<p><strong>ಬೆಂಗಳೂರು:</strong> ಐಷಾರಾಮಿ ಜೀವನಕ್ಕಾಗಿ ಬೀಗ ಹಾಕಿದ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಮೈಸೂರಿನ ಎಚ್.ಡಿ.ಕೋಟೆ ನಿವಾಸಿ ಮಹಮ್ಮದ್ ಫಯಾಜ್(59), ಮಹಮ್ಮದ್ ಫರಾಜ್(35), ಚಿಕ್ಕಮಗಳೂರಿನ ಭೂದೇಶ್(52), ಆರ್.ಟಿ.ನಗರ ನಿವಾಸಿ ಪ್ರಸಾದ್(49) ಬಂಧಿತರು. ಆರೋಪಿಗಳಿಂದ ₹44.24 ಲಕ್ಷ ಮೌಲ್ಯದ 475 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.</p>.<p>ಆರೋಪಿಗಳ ಪೈಕಿ ಮಹಮ್ಮದ್ ಫಯಾಜ್ ವಿರುದ್ಧ 25 ಪ್ರಕರಣಗಳು, ಫರಾಜ್ ವಿರುದ್ಧ 35 ಪ್ರಕರಣ, ಭೂದೇಶ್ ವಿರುದ್ಧ ಐದು ಪ್ರಕರಣ, ಪ್ರಸಾದ್ ವಿರುದ್ಧ 18 ಪ್ರಕರಣಗಳು ದಾಖಲಾಗಿವೆ.</p>.<p>ಆರೋಪಿಗಳು ಇತ್ತೀಚೆಗೆ ಠಾಣೆ ವ್ಯಾಪ್ತಿಯ ಮೂಡಲಪಾಳ್ಯ ನಿವಾಸಿ ಬಸವರಾಜು ಎಂಬುವವರ ಮನೆಯ ಬೀಗ ಒಡೆದ ಕಳ್ಳತನ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.</p>.<p>ಬಂಧಿತರು ಕೆಲವು ವರ್ಷಗಳಿಂದ ಮನೆ ಕಳ್ಳತನ, ಬ್ಯಾಂಕ್, ಜ್ಯುವೆಲ್ಲರಿ ಶಾಪ್ ದರೋಡೆ ಮಾಡುತ್ತಿದ್ದರು. ಬೀದರ್, ಹುಬ್ಬಳ್ಳಿ, ಚಿತ್ರದುರ್ಗ, ಬೆಂಗಳೂರು, ಹಾಸನ, ಮಂಡ್ಯ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬ್ಯಾಂಕ್ ಹಾಗೂ ಜ್ಯುವೆಲ್ಲರಿ ಶಾಪ್ಗಳಲ್ಲಿ, ಮನೆಕಳ್ಳತನ ಮಾಡಿದ್ದರು ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಐಷಾರಾಮಿ ಜೀವನಕ್ಕಾಗಿ ಬೀಗ ಹಾಕಿದ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಮೈಸೂರಿನ ಎಚ್.ಡಿ.ಕೋಟೆ ನಿವಾಸಿ ಮಹಮ್ಮದ್ ಫಯಾಜ್(59), ಮಹಮ್ಮದ್ ಫರಾಜ್(35), ಚಿಕ್ಕಮಗಳೂರಿನ ಭೂದೇಶ್(52), ಆರ್.ಟಿ.ನಗರ ನಿವಾಸಿ ಪ್ರಸಾದ್(49) ಬಂಧಿತರು. ಆರೋಪಿಗಳಿಂದ ₹44.24 ಲಕ್ಷ ಮೌಲ್ಯದ 475 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.</p>.<p>ಆರೋಪಿಗಳ ಪೈಕಿ ಮಹಮ್ಮದ್ ಫಯಾಜ್ ವಿರುದ್ಧ 25 ಪ್ರಕರಣಗಳು, ಫರಾಜ್ ವಿರುದ್ಧ 35 ಪ್ರಕರಣ, ಭೂದೇಶ್ ವಿರುದ್ಧ ಐದು ಪ್ರಕರಣ, ಪ್ರಸಾದ್ ವಿರುದ್ಧ 18 ಪ್ರಕರಣಗಳು ದಾಖಲಾಗಿವೆ.</p>.<p>ಆರೋಪಿಗಳು ಇತ್ತೀಚೆಗೆ ಠಾಣೆ ವ್ಯಾಪ್ತಿಯ ಮೂಡಲಪಾಳ್ಯ ನಿವಾಸಿ ಬಸವರಾಜು ಎಂಬುವವರ ಮನೆಯ ಬೀಗ ಒಡೆದ ಕಳ್ಳತನ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.</p>.<p>ಬಂಧಿತರು ಕೆಲವು ವರ್ಷಗಳಿಂದ ಮನೆ ಕಳ್ಳತನ, ಬ್ಯಾಂಕ್, ಜ್ಯುವೆಲ್ಲರಿ ಶಾಪ್ ದರೋಡೆ ಮಾಡುತ್ತಿದ್ದರು. ಬೀದರ್, ಹುಬ್ಬಳ್ಳಿ, ಚಿತ್ರದುರ್ಗ, ಬೆಂಗಳೂರು, ಹಾಸನ, ಮಂಡ್ಯ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬ್ಯಾಂಕ್ ಹಾಗೂ ಜ್ಯುವೆಲ್ಲರಿ ಶಾಪ್ಗಳಲ್ಲಿ, ಮನೆಕಳ್ಳತನ ಮಾಡಿದ್ದರು ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>