‘ದೂರುದಾರ ಚರಿತ್, ಮನೆಯ ಕಸವನ್ನು ಖಾಲಿ ಜಾಗದಲ್ಲಿ ಎಸೆದಿದ್ದರು. ಅದನ್ನು ನೋಡಿದ್ದ ಸ್ಥಳೀಯರೊಬ್ಬರು, ‘ಇಲ್ಲಿ ಕಸ ಏಕೆ ಎಸೆಯುತ್ತಿದ್ದೀರಾ? ಇದು ಸರಿಯಲ್ಲ, ಬಿಬಿಎಂಪಿ ವಾಹನಕ್ಕೆ ಕಸ ಹಾಕಬೇಕು’ ಎಂದಿದ್ದರು. ಬಳಿಕ, ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಇದೇ ಸಂದರ್ಭದಲ್ಲಿ ಚರಿತ್ ಮೇಲೆ ಆರೋಪಿಗಳು ಹಲ್ಲೆ ಮಾಡಿದ್ದರೆಂಬುದು ಗೊತ್ತಾಗಿದೆ’ ಎಂದು ಮೂಲಗಳು ತಿಳಿಸಿವೆ.