೆ ಶುಕ್ರವಾರ ಸಮಾಲೋಚನೆ ನಡೆಸಿದ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದರು.</p>.<p>‘ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಹಿರಿಯ ಅಧಿಕಾರಿಗಳು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಮಳೆಗಾಲ, ಪರೀಕ್ಷೆ, ಜನಗಣತಿ, ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್), ಸಿಬ್ಬಂದಿ ಕೊರತೆ ಇರುವುದರಿಂದ ಸ್ವಲ್ಪ ಕಾಲ ಮುಂದೂಡುವಂತೆ ಜಿಬಿಎ ಮನವಿ ಸಲ್ಲಿಸಿದೆ. ಆದರೆ, ಸುಪ್ರೀಂ ಕೋರ್ಟ್ನ ಸ್ಪಷ್ಟ ನಿರ್ದೇಶನ ಇರುವುದರಿಂದ ಜೂನ್ 30ರೊಳಗೆ ಚುನಾವಣೆ ಪ್ರಕ್ರಿಯೆ ಮುಗಿಸಲೇಬೇಕು. ಹಾಗಾಗಿ ಚುನಾವಣೆ ಮುಂದೂಡುವ ಅಧಿಕಾರ ನನಗೆ ಇಲ್ಲ’ ತಿಳಿಸಿದರು.</p>.<p>‘ಜೂನ್ 14ರಿಂದ 24ರ ಅವಧಿಯಲ್ಲಿ ಮತದಾನಕ್ಕೆ ಒಂದು ದಿನಾಂಕ ತಿಳಿಸುವಂತೆ ಜಿಬಿಎಗೆ ಕೇಳಿದ್ದೇವೆ. ಇದು ಜಿಬಿಜಿಎ ಕಾಯ್ದೆಯಲ್ಲಿನ ಸೆಕ್ಷನ್ 34ರ ಪ್ರಕಾರ ಜಿಬಿಎ ಮುಖ್ಯ ಆಯುಕ್ತರೊಂದಿಗೆ ಸಮಾಲೋಚನೆ ಸಭೆ ನಡೆಸಲಾಗಿದೆ. ಮುಂದಿನ ಒಂದು ವಾರ ಅಥವಾ ಹತ್ತು ದಿನದಲ್ಲಿ ಅವರು ದಿನಾಂಕ ದಿನಾಂಕ ತಿಳಿಸಲಿ, ಬಿಡಲಿ, ಆಯೋಗದ ಅಧಿಕಾರ ಬಳಸಿ, ಚುನಾವಣೆಯ ದಿನಾಂಕವನ್ನು ಘೋಷಿಸಲಾಗುವುದು’ ಎಂದರು.</p>.<p>‘ಚುನಾವಣೆಗೆ ಮತಪತ್ರ ಬಳಸಲಾಗುತ್ತದೆ ಎಂಬುದನ್ನು ಈ ಹಿಂದೆಯೇ ಹೇಳಲಾಗಿದೆ. ಎಲ್ಲ ವಿವರಗಳನ್ನು ಚುನಾವಣೆಯ ದಿನಾಂಕ ಪ್ರಕಟಿಸುವ ದಿನದಂದು ನೀಡಲಾಗುವುದು’ ಎಂದು ಹೇಳಿದರು.</p>.<p>‘ನಮ್ಮ ಮುಂದೆ ಈಗ ಇರುವುದು ನಗರ ಪಾಲಿಕೆಗಳ ಚುನಾವಣೆ. ಸುಪ್ರೀಂ ಕೋರ್ಟ್ನ ತೂಗುಗತ್ತಿ ನಮ್ಮ ಮೇಲೆ ಇದೆ. ಕೋರ್ಟ್ ಆದೇಶ ಪಾಲನೆ ಮಾಡಲಾಗುವುದು’ ಎಂದರು.</p>.<div><blockquote>ಐದೂ ನಗರ ಪಾಲಿಕೆ ಚುನಾವಣೆ ಸಿದ್ಧತೆಗಳ ಕುರಿತಂತೆ ಚುನಾವಣಾ ಆಯೋಗದ ಆಯುಕ್ತರಿಗೆ ಮಾಹಿತಿ ನೀಡಲಾಗಿದೆ. ಆಯೋಗ ಅಂತಿಮ ತೀರ್ಮಾನ ಕೈಗೊಳ್ಳಲಿದೆ. </blockquote><span class="attribution">ಮಹೇಶ್ವರ ರಾವ್ ಜಿಬಿಎ ಮುಖ್ಯ ಆಯುಕ್ತ</span></div>.<h2> ‘ಆಯೋಗದಲ್ಲಿ ಹಣವಿದೆ’</h2>.<p> ‘ಜಿಬಿಎ ಅಧಿಕಾರಿಗಳು ಸಮಸ್ಯೆ ಹೇಳಿಕೊಂಡ ಮಾತ್ರಕ್ಕೆ ಚುನಾವಣೆಗೆ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂಬ ಮಾತನ್ನು ಒಪ್ಪುವುದಿಲ್ಲ. ಹಣ ಹಾಗೂ ಸಿಬ್ಬಂದಿ ನೀಡದಿದ್ದರೆ ಅಸಹಕಾರವಾಗುತ್ತದೆ. ಆದರೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುತ್ತಿದೆ. ತಾಂತ್ರಿಕ ಕಾರಣದಿಂದ ಅನುದಾನ ಬರುವುದು ಸ್ವಲ್ಪ ವಿಳಂಬವಾಗಿರಬಹುದು. ಸರ್ಕಾರ ಆಯೋಗಕ್ಕೆ ಅನುದಾನ ನೀಡಿದೆ’ ಎಂದು ಸಂಗ್ರೇಶಿ ಸ್ಪಷ್ಟಪಡಿಸಿದರು. </p>.<h2> ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ದ</h2>.<p> ‘ಅವಧಿ ಮುಗಿದಿರುವ ಎಲ್ಲ ಜಿಲ್ಲಾ ಪಂಚಾಯ್ತಿ ತಾಲ್ಲೂಕು ಪಂಚಾಯ್ತಿ ಹಾಗೂ ಗ್ರಾಮ ಪಂಚಾಯಿತಿ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಆಯೋಗ ಸಿದ್ಧವಿದೆ’ ಎಂದು ಜಿ.ಎಸ್. ಸಂಗ್ರೇಶಿ ತಿಳಿಸಿದರು. ‘ಕೆಲವು ತಾಂತ್ರಿಕ ತೊಂದರೆಗಳಿಂದಾಗಿ ಚುನಾವಣೆ ವಿಳಂಬವಾಗಿದೆ. ಮೀಸಲಾತಿ ಕ್ಷೇತ್ರ ಪುನರ್ ವಿಂಗಡಣೆ ಅಂತಿಮಗೊಳ್ಳುತ್ತಿದ್ದಂತೆ ಚುನಾವಣೆ ನಡೆಸಲಾಗುವುದು. ಈ ಸಂಬಂಧ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ 14ರಿಂದ 24ರ ಅವಧಿಯಲ್ಲಿ ಚುನಾವಣೆ ನಡೆಸಲಾಗುವುದು. ಇನ್ನೊಂದು ವಾರದಲ್ಲಿ ದಿನಾಂಕ ಪ್ರಕಟಿಸಿ, ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಿ.ಎಸ್. ಸಂಗ್ರೇಶಿ ಹೇಳಿದರು.</p>.<p>ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್, ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಹರೀಶ್ ಕುಮಾರ್, ನಗರ ಪಾಲಿಕೆಗಳ ಆಯುಕ್ತರಾದ ಡಿ.ಎಸ್. ರಮೇಶ್, ಪೊಮ್ಮಲ ಸುನಿಲ್ ಕುಮಾರ್, ಕೆ.ವಿ. ರಾಜೇಂದ್ರ ಸೇರಿದಂತೆ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳ ಜತೆಗೆ ಶುಕ್ರವಾರ ಸಮಾಲೋಚನೆ ನಡೆಸಿದ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದರು.</p>.<p>‘ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಹಿರಿಯ ಅಧಿಕಾರಿಗಳು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಮಳೆಗಾಲ, ಪರೀಕ್ಷೆ, ಜನಗಣತಿ, ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್), ಸಿಬ್ಬಂದಿ ಕೊರತೆ ಇರುವುದರಿಂದ ಸ್ವಲ್ಪ ಕಾಲ ಮುಂದೂಡುವಂತೆ ಜಿಬಿಎ ಮನವಿ ಸಲ್ಲಿಸಿದೆ. ಆದರೆ, ಸುಪ್ರೀಂ ಕೋರ್ಟ್ನ ಸ್ಪಷ್ಟ ನಿರ್ದೇಶನ ಇರುವುದರಿಂದ ಜೂನ್ 30ರೊಳಗೆ ಚುನಾವಣೆ ಪ್ರಕ್ರಿಯೆ ಮುಗಿಸಲೇಬೇಕು. ಹಾಗಾಗಿ ಚುನಾವಣೆ ಮುಂದೂಡುವ ಅಧಿಕಾರ ನನಗೆ ಇಲ್ಲ’ ತಿಳಿಸಿದರು.</p>.<p>‘ಜೂನ್ 14ರಿಂದ 24ರ ಅವಧಿಯಲ್ಲಿ ಮತದಾನಕ್ಕೆ ಒಂದು ದಿನಾಂಕ ತಿಳಿಸುವಂತೆ ಜಿಬಿಎಗೆ ಕೇಳಿದ್ದೇವೆ. ಇದು ಜಿಬಿಜಿಎ ಕಾಯ್ದೆಯಲ್ಲಿನ ಸೆಕ್ಷನ್ 34ರ ಪ್ರಕಾರ ಜಿಬಿಎ ಮುಖ್ಯ ಆಯುಕ್ತರೊಂದಿಗೆ ಸಮಾಲೋಚನೆ ಸಭೆ ನಡೆಸಲಾಗಿದೆ. ಮುಂದಿನ ಒಂದು ವಾರ ಅಥವಾ ಹತ್ತು ದಿನದಲ್ಲಿ ಅವರು ದಿನಾಂಕ ದಿನಾಂಕ ತಿಳಿಸಲಿ, ಬಿಡಲಿ, ಆಯೋಗದ ಅಧಿಕಾರ ಬಳಸಿ, ಚುನಾವಣೆಯ ದಿನಾಂಕವನ್ನು ಘೋಷಿಸಲಾಗುವುದು’ ಎಂದರು.</p>.<p>‘ಚುನಾವಣೆಗೆ ಮತಪತ್ರ ಬಳಸಲಾಗುತ್ತದೆ ಎಂಬುದನ್ನು ಈ ಹಿಂದೆಯೇ ಹೇಳಲಾಗಿದೆ. ಎಲ್ಲ ವಿವರಗಳನ್ನು ಚುನಾವಣೆಯ ದಿನಾಂಕ ಪ್ರಕಟಿಸುವ ದಿನದಂದು ನೀಡಲಾಗುವುದು’ ಎಂದು ಹೇಳಿದರು.</p>.<p>‘ನಮ್ಮ ಮುಂದೆ ಈಗ ಇರುವುದು ನಗರ ಪಾಲಿಕೆಗಳ ಚುನಾವಣೆ. ಸುಪ್ರೀಂ ಕೋರ್ಟ್ನ ತೂಗುಗತ್ತಿ ನಮ್ಮ ಮೇಲೆ ಇದೆ. ಕೋರ್ಟ್ ಆದೇಶ ಪಾಲನೆ ಮಾಡಲಾಗುವುದು’ ಎಂದರು.</p>.<div><blockquote>ಐದೂ ನಗರ ಪಾಲಿಕೆ ಚುನಾವಣೆ ಸಿದ್ಧತೆಗಳ ಕುರಿತಂತೆ ಚುನಾವಣಾ ಆಯೋಗದ ಆಯುಕ್ತರಿಗೆ ಮಾಹಿತಿ ನೀಡಲಾಗಿದೆ. ಆಯೋಗ ಅಂತಿಮ ತೀರ್ಮಾನ ಕೈಗೊಳ್ಳಲಿದೆ. </blockquote><span class="attribution">ಮಹೇಶ್ವರ ರಾವ್ ಜಿಬಿಎ ಮುಖ್ಯ ಆಯುಕ್ತ</span></div>.<h2> ‘ಆಯೋಗದಲ್ಲಿ ಹಣವಿದೆ’</h2>.<p> ‘ಜಿಬಿಎ ಅಧಿಕಾರಿಗಳು ಸಮಸ್ಯೆ ಹೇಳಿಕೊಂಡ ಮಾತ್ರಕ್ಕೆ ಚುನಾವಣೆಗೆ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂಬ ಮಾತನ್ನು ಒಪ್ಪುವುದಿಲ್ಲ. ಹಣ ಹಾಗೂ ಸಿಬ್ಬಂದಿ ನೀಡದಿದ್ದರೆ ಅಸಹಕಾರವಾಗುತ್ತದೆ. ಆದರೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುತ್ತಿದೆ. ತಾಂತ್ರಿಕ ಕಾರಣದಿಂದ ಅನುದಾನ ಬರುವುದು ಸ್ವಲ್ಪ ವಿಳಂಬವಾಗಿರಬಹುದು. ಸರ್ಕಾರ ಆಯೋಗಕ್ಕೆ ಅನುದಾನ ನೀಡಿದೆ’ ಎಂದು ಸಂಗ್ರೇಶಿ ಸ್ಪಷ್ಟಪಡಿಸಿದರು. </p>.<h2> ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ದ</h2>.<p> ‘ಅವಧಿ ಮುಗಿದಿರುವ ಎಲ್ಲ ಜಿಲ್ಲಾ ಪಂಚಾಯ್ತಿ ತಾಲ್ಲೂಕು ಪಂಚಾಯ್ತಿ ಹಾಗೂ ಗ್ರಾಮ ಪಂಚಾಯಿತಿ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಆಯೋಗ ಸಿದ್ಧವಿದೆ’ ಎಂದು ಜಿ.ಎಸ್. ಸಂಗ್ರೇಶಿ ತಿಳಿಸಿದರು. ‘ಕೆಲವು ತಾಂತ್ರಿಕ ತೊಂದರೆಗಳಿಂದಾಗಿ ಚುನಾವಣೆ ವಿಳಂಬವಾಗಿದೆ. ಮೀಸಲಾತಿ ಕ್ಷೇತ್ರ ಪುನರ್ ವಿಂಗಡಣೆ ಅಂತಿಮಗೊಳ್ಳುತ್ತಿದ್ದಂತೆ ಚುನಾವಣೆ ನಡೆಸಲಾಗುವುದು. ಈ ಸಂಬಂಧ ಹೈಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>